Homeಕರ್ನಾಟಕಅಡಿಕೆ ಬೆಳೆಗಾರರನ್ನು ರಕ್ಷಿಸುವರೆ ಈ ಆರು ಜನ ಮಾನಗೇಡಿ ಸಂಸದರು?

ಅಡಿಕೆ ಬೆಳೆಗಾರರನ್ನು ರಕ್ಷಿಸುವರೆ ಈ ಆರು ಜನ ಮಾನಗೇಡಿ ಸಂಸದರು?

- Advertisement -
- Advertisement -

ಅಡಿಕೆ ಬೆಳೆಯ ಮೇಲೆ ಅವಲಂಬಿತರಾಗಿ ಬದುಕು ಕಟ್ಟಿಕೊಂಡವರಿಗೆ ಕೇಂದ್ರ ಸರ್ಕಾರಗಳ ಎಡವಟ್ಟು ವಾಣಿಜ್ಯ ನೀತಿಗಳು ಲಾಗಾಯ್ತಿನಿಂದ ಒಂದಲ್ಲಾ ಒಂದು ಆತಂಕ ತಂದೊಡ್ಡುತ್ತಲೇ ಇವೆ. ದೇಶದ ಐದಾರು ರಾಜ್ಯದಲ್ಲಿ ಅಡಿಕೆ ಬೆಳೆಯಲಾಗುತ್ತಿದೆಯಾದರೂ ಕರ್ನಾಟಕದಲ್ಲೇ ಅತೀಹೆಚ್ಚು. ದೇಶದ ಶೇಕಡಾ 61 ರಷ್ಟು ಅಡಿಕೆಯನ್ನು ಕರ್ನಾಟಕವೊಂದೇ ಉತ್ಪಾದಿಸುತ್ತದೆ. ಕರ್ನಾಟಕದಲ್ಲಿ 2.61 ಲಕ್ಷ ಹೆಕ್ಟೇರ್ ಅಡಿಕೆ ಕೃಷಿ ಪ್ರದೇಶವಿದೆ. ಅಡಿಕೆ ವಹಿವಾಟು ಲಕ್ಷಾಂತರ ಕುಟುಂಬಕ್ಕೆ ಆಧಾರ. ಆದರೆ ಅಡಿಕೆ ಬೆಲೆಯಂತೆಯೇ ಅದರ ಬೆಳೆಗಾರರ ಬದುಕೂ ಅಸ್ಥಿರ.

ಚೀನಾ, ಮಯನ್ಮಾರ್, ಇಂಡೋನೇಷ್ಯಾ ಮುಂತಾದ ವಿದೇಶಗಳಲ್ಲಿ ಕಳಪೆ ಅಡಿಕೆಯ ಆಮದಿಗೆ ಯಾವಾಗ ಅವಕಾಶ ಕೊಡಲಾಯಿತೋ ಆಗ ಸ್ಥಳೀಯ ಅಡಿಕೆ ಕೃಷಿಕರು ತತ್ತರಿಸಿಹೋದರು! ಹೊರಗಿನ ಕೆಟ್ಟ ಅಡಿಕೆ ಜತೆ ಇಲ್ಲಿಯ ಉತ್ಕೃಷ್ಟ ಗುಣಮಟ್ಟದ ಅಡಿಕೆ ಸೇರಿಸಿ ಮಧ್ಯವರ್ತಿಗಳು ದೊಡ್ಡ ಫಾಯ್ದೆ ಬಾಚಿದರು. ಈ ಗೋಲ್‌ಮಾಲ್‌ನಿಂದ ಭಾರತದ ಅದರಲ್ಲೂ ಕರ್ನಾಟಕದ ಅಡಿಕೆ ತೋಟಿಗರ ಬದುಕು ಬರ್ಬಾದ್ ಆಗಿಹೋಯಿತು. ಈ ಅನಾಹುತದ ಅರಿವಾದಾಗ ಅಂದಿನ ಯುಪಿಎ ಸರ್ಕಾರ ಆಮದು ಸುಂಕ ಹೆಚ್ಚಿಸಿತು. ಆಗ ಹೊರಗಿನ ಅಡಕೆ ಬರುವುದು ಕಮ್ಮಿಯಾಗಿ ನಮ್ಮ ರೈತರಿಗೆ ಹೆಚ್ಚು ಧಾರಣೆ ಸಿಕ್ಕಿತು.

ನಂತರ ಗುಜರಾತ್ ಮೂಲದ ಗುಟ್ಕಾ ಮಾಫಿಯಾ ಅಡಿಕೆಗೆ ಗಂಟು ಬಿದ್ದು ರೈತರನ್ನು ಕಾಡಿತು. ಸಿಗರೇಟ್ ಲಾಬಿಯೂ ಸತಾಯಿಸಿತು. ಯುಪಿಎ-2 ಸರ್ಕಾರ ಇದ್ದಾಗ ಅಡಿಕೆಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳಿವೆ ಎಂಬ ಅಫಿಡವಿಟ್ ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿತ್ತು. ಇದು ಅಡಿಕೆ ತೋಟಿಗರಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿತು. 2014ರ ಲೋಕಸಭಾ ಇಲೆಕ್ಷನ್‌ನಲ್ಲಿ ಬಿಜೆಪಿ ಕರ್ನಾಟಕದ ಮಲೆನಾಡು, ಅರೆಮಲೆನಾಡು ಮತ್ತು ಕರಾವಳಿಯಲ್ಲಿ ಈ “ಕ್ಯಾನ್ಸರ್” ಭೂತವನ್ನೇ ಅಸ್ತ್ರವಾಗಿ ಬಳಸಿ ಕಾಂಗ್ರೆಸನ್ನು ಹಣಿಯಿತು. ಕಾಂಗ್ರೆಸಿಗರು ಅಡಿಕೆ ಬೆಳೆಗಾರರ ಶತ್ರುಗಳು ಮತ್ತು ತಾವು ಮಾತ್ರ ರಕ್ಷಕರು ಎಂಬಂತೆ ಬಿಂಬಿಸಿದರು. ಗೊಂದಲದಲ್ಲಿದ್ದ ಅಡಿಕೆ ಬೆಳೆಗಾರರು ಬಿಜೆಪಿಗರ ಮೋಸಕ್ಕೆ ಮರುಳಾದರು. ಅಡಿಕೆ ಬೆಳೆಯುವ ಐದಾರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಲಾಭಮಾಡಿಕೊಂಡಿತು.

ಅಸಹಾಯಕರನ್ನು ದಿಕ್ಕು ತಪ್ಪಿಸಿ ಗೆಲ್ಲುವುದರಲ್ಲಿ ನಿಸ್ಸೀಮರಾದ ಕೇಸರಿ ಪಡೆಯವರು ಗೆದ್ದ ಬಳಿಕ ಅಡಿಕೆ ಬೆಳೆಗಾರರನ್ನು ಮರೆತೇ ಬಿಟ್ಟರು! ಅಡಿಕೆ ಬೆಳೆಗಾರರ ಸಾರಾಸಗಟು ಬೆಂಬಲದಿಂದ ಎಂಪಿಯಾಗಿದ್ದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಅನಂತಕುಮಾರ್ ಹೆಗಡೆ, ರಾಘವೇಂದ್ರ, ಜಿ.ಎಂ.ಸಿದ್ದೇಶ್, ಹಾವೇರಿಯ ಉದಾಸಿ ಇವರೆಲ್ಲರೂ ಅಡಿಕೆ ಬೆಳೆಗೊಂದು ಸ್ಥಿರ ಮಾರುಕಟ್ಟೆ ಒದಗಿಸುವ ಸಣ್ಣ ಪ್ರಯತ್ನವನ್ನೂ ಮಾಡಲಿಲ್ಲ. ಅದಕ್ಕಿಂತ ದೊಡ್ಡ ದ್ರೋಹವೆಂದರೆ, ತಮ್ಮದೇ ಸರ್ಕಾರ ಕೇಂದ್ರದಲ್ಲಿದ್ದರೂ ಸುಪ್ರೀಂ ಕೋರ್ಟ್ನಲ್ಲಿದ್ದ “ಕ್ಯಾನ್ಸರ್” ಪ್ರಮಾಣಪತ್ರ ವಾಪಸ್ ಪಡೆಯುವ ಬಗ್ಗೆಯೂ ಯೋಚಿಸಲೇ ಇಲ್ಲ!!

ಅಷ್ಟೇ ಅಲ್ಲ, ಮೋದಿ ಸರ್ಕಾರದ ಆರೋಗ್ಯ ಇಲಾಖೆಯ ಸಹಾಯಕ ಮಂತ್ರಿಣಿ ಲೋಕಸಭೆಯಲ್ಲೇ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂದಿದ್ದರು! ಮೋದಿ ಬಳಗದ ಈ ಅಭಿಪ್ರಾಯ ಕೇಸರಿ ಸರ್ಕಾರ್-2ರಲ್ಲೂ ಬದಲಾಗಿಲ್ಲ. ಇಂಥದೇ ಮಾತು ಕೆಲದಿನಗಳ ಹಿಂದೆ ಪಾರ್ಲಿಮೆಂಟ್‌ನಲ್ಲಿ ಆರೋಗ್ಯ ಇಲಾಖೆಯ ಮರಿ ಮಂತ್ರಿ ಹೇಳಿದ್ದರು. ಇಷ್ಟಾದರೂ ರಾಜ್ಯದ ಅಡಿಕೆ ಏರಿಯಾದ ಸಂಸದ ಶಿಖಾಮಣಿಗಳು ತಲೆ ಕೆಡಿಸಿಕೊಳ್ಳಲಿಲ್ಲ. ಯಾವಾಗ ಅಡಿಕೆ ತೋಟಿಗರಲ್ಲಿ ಹಾಹಾಕಾರ ಎದ್ದು ಬೊಬ್ಬೆ ಶುರುವಾಯಿತೋ ಆಗ ಬೆಚ್ಚಿಬಿದ್ದ ಸಂಸದರು ಶೋಭಕ್ಕನ ಮುಂದಿಟ್ಟುಕೊಂಡು ಆರೋಗ್ಯ ಮಂತ್ರಿಗೊಂದು ಮನವಿ ಕೊಟ್ಟು ಕೈತೊಳೆದುಕೊಂಡರು. ಆ ಫೋಟೋ ಟಿವಿ-ಪತ್ರಿಕೆಗಳಲ್ಲೂ ಹಾಕಿಸಿಕೊಂಡು ಯಥಾಪ್ರಕಾರ ತಾವು ಅಡಿಕೆ ಬೆಳೆಗಾರರ ಉದ್ಧಾರಕ್ಕೆಂದೇ ಜೀವತಳೆದ ಎಂಪಿಗಳೆಂಬಂತೆ ಪೋಸುಕೊಟ್ಟರು.

ಅಡಿಕೆ ಬೆಳೆಗಾರರು ಮಾತ್ರ ಈ ಗಿಮಿಕ್ ಸಂಸದರನ್ನು ನಂಬುವ ಸ್ಥಿತಿಯಲ್ಲಿಲ್ಲ. ಗುಟ್ಕಾ ನಿಷೇಧವಾದಾಗ ಅಡಿಕೆ ಮಾರುಕಟ್ಟೆಯಲ್ಲಿ ತಲ್ಲಣ ಆಗಿತ್ತಾದರೂ ಆರೊಗ್ಯದ ಕಾರಣಕ್ಕೆ ಏನೂ ಮಾಡದಂತಾಗಿತ್ತು. ಆದರೆ ತೀರಾ ಈಚೆಗೆ ರಾಜಸ್ಥಾನ ಸೇರಿದಂತೆ ಮುಂತಾದ ರಾಜ್ಯಗಳಲ್ಲಿ ಸುವಾಸನೆಯ ಸಿಹಿ ಅಡಿಕೆ ಮಾರಾಟವನ್ನು ನಿಷೇಧಿಸಲಾಯಿತು. ಆಗಲೂ ಅಡಕೆ ಬೆಳೆಗಾರರ ಗೋಳು ಆರು ಸಂಸದರಿಗೆ ಅರ್ಥವಾಗಲಿಲ್ಲ!! ಮೋಸಗಾರರ ಗೆಲ್ಲಿಸಿದ ಪ್ರಾರಬ್ಧಕ್ಕೆ ಅಡಿಕೆ ಬೆಳೆಗಾರರೀಗ ಹಣೆಹಣೆ ಚಚ್ಚಿಕೊಳ್ಳುತ್ತಿದ್ದಾರೆ. ಈಗ ಆಳುವ ಬಿಜೆಪಿಯವರಿಂದ ಅಡಿಕೆ ತೋಟಗಾರಿಕೆಗೆ ಆರ್‌ಸಿಇಪಿ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ)ಯ ಕಂಟಕ ಎದುರಾಗಿದೆ. ಆಗ್ನೇಯ ಏಷ್ಯಾದ 16 ದೇಶಗಳ ಜತೆ ಮುಕ್ತ ಮಾರುಕಟ್ಟೆ ವ್ಯವಹಾರಕ್ಕೆ ಭಾರತವನ್ನು ತೊಡಗಿಸಲು ಮೋದಿ ಮಾಮ ಸಿದ್ಧವಾಗಿದ್ದಾರೆ. ಇದು ಅಡಿಕೆ ಕೃಷಿಯಿಂದ ಜೀವನ ನಡೆಸುತ್ತಿರುವವರ ಬದುಕು ಬರಿದಾಗಿಸುವುದು ಗ್ಯಾರಂಟಿ.

ಮೋದಿಯ ಆರ್‌ಸಿಇಪಿ ಒಪ್ಪಂದ ಸಾಂಪ್ರದಾಯಿಕ ಅಡಿಕೆ ಬೆಳೆಗಾರರನ್ನು ಹೈರಾಣಾಗಿಸಲಿದೆ. ಸಣ್ಣ ಹಿಡುವಳಿದಾರರಿಂದ ಮುಕ್ತ ಮಾರುಕಟ್ಟೆಯಲ್ಲಿ ಪೈಪೋಟಿ ಮಾಡಲು ಸಾಧ್ಯವಿಲ್ಲ. 16 ರಾಷ್ಟ್ರಗಳ ನಡುವೆ ವಾಣಿಜ್ಯ, ಕೃಷಿ, ಹಾಲಿನ ಉತ್ಪನ್ನಗಳ ಮುಕ್ತ ಮಾರುಕಟ್ಟೆಗೆ ಅವಕಾಶ ಕೊಡುವುದು ಮತ್ತು ಆಮದು-ರಫ್ತು ನೀತಿ ಸರಳೀಕರಿಸುವುದು ಆರ್‌ಸಿಇಪಿ ಒಪ್ಪಂದದ ಮುಖ್ಯ ಉದ್ದೇಶ. ಸದ್ಯಕ್ಕೆ ದೊಡ್ಡಮಟ್ಟದ ತೆರಿಗೆ ಆಮದು ಅಡಿಕೆಗೆ ವಿಧಿಸಿದರೂ ಒಪ್ಪಂದದಂತೆ ಮುಂದಿನ 12 ವರ್ಷದಲ್ಲಿ ಎಲ್ಲಾ ಆಯಾತ-ನಿಯಾತ ಸಂಕ ತೆಗೆಯಬೇಕೆಂಬುದು ಒಪ್ಪಂದದ ಕರಾರು. ಆಗ ಆಗ್ನೇಯ ಏಷ್ಯಾದ 15 ರಾಷ್ಟ್ರಗಳ ಅಡಿಕೆ ರೈತರ, ಬಂಡವಾಳಿಗರ ಜತೆ ನಾವು ಪೈಪೋಟಿ ಮಾಡಬೇಕಾಗುತ್ತದೆ. ಆಗ ಸ್ಥಳೀಯ ಅಡಿಕೆ ತೋಟಿಗರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದು ಖಂಡಿತ!!

ಸದ್ಯಕ್ಕೆ ನಾವು ಆರ್‌ಸಿಇಪಿಗೆ ಸಹಿ ಹಾಕುವುದಿಲ್ಲ ಎಂದು ಮೋದಿ ಮಾಮ ಹೇಳಿದ್ದಾರೆ. ಇದಕ್ಕೆ ಕಾರಣ ಡೈರಿ ಉದ್ಯಮದ ಮೇಲೆ ಬೀರುವ ದುಷ್ಪರಿಣಾಮಗಳನ್ನು ಅರಿತ ಜನ ಬೀದಿಗಿಳಿದು ಹೋರಾಡಿದರು. ಒಂದೊಂದು ತಾಲ್ಲೂಕು ಕೇಂದ್ರದಲ್ಲಿಯೂ ಹತ್ತಾರು ಸಾವಿರ ಜನ ಆರ್‌ಸಿಇಪಿ ವಿರುದ್ಧ ಪ್ರತಿಭಟಿಸಿದರು. ಹಾಗಾಗಿ ಸರ್ಕಾರ ಬೆದರಿದೆ. ಆದರೆ ಇನ್ನು ಮೂರು ತಿಂಗಳಲ್ಲಿ ಸಹಿ ಹಾಕಲೇಬೇಕಾದ ಒತ್ತಡ ಸರ್ಕಾರಕ್ಕಿದೆ. ಆಗ ಡೈರಿ ಉದ್ದಿಮೆಯನ್ನು ಹೊರಗಿಟ್ಟು ಸಹಿ ಹಾಕುವ ತೀರ್ಮಾನವನ್ನು ಭಾರತ ತೆಗೆದುಕೊಳ್ಳಬಹುದು. ಆಗ ಮತ್ತೆ ಅಡಿಕೆ ಬೆಳೆಗಾರರಿಗೆ ಕುತ್ತು ಬರುವುದರಲ್ಲಿ ಸಂದೇಹವಿಲ್ಲ.

ಇದೆಲ್ಲ ಅಡಿಕೆ ಬೆಳೆಗಾರರ ಯಾಮಾರಿಸಿ ಗೆದ್ದಿರುವ ಕರ್ಮಗೇಡಿ ಆರು ಸಂಸದರಿಗೆ ಅರ್ಥವಾಗಿದೆಯೋ ಇಲ್ಲವೋ? ಅಕಸ್ಮಾತ್ ಅರ್ಥವಾದರೂ ಹೆಡ್ ಮಾಸ್ಟರ್ ಮೋದಿ ಎದುರು ನಿಂತು ಸಮಸ್ಯೆ ಹೇಳುವ ನೈತಿಕ ಧೈರ್ಯ ಇರ‍್ಯಾರಿಗೂ ಇಲ್ಲ!! ಆರ್‌ಸಿಇಪಿ ಒಪ್ಪಂದದಲ್ಲಿ ಅಡಿಕೆಯನ್ನು ಋಣಾತ್ಮಕ ಪಟ್ಟಿಗೆ ಸೇರಿಸಿದರೆ ಬೆಳೆಗಾರರಿಗೆ ತೊಂದರೆ ತಪ್ಪುತ್ತದೆ. ಋಣಾತ್ಮಕ ಪಟ್ಟಿಯಲ್ಲಿ ಅಡಿಕೆಯಿದ್ದರೆ ಮುಕ್ತ ಆಮದಿಗೆ ಅವಕಾಶವಿರದು. ಇರುವ ಮೂರು ತಿಂಗಳಲ್ಲಿ ಇಂಥದೊಂದು ಪ್ರಯತ್ನ ಪ್ರಾಮಾಣಿಕವಾಗಿ ಆರು ಸಂಸದರು ಮಾಡಿ ತಮ್ಮನ್ನು ಗೆಲ್ಲಿಸಿದವರ ಋಣ ತೀರಿಸುವರಾ? ಅಥವಾ ಮೋದಿ ಕೆಂಗಣ್ಣಿಗೆ ಗುರಿಯಾಗಿ ಹೆದರಿ ಹೇತ್ಲಾಂಡಿಗಳೆಂದು ಇತಿಹಾಸದಲ್ಲಿ ದಾಖಲಾಗುವರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...