Homeಮುಖಪುಟವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

ವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನ, ಚುನಾವಣಾ ಅವ್ಯವಹಾರಗಳು ಮತ್ತು ಇವಿಎಂ ಟ್ಯಾಂಪರಿಂಗ್ ಆರೋಪದ ಮೇಲೆ ವಿರೋಧ ಪಕ್ಷದ ಸದಸ್ಯರಿಂದ ಪ್ರತಿಭಟನೆಗಳು ಕಂಡುಬಂದವು. ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಮರ್ಕಟ್ವಾಡಿ ಎಂಬ ಗ್ರಾಮವು ಚರ್ಚೆಯ ಕೇಂದ್ರಬಿಂದುವಾಯಿತು.

ಇವಿಎಂಗಳ ದುರುಪಯೋಗದ ಮೂಲಕ “ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ” ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಮರ್ಕಟವಾಡಿ ಗ್ರಾಮದ ನಿವಾಸಿಗಳು ಮತಯಂತ್ರಗಳನ್ನು ಬಳಸಿಕೊಂಡು ಅಣಕು ಮರು ಮತದಾನಕ್ಕೆ ಒತ್ತಾಯಿಸಿದರು. ನಿಷೇಧಾಜ್ಞೆ ಉಲ್ಲಂಘಿಸಿದ ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಅಪನಂಬಿಕೆ ಹರಡಿದ್ದಕ್ಕಾಗಿ ಸೊಲ್ಲಾಪುರ ಪೊಲೀಸರು ಕನಿಷ್ಠ 200 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಡಿಸೆಂಬರ್ 3 ರಂದು ಯೋಜಿಸಲಾಗಿದ್ದ ಅಣಕು ಮತದಾನ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.

ವಿಧಾನಸಭೆಯಲ್ಲಿ ಪ್ರತಿಭಟನೆಯ ನಡುವೆಯೇ ಪ್ರತಿಪಕ್ಷಗಳು ವಿಶೇಷ ಅಧಿವೇಶನವನ್ನು ಬಹಿಷ್ಕರಿಸಿದವು.

“ಇವಿಎಂಗಳ ದುರ್ಬಳಕೆಯಿಂದ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ; ಆದ್ದರಿಂದ, ಮರ್ಕಟವಾಡಿ ಗ್ರಾಮದ ಜನರು ಮತಯಂತ್ರಗಳನ್ನು ಬಳಸಿಕೊಂಡು ಅಣಕು ಮರು ಮತದಾನಕ್ಕೆ ಒತ್ತಾಯಿಸಿದ್ದಾರೆ” ಎಂದು ಎನ್‌ಸಿಪಿ (ಶರದ್ ಪವಾರ್ ಶಿಬಿರ) ಶಾಸಕ ಉತ್ತಮರಾವ್ ಜಂಕರ್ ಹೇಳಿದರು.

ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಶಾಸಕ ಆದಿತ್ಯ ಠಾಕ್ರೆ ಸರ್ಕಾರವನ್ನು ಟೀಕಿಸಿ, “ಜನರಿಂದ ಆದೇಶವನ್ನು ನೀಡಲಾಗಿಲ್ಲ. ಆದರೆ, ಇವಿಎಂಗಳು ಮತ್ತು ಭಾರತದ ಚುನಾವಣಾ ಆಯೋಗದಿಂದ ನೀಡಲಾಗಿದೆ” ಎಂದು ಹೇಳಿದ್ದಾರೆ.

ಎನ್‌ಸಿಪಿ ನಾಯಕ ಶರದ್ ಪವಾರ್ ಮರ್ಕಟ್‌ವಾಡಿಗೆ ಭೇಟಿ ನೀಡಿ ಚುನಾವಣಾ ಫಲಿತಾಂಶದ ಬಗ್ಗೆ ಕಾಳಜಿ ಹೊಂದಿರುವ ಗ್ರಾಮಸ್ಥರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಪಕ್ಷದ ರಾಜ್ಯ ಘಟಕದ ಪ್ರಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗ್ರಾಮದಿಂದ ಮೆರವಣಿಗೆಯನ್ನು ಮುನ್ನಡೆಸುವ ಸಾಧ್ಯತೆಯಿದೆ.

ಇವಿಎಂಗಳ ದುರ್ಬಳಕೆ ಆರೋಪಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು ಸರಣಿ ಪ್ರತಿಭಟನೆಗಳನ್ನು ಯೋಜಿಸಿವೆ. ಡಿಸೆಂಬರ್ 6 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯತಿಥಿಯ ಅಂಗವಾಗಿ ದಾದರ್‌ನ ಚೈತ್ಯಭೂಮಿಯಲ್ಲಿ ಮರ್ಕಟವಾಡಿಯಿಂದ ಸಾಂಕೇತಿಕವಾಗಿ ಉತ್ತಮರಾವ್ ಜಂಕರ್ ಮಣ್ಣನ್ನು ಅರ್ಪಿಸಿದರು. ಮಣ್ಣನ್ನು ದೆಹಲಿಯಲ್ಲಿರುವ ರಾಹುಲ್ ಗಾಂಧಿ ಬಳಿ ಕೊಂಡೊಯ್ಯಲು ನಿರ್ಧರಿಸಲಾಗಿದ್ದು, ಅಲ್ಲಿ ರಾಜ್‌ಘಾಟ್‌ನಲ್ಲಿ ಅರ್ಪಣೆ ಮಾಡಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಚುನಾವಣಾ ಅವ್ಯವಹಾರದ ಆರೋಪಗಳನ್ನು ತಳ್ಳಿಹಾಕಿದರು. ಅವುಗಳನ್ನು ‘ಅನ್ಯಾಯ’ ಎಂದು ಕರೆದರು. ಎಂವಿಎ 31 ಲೋಕಸಭಾ ಸ್ಥಾನಗಳನ್ನು ಗೆದ್ದಾಗ ಅವರು ಇವಿಎಂಗಳನ್ನು ಪ್ರಶ್ನಿಸಲಿಲ್ಲ. ಅವರು ಪ್ರತಿಭಟಿಸಲು ಸ್ವತಂತ್ರರು. ಆದರೆ, ಸದನದ ಕಲಾಪಗಳಲ್ಲಿ ಭಾಗವಹಿಸಲು ಪ್ರಮಾಣ ವಚನ ಸ್ವೀಕರಿಸಬೇಕು ಎಂದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಮಹಾರಾಷ್ಟ್ರ ವಿಧಾನಸಭೆಯ ಅಧಿವೇಶನ ಪ್ರಾರಂಭವಾಯಿತು. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಳಂಬ್ಕರ್ ಅವರು ಹೊಸದಾಗಿ ಆಯ್ಕೆಯಾದ 173 ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಬಹುತೇಕ ಪ್ರತಿಪಕ್ಷಗಳ 115 ಶಾಸಕರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ.

ಇದನ್ನೂ ಓದಿ; ಮಹಾರಾಷ್ಟ್ರ | ಬಾಬರಿ ಮಸೀದಿ ಧ್ವಂಸ ಸಮರ್ಥಿಸಿದ ಶಿವಸೇನೆ : ಎಂವಿಎ ಒಕ್ಕೂಟ ತೊರೆದ ಸಮಾಜವಾದಿ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...