Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ 'ಬಾಡೂಟ'ಕ್ಕೆ ಹೆಚ್ಚಿದ ಬೇಡಿಕೆ : ಮನೆಗೊಂದು ಕೋಳಿ ಸಂಗ್ರಹಿಸುವ ಎಚ್ಚರಿಕೆ

ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ಕ್ಕೆ ಹೆಚ್ಚಿದ ಬೇಡಿಕೆ : ಮನೆಗೊಂದು ಕೋಳಿ ಸಂಗ್ರಹಿಸುವ ಎಚ್ಚರಿಕೆ

- Advertisement -
- Advertisement -

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಬಾಡೂಟದ ವ್ಯವಸ್ಥೆ ಮಾಡಲು ಆಗ್ರಹ ಹೆಚ್ಚಾಗಿದೆ.

‘ಬಾಡೂಟದ ವ್ಯವಸ್ಥೆ ಮಾಡದಿದ್ದರೆ, ಮನೆಗೊಂಡು ಕೋಳಿ ಸಂಗ್ರಹಿಸಿ ನಾವೇ ಮಾಂಸದೂಟ ಹಾಕಿಸುತ್ತೇವೆ’ ಎಂದು ಮಂಡ್ಯದ ಬಾಡೂಟ ಬಳಗದವರು ಎಚ್ಚರಿಕೆ ಕೊಟ್ಟಿದ್ದಾರೆ.

ಮಂಡ್ಯದ ಕಾವೇರಿ ಉದ್ಯಾನವನದಲ್ಲಿ ಭಾನುವಾರ (ಡಿ.8) ಸಭೆ ಸೇರಿದ ವಿವಿಧ ಸಂಘಟನೆಗಳ ಮುಖಂಡರು, ಬಾಡೂಟ ಕೊಡಿಸುವ ನಮ್ಮ ಒತ್ತಾಯಕ್ಕೆ ಜಿಲ್ಲಾಡಳಿತ ಮತ್ತು ಕಸಪಾ ಪದಾಧಿಕಾರಿಗಳು ಸ್ಪಂದಿಸದಿದ್ದರೆ ಸ್ವಯಂಪ್ರೇರಿತರಾಗಿ ಸಮ್ಮೇಳನದ ಮೊದಲನೇ ದಿನ ಮೊಟ್ಟೆ, 2ನೇ ದಿನ ಮುದ್ದೆ-ನಾಟಿ ಕೋಳಿ ಸಾರು, 3ನೇ ದಿನ ಚಿಕನ್ ಬಿರಿಯಾನಿ ಬಡಿಸುತ್ತೇವೆ ಎಂದಿದ್ದಾರೆ. ಇದಕ್ಕಾಗಿ ‘ಮನೆಗೊಂದು ಕೋಳಿ’ ಸಂಗ್ರಹಿಸುವ ಅಭಿಯಾನ ನಡೆಸಲು ತೀರ್ಮಾನಿಸಿದ್ದಾರೆ.

ಸಾಹಿತ್ಯ ಸಮ್ಮೇಳನದ ನಿಬಂಧನೆಗಳಲ್ಲಿ ಮಾಂಸಹಾರಕ್ಕೆ ನಿಷೇಧ ಹೇರುವ ಮೂಲಕ, ಮಾಂಸಾಹಾರವನ್ನು ಅಪರಾಧ ಎಂಬಂತೆ ಬಿಂಬಿಸಲಾಗಿದೆ. ಈ ಮೂಲಕ ಬಹುಜನರ ಆಹಾರದ ಹಕ್ಕನ್ನು ಅವಮಾನಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಬ್ರಾಹ್ಮಣ ಶಾಹಿ ಫ್ಯಾಶಿಸ್ಟ್ ಸಂಸ್ಕೃತಿ’

“ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಬ್ರಾಹ್ಮಣ ಶಾಹಿ, ಫ್ಯಾಶಿಸ್ಟ್ ಸಂಸ್ಕೃತಿ. ಸರ್ಕಾರಿ ಕಾರ್ಯಕ್ರಮಗಳಲ್ಲಿ, ಸರ್ಕಾರಿ ಪೋಷಿತ ಕಾರ್ಯಕ್ರಮಗಳಲ್ಲಿ, ಸರ್ಕಾರಿ ಜಯಂತಿ ದಿನಗಳಲ್ಲಿ, ಕೆಲವೊಮ್ಮೆ ಅಂಬೇಡ್ಕರ್ ದಿನಗಳಲ್ಲೂ, ಸರ್ಕಾರಿ ಭವನಗಳಲ್ಲೂ, ಕೆಲವೊಮ್ಮೆ ಬಲಿಷ್ಠ ಅಬ್ರಾಹ್ಮಣ ಜಾತಿಗಳ ಸಂಭ್ರಮಗಳಲ್ಲೂ ಬಹುಸಂಖ್ಯಾತರ ಮಾಂಸಾಹಾರ ಸಂಸ್ಕೃತಿಯನ್ನು ಅಪಮಾನಿಸಿ ಅಧಿಕೃತವಾಗಿ ಅಥವಾ ಅನಾಧಿಕೃತವಾಗಿ ನಿಷೇಧಿಸಲಾಗುತ್ತಿದೆ. ಆ ಜಾತಿ ಶ್ರೇಷ್ಠತೆಯ ಆಹಾರ ಸಂಸ್ಕೃತಿಯ ಮೂಲಕ ಬಹಿರಂಗವಾಗಿ ಬ್ರಾಹ್ಮಣಶಾಹಿ ಮತ್ತು ನವ ಬ್ರಾಹ್ಮಣಶಾಹಿಗೆ ಮಾನ್ಯತೆ ಕೊಡಲಾಗುತ್ತಿದೆ” ಎಂದು ಚಿಂತಕ ಶಿವಸುಂದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಜೋಶಿಯವರು ಸಮ್ಮೇಳನದಲ್ಲಿ ಮಾಂಸಾಹಾರ ಮಾರಾಟವನ್ನು ಕೂಡ ಬಹಿರಂಗ ನಿಷೇಧಿಸಿರುವುದು ಮತ್ತು ಅದನ್ನು ಮಾದಕ ವ್ಯಸನಗಳ ಜೊತೆಗೆ ಹೋಲಿಸಿರುವುದು ದಲಿತ-ರೈತ -ಶೂದ್ರ ಶ್ರಮಣ ಸಂಸ್ಕೃತಿಯ ಮೇಲೆ ನೇರ ಹಾಗೂ ಬಹಿರಂಗ ಬ್ರಾಹ್ಮಣಶಾಹಿ ದಾಳಿಯಾಗಿದೆ. ಇದನ್ನು ಬಹಿರಂಗವಾಗಿಯೇ ವಿರೋಧಿಸಬೇಕು. ಮಂಡ್ಯದ ಬಾಡೂಟದ ಬಳಗ ಈ ನಿಟ್ಟಿನಲ್ಲಿ ನಡೆಸುತ್ತಿರುವ ಪ್ರತಿರೋಧವನ್ನು ನಾಡೋಜರಿಂದ ಹಿಡಿದು ಸಾಮಾನ್ಯ ನಾಡಿಗರವರೆಗೆ ಎಲ್ಲರೂ ಬೆಂಬಲಿಸಬೇಕು. ಈ ವಿರೋಧವನ್ನು ಅಧಿಕೃತ ಮಾಂಸಾಹಾರ ನಿಷೇಧವಿರುವ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಿಗೂ ವಿಸ್ತರಿಸಬೇಕು ಎಂದು ಹೇಳಿದ್ದಾರೆ.

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ ಹೋಲಿಕೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಲಾಗಿದೆ. ಡಿಸೆಂಬರ್ 20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಮೈದನಾದಲ್ಲಿ ನಡೆಯಲಿದ್ದು, ಅಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ ಸಾಹಿತ್ಯ ಪರಿಷತ್ ಕೆಲವು ಸೂಚನೆಗಳನ್ನು ನೀಡಿದೆ. ಅವುಗಳಲ್ಲಿ 4ನೇ ಸೂಚನೆಯಾಗಿ ಮಾಂಸಹಾರವನ್ನು ನಿಷೇಧಿಸಲಾಗಿದೆ. ಅಲ್ಲದೆ, ಮಾಂಸಹಾರವನ್ನು ಕೆಟ್ಟ ಚಟಗಳಾದ ‘ಕುಡಿತ – ತಂಬಾಕು’ ಜೊತೆ ಸಮೀಕರಿಸಲಾಗಿದೆ.

ಇದನ್ನೂ ಓದಿ : ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...