Homeಮುಖಪುಟಮಹಾರಾಷ್ಟ್ರ | ಬಾಬರಿ ಮಸೀದಿ ಧ್ವಂಸ ಸಮರ್ಥಿಸಿದ ಶಿವಸೇನೆ : ಎಂವಿಎ ಒಕ್ಕೂಟ ತೊರೆದ ಸಮಾಜವಾದಿ...

ಮಹಾರಾಷ್ಟ್ರ | ಬಾಬರಿ ಮಸೀದಿ ಧ್ವಂಸ ಸಮರ್ಥಿಸಿದ ಶಿವಸೇನೆ : ಎಂವಿಎ ಒಕ್ಕೂಟ ತೊರೆದ ಸಮಾಜವಾದಿ ಪಕ್ಷ

- Advertisement -
- Advertisement -

ಶಿವಸೇನೆ (ಯುಬಿಟಿ) ಪಕ್ಷದ ನಾಯಕ ಬಾಬರಿ ಮಸೀದಿ ಧ್ವಂಸವನ್ನು ಸಮರ್ಥಿಸಿರುವ ಹಿನ್ನೆಲೆ, ಸಮಾಜವಾದಿ ಪಕ್ಷದ (ಎಸ್‌ಪಿ) ಮಹಾರಾಷ್ಟ್ರ ಘಟಕ ಪ್ರತಿಪಕ್ಷಗಳ ಒಕ್ಕೂಟ ಮಹಾ ವಿಕಾಸ ಅಘಾಡಿ (ಎಂವಿಎ) ಯನ್ನು ತೊರೆದಿದೆ.

ಈ ಕುರಿತು ಸಮಾಜವಾದಿ ಎಸ್‌ಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಅಬು ಅಸಿಮ್ ಅಝ್ಮಿ ಅಧಿಕೃತ ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಸ್‌ಪಿ ಇಬ್ಬರು ಶಾಸಕರನ್ನು ಹೊಂದಿದೆ. ಈ ಪೈಕಿ ರಾಜ್ಯಾಧ್ಯಕ್ಷ ಅಬು ಅಸಿಮ್ ಅಝ್ಮಿ ಅವರು ಒಬ್ಬರು. ಅಝ್ಮಿ ಮುಂಬೈನ ಮನ್ಖುರ್ದ್-ಶಿವಾಜಿನಗರದ ಶಾಸಕರಾದರೆ, ಇನ್ನೊಬ್ಬರು ರೈಸ್ ಶೇಖ್ ಥಾಣೆ ಜಿಲ್ಲೆಯ ಭಿವಂಡಿ ಪೂರ್ವ ಕ್ಷೇತ್ರದ ಶಾಸಕರಾಗಿದ್ದಾರೆ.

“ನಾವು ಆಡಳಿತಾರೂಢ ಮಹಾಯುತಿ ಅಥವಾ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿಯ ಭಾಗವಲ್ಲ. ನಮ್ಮಿಬ್ಬರಿಗಾಗಿ ಪ್ರತ್ಯೇಕ ಜಾಗವನ್ನು ಮೀಸಲಿಡುವಂತೆ ಸ್ಪೀಕರ್ ಮತ್ತು ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿಯನ್ನು ಕೋರುತ್ತೇವೆ” ಎಂದು ಅಝ್ಮಿ ಹೇಳಿದ್ದಾರೆ.

“ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಸಮಯದಲ್ಲಾಗಲಿ, ಪ್ರಚಾರದ ಸಮಯದಲ್ಲಾಗಲಿ ಎಂವಿಎ ನಮ್ಮೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ. ನಮ್ಮನ್ನು ಯಾವುದೇ ಸಭೆ, ರ್ಯಾಲಿಗಳಿಗೆ ಕರೆಯುತ್ತಿರಲಿಲ್ಲ” ಎಂದು ಅಝ್ಮಿ ತಿಳಿಸಿದ್ದಾರೆ.

“ಉದ್ದವ್ ಠಾಕ್ರೆಯವರು ಅವರ ಪಕ್ಷದ ಆಂತರಿಕ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಬಲ ಹಿಂದುತ್ವ ಪ್ರತಿಪಾದಿಸುವಂತೆ ಹೇಳಿದ್ದಾರಂತೆ. ಶಿವಸೇನೆಯವರು ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸವನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ನಾವು ಹೇಗೆ ಸಹಿಸಿಕೊಳ್ಳುವುದು?” ಎಂದು ಅಝ್ಮಿ ಪ್ರಶ್ನಿಸಿದ್ದಾರೆ.

ವರದಿಗಳ ಪ್ರಕಾರ, ಬಾಬರಿ ಮಸೀದಿ ಧ್ವಂಸವನ್ನು ಸಮರ್ಥಿಸಿ, ಸಂಭ್ರಮಿಸಿ ಶಿವಸೇನೆ (ಯುಬಿಟಿ) ಎಂಎಲ್‌ಸಿ ಹಾಗೂ ಉದ್ದವ್ ಠಾಕ್ರೆ ಅವರ ಆಪ್ತ ಸಹಾಯಕ ಮಿಲಿಂದ್ ನಾರ್ವೇಕರ್ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್ ಎಸ್‌ಪಿ ನಾಯಕರನ್ನು ಕೆರಳಿಸಿದೆ. ಮಿಲಿಂದ್ ಹಂಚಿಕೊಂಡಿದ್ದ ಪೋಸ್ಟ್‌ನಲ್ಲಿ ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ, ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಫೋಟೋಗಳಿವೆ.

“ಮಿಲಿಂದ್ ನಾರ್ವೇಕರ್ ಪೋಸ್ಟ್‌ನಿಂದ ನಮ್ಮ ಮನಸ್ಸಿಗೆ ನೋವಾಗಿದ್ದು, ಎಲ್ಲಾ ಸಮುದಾಯಗಳ ಏಕತೆ ಮತ್ತು ಗೌರವದ ಮೌಲ್ಯಗಳಿಗೆ ವಿರುದ್ಧವಾಗಿವೆ. ನಾವು ಸೌಹಾರ್ದತೆಯನ್ನು ಉತ್ತೇಜಿಸಲು ಇಲ್ಲಿದ್ದೇವೆ, ಜನರನ್ನು ವಿಭಜಿಸಲು ಅಲ್ಲ” ಎಂದು ಅಝ್ಮಿ ಹೇಳಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ | ಇವಿಎಂ ತಿರುಚಿದ ಆರೋಪ : ಪ್ರಮಾಣವಚನ ಸಮಾರಂಭ ಬಹಿಷ್ಕರಿಸಿದ ವಿಪಕ್ಷ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...