Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ 'ಬಾಡೂಟ'ಕ್ಕೆ ಹೆಚ್ಚಿದ ಬೇಡಿಕೆ : ಮನೆಗೊಂದು ಕೋಳಿ ಸಂಗ್ರಹಿಸುವ ಎಚ್ಚರಿಕೆ

ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ಕ್ಕೆ ಹೆಚ್ಚಿದ ಬೇಡಿಕೆ : ಮನೆಗೊಂದು ಕೋಳಿ ಸಂಗ್ರಹಿಸುವ ಎಚ್ಚರಿಕೆ

- Advertisement -
- Advertisement -

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಬಾಡೂಟದ ವ್ಯವಸ್ಥೆ ಮಾಡಲು ಆಗ್ರಹ ಹೆಚ್ಚಾಗಿದೆ.

‘ಬಾಡೂಟದ ವ್ಯವಸ್ಥೆ ಮಾಡದಿದ್ದರೆ, ಮನೆಗೊಂಡು ಕೋಳಿ ಸಂಗ್ರಹಿಸಿ ನಾವೇ ಮಾಂಸದೂಟ ಹಾಕಿಸುತ್ತೇವೆ’ ಎಂದು ಮಂಡ್ಯದ ಬಾಡೂಟ ಬಳಗದವರು ಎಚ್ಚರಿಕೆ ಕೊಟ್ಟಿದ್ದಾರೆ.

ಮಂಡ್ಯದ ಕಾವೇರಿ ಉದ್ಯಾನವನದಲ್ಲಿ ಭಾನುವಾರ (ಡಿ.8) ಸಭೆ ಸೇರಿದ ವಿವಿಧ ಸಂಘಟನೆಗಳ ಮುಖಂಡರು, ಬಾಡೂಟ ಕೊಡಿಸುವ ನಮ್ಮ ಒತ್ತಾಯಕ್ಕೆ ಜಿಲ್ಲಾಡಳಿತ ಮತ್ತು ಕಸಪಾ ಪದಾಧಿಕಾರಿಗಳು ಸ್ಪಂದಿಸದಿದ್ದರೆ ಸ್ವಯಂಪ್ರೇರಿತರಾಗಿ ಸಮ್ಮೇಳನದ ಮೊದಲನೇ ದಿನ ಮೊಟ್ಟೆ, 2ನೇ ದಿನ ಮುದ್ದೆ-ನಾಟಿ ಕೋಳಿ ಸಾರು, 3ನೇ ದಿನ ಚಿಕನ್ ಬಿರಿಯಾನಿ ಬಡಿಸುತ್ತೇವೆ ಎಂದಿದ್ದಾರೆ. ಇದಕ್ಕಾಗಿ ‘ಮನೆಗೊಂದು ಕೋಳಿ’ ಸಂಗ್ರಹಿಸುವ ಅಭಿಯಾನ ನಡೆಸಲು ತೀರ್ಮಾನಿಸಿದ್ದಾರೆ.

ಸಾಹಿತ್ಯ ಸಮ್ಮೇಳನದ ನಿಬಂಧನೆಗಳಲ್ಲಿ ಮಾಂಸಹಾರಕ್ಕೆ ನಿಷೇಧ ಹೇರುವ ಮೂಲಕ, ಮಾಂಸಾಹಾರವನ್ನು ಅಪರಾಧ ಎಂಬಂತೆ ಬಿಂಬಿಸಲಾಗಿದೆ. ಈ ಮೂಲಕ ಬಹುಜನರ ಆಹಾರದ ಹಕ್ಕನ್ನು ಅವಮಾನಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಬ್ರಾಹ್ಮಣ ಶಾಹಿ ಫ್ಯಾಶಿಸ್ಟ್ ಸಂಸ್ಕೃತಿ’

“ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಬ್ರಾಹ್ಮಣ ಶಾಹಿ, ಫ್ಯಾಶಿಸ್ಟ್ ಸಂಸ್ಕೃತಿ. ಸರ್ಕಾರಿ ಕಾರ್ಯಕ್ರಮಗಳಲ್ಲಿ, ಸರ್ಕಾರಿ ಪೋಷಿತ ಕಾರ್ಯಕ್ರಮಗಳಲ್ಲಿ, ಸರ್ಕಾರಿ ಜಯಂತಿ ದಿನಗಳಲ್ಲಿ, ಕೆಲವೊಮ್ಮೆ ಅಂಬೇಡ್ಕರ್ ದಿನಗಳಲ್ಲೂ, ಸರ್ಕಾರಿ ಭವನಗಳಲ್ಲೂ, ಕೆಲವೊಮ್ಮೆ ಬಲಿಷ್ಠ ಅಬ್ರಾಹ್ಮಣ ಜಾತಿಗಳ ಸಂಭ್ರಮಗಳಲ್ಲೂ ಬಹುಸಂಖ್ಯಾತರ ಮಾಂಸಾಹಾರ ಸಂಸ್ಕೃತಿಯನ್ನು ಅಪಮಾನಿಸಿ ಅಧಿಕೃತವಾಗಿ ಅಥವಾ ಅನಾಧಿಕೃತವಾಗಿ ನಿಷೇಧಿಸಲಾಗುತ್ತಿದೆ. ಆ ಜಾತಿ ಶ್ರೇಷ್ಠತೆಯ ಆಹಾರ ಸಂಸ್ಕೃತಿಯ ಮೂಲಕ ಬಹಿರಂಗವಾಗಿ ಬ್ರಾಹ್ಮಣಶಾಹಿ ಮತ್ತು ನವ ಬ್ರಾಹ್ಮಣಶಾಹಿಗೆ ಮಾನ್ಯತೆ ಕೊಡಲಾಗುತ್ತಿದೆ” ಎಂದು ಚಿಂತಕ ಶಿವಸುಂದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಜೋಶಿಯವರು ಸಮ್ಮೇಳನದಲ್ಲಿ ಮಾಂಸಾಹಾರ ಮಾರಾಟವನ್ನು ಕೂಡ ಬಹಿರಂಗ ನಿಷೇಧಿಸಿರುವುದು ಮತ್ತು ಅದನ್ನು ಮಾದಕ ವ್ಯಸನಗಳ ಜೊತೆಗೆ ಹೋಲಿಸಿರುವುದು ದಲಿತ-ರೈತ -ಶೂದ್ರ ಶ್ರಮಣ ಸಂಸ್ಕೃತಿಯ ಮೇಲೆ ನೇರ ಹಾಗೂ ಬಹಿರಂಗ ಬ್ರಾಹ್ಮಣಶಾಹಿ ದಾಳಿಯಾಗಿದೆ. ಇದನ್ನು ಬಹಿರಂಗವಾಗಿಯೇ ವಿರೋಧಿಸಬೇಕು. ಮಂಡ್ಯದ ಬಾಡೂಟದ ಬಳಗ ಈ ನಿಟ್ಟಿನಲ್ಲಿ ನಡೆಸುತ್ತಿರುವ ಪ್ರತಿರೋಧವನ್ನು ನಾಡೋಜರಿಂದ ಹಿಡಿದು ಸಾಮಾನ್ಯ ನಾಡಿಗರವರೆಗೆ ಎಲ್ಲರೂ ಬೆಂಬಲಿಸಬೇಕು. ಈ ವಿರೋಧವನ್ನು ಅಧಿಕೃತ ಮಾಂಸಾಹಾರ ನಿಷೇಧವಿರುವ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಿಗೂ ವಿಸ್ತರಿಸಬೇಕು ಎಂದು ಹೇಳಿದ್ದಾರೆ.

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ ಹೋಲಿಕೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಲಾಗಿದೆ. ಡಿಸೆಂಬರ್ 20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಮೈದನಾದಲ್ಲಿ ನಡೆಯಲಿದ್ದು, ಅಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ ಸಾಹಿತ್ಯ ಪರಿಷತ್ ಕೆಲವು ಸೂಚನೆಗಳನ್ನು ನೀಡಿದೆ. ಅವುಗಳಲ್ಲಿ 4ನೇ ಸೂಚನೆಯಾಗಿ ಮಾಂಸಹಾರವನ್ನು ನಿಷೇಧಿಸಲಾಗಿದೆ. ಅಲ್ಲದೆ, ಮಾಂಸಹಾರವನ್ನು ಕೆಟ್ಟ ಚಟಗಳಾದ ‘ಕುಡಿತ – ತಂಬಾಕು’ ಜೊತೆ ಸಮೀಕರಿಸಲಾಗಿದೆ.

ಇದನ್ನೂ ಓದಿ : ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...