HomeಎಕಾನಮಿRCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

RCEP ಯಿಂದ ಭಾರತ ತಾತ್ಕಾಲಿಕ ಹಿಂತೆಗೆತ: ಏಕೆ ಮತ್ತು ಮುಂದೇನು?

ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

- Advertisement -
- Advertisement -

ಈ ಕೆಳಗಿನ ಟೇಬಲುಗಳನ್ನು ಗಮನಿಸಿ. ಮೊದಲನೇ ಟೇಬಲಿನಲ್ಲಿ ಭಾರತ RCEPಯ ದೇಶಗಳಲ್ಲಿ ಯಾವ್ಯಾವ ದೇಶದ ಜೊತೆ ಎಷ್ಟೆಷ್ಟು ವ್ಯಾಪಾರದ ಕೊರತೆ ಹೊಂದಿದೆ (2018-19 ರಲ್ಲಿ) ಎಂಬ ಅಂಕಿಅಂಶಗಳಿವೆ. ಎರಡನೇ ಟೇಬಲಿನಲ್ಲಿ ಯಾವ್ಯಾವ ಉತ್ಪನ್ನಗಳನ್ನು ಎಷ್ಟೆಷ್ಟು ರಫ್ತು ಮಾಡುತ್ತಿದೆ ಮತ್ತು ಆಮದು ಮಾಡಿಕೊಳ್ಳುತ್ತಿದೆ ಎಂಬ (2018-19 ರಲ್ಲಿ) ಅಂಕಿಅಂಶಗಳಿವೆ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಈ ಟೇಬಲನ್ನು ನೋಡಿ. ಭಾರತ RCEPಯ ಕೇವಲ ನಾಲ್ಕು ದೇಶಗಳನ್ನು ಲಾವೋಸ್, ಕಾಂಬೋಡಿಯಾ, ಮಯನ್ಮಾರ್ ಮತ್ತು ಫಿಲಿಪೀನ್ಸ್ ಬಿಟ್ಟು ಇತರ ಹನ್ನೊಂದು ದೇಶಗಳ ಜೊತೆಗೆ ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಒಟ್ಟಾರೆಯಾಗಿ 2018-19 ರಲ್ಲಿ, ಈ ದೇಶಗಳಿಂದ 172.93 ಬಿಲಿಯನ್ ಡಾಲರುಗಳಷ್ಟು ಸರಕು ಸೇವೆಗಳನ್ನು ಆಮದು ಮಾಡಿಕೊಂಡಿದ್ದು, 67.69 ಬಿಲಿಯನ್ ಡಾಲರುಗಳಷ್ಟನ್ನು ಮಾತ್ರ ಈ ದೇಶಗಳಿಗೆ ರಫ್ತು ಮಾಡಿದೆ. ಹಾಗಾಗಿ ಭಾರತ, ಒಟ್ಟು 105.24 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆಯನ್ನು ಈ ದೇಶಗಳ ಜೊತೆ ಹೊಂದಿದೆ.

ಹಾಗೆಯೇ ಭಾರತ ತನ್ನ ಒಟ್ಟು ಆಮದಿನಲ್ಲಿ (508 ಬಿಲಿಯನ್ ಡಾಲರುಗಳು) ಶೇಕಡಾ 34 ರಷ್ಟನ್ನು (172.93 ಬಿಲಿಯನ್ ಡಾಲರುಗಳು) RCEP ದೇಶಗಳಿಂದ ಮಾಡಿಕೊಳ್ಳುತ್ತಿದೆ. ತನ್ನ ಒಟ್ಟು ರಫ್ತಿನಲ್ಲಿ (322 ಬಿಲಿಯನ್ ಡಾಲರುಗಳು) ಶೇಕಡಾ 21 ರಷ್ಟನ್ನು (67.69 ಬಿಲಿಯನ್ ಡಾಲರುಗಳು) ಈ RCEP ದೇಶಗಳಿಗೆ ಮಾಡುತ್ತಿದೆ.

ಒಟ್ಟಾಗಿ ಭಾರತ ಜಗತ್ತಿನ ದೇಶಗಳೊಡನೆ 2018-19 ರಲ್ಲಿ ಒಟ್ಟು 186 ಬಿಲಿಯನ್ ಡಾಲರುಗಳಷ್ಟು ವ್ಯಾಪಾರದ ಕೊರತೆ ಅನುಭವಿಸುತ್ತಿದೆ.

ಇದೇ ಟೇಬಲಿನಲ್ಲಿ ಭಾರತ ಚೀನಾ ಜೊತೆ ಹೊಂದಿರುವ 53.5 ಬಿಲಿಯನ್ ಡಾಲರುಗಳಷ್ಟು ಭಾರೀ ವ್ಯಾಪಾರದ ಕೊರತೆಯನ್ನು ಗಮನಿಸಿ. ಜೊತೆಗೆ ಇಂಡೋನೇಷಿಯ, ಮಲೇಷ್ಯಾ, ಥೈಲಾಂಡಿನಂಥ ದೇಶಗಳ ಜತೆಗಿನ ವ್ಯಾಪಾರದ ಕೊರತೆಯನ್ನೂ ನೋಡಿ.

ಚಿತ್ರಕೃಪೆ: ಎಸ್‌ಬಿಐ ಇಂಡಿಯಾ

ಇನ್ನು ಎರಡನೇ ಟೇಬಲನ್ನು ಗಮನಿಸಿದಾಗ ಭಾರತ ವ್ಯವಸಾಯೋತ್ಪನ್ನಗಳು, ಟೆಕ್ಟ್ಸ್ಟೈಲ್ಸ್, ಮುತ್ತು ಮತ್ತು ಆಭರಣಗಳನ್ನು ಬಿಟ್ಟು ಉಳಿದೆಲ್ಲ ಉತ್ಪನ್ನಗಳಲ್ಲೂ ಇತರ ದೇಶಗಳ ಜತೆ ವ್ಯಾಪಾರ ಕೊರತೆ ಎದುರಿಸುತ್ತಿದೆ. ಮೇಲಿನ ಮೂರೇ ಮೂರು ಉತ್ಪನ್ನಗಳಲ್ಲಿ ಭಾರತ ಹೆಚ್ಚುವರಿ ವ್ಯಾಪಾರ ಹೊಂದಿದ್ದರೂ ಆಮದು ರಫ್ತಿನ ಅಂತರ ತುಂಬ ಕಡಿಮೆಯಿರುವುದು ಕಾಣುತ್ತದೆ. ಅದರರ್ಥ RCEP ಬಂದರೆ ಈ ಮೂರು ಉತ್ಪನ್ನಗಳಲ್ಲೂ ಭಾರತ ಕೊರತೆ ಎದುರಿಸಬೇಕಾಗುತ್ತದೆ. ಜೊತೆಗೆ, ತಯಾರಿಕಾ ಉತ್ಪನ್ನಗಳು (manufacturing goods), ಎಲೆಕ್ಟ್ರಾನಿಕ್ ಗೂಡ್ಸ್, ಕೆಮಿಕಲ್ಸ್ ಯಾವುದನ್ನೇ ನೋಡಿದರೂ ಭಾರತ RCEP ದೇಶಗಳ ಜತೆ ಭಾರೀ ವ್ಯಾಪಾರದ ಕೊರತೆ ಹೊಂದಿದೆ.

ಹೀಗೆ ನಾವು ನೋಡಿದಾಗ ಭಾರತ ತಾನು ವಿವಿಧ ಉತ್ಪನ್ನಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವುದಕ್ಕಿಂತ ಮೂರು ಪಟ್ಟು ಹೆಚ್ಚಿಗೆ ಬೇರೆ ದೇಶದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿರುವುದು ನಮಗೆ ಗೊತ್ತಾಗುತ್ತದೆ.

ಇನ್ನು ಇಂಥಾ ಪರಿಸ್ಥಿತಿಯಲ್ಲಿ RCEP ಗೆ ಸಹಿ ಹಾಕಿದರೆ ಈ ವ್ಯಾಪಾರ ಕೊರತೆ ಮತ್ತಷ್ಟು ಹೆಚ್ಚಿ ಭಾರತ ಹೊರದೇಶಗಳ ಉತ್ಪನ್ನಗಳಿಗೆ ಇನ್ನೂ ದೊಡ್ಡ ಮಾರುಕಟ್ಟೆಯಾಗುವುದು ಖಚಿತ.

ಹೀಗೆ ತಾನಿನ್ನೂ ಇತರೆ ಸದಸ್ಯ ದೇಶಗಳ ಜತೆ ಸ್ಪರ್ಧಾತ್ಮಕತೆಯಲ್ಲಿ ಹಿಂದೆ ಬಿದ್ದಿರುವುದರಿಂದ ಭಾರತ ಸರ್ಕಾರ ಅಂದರೆ ಪ್ರಧಾನಿ ಮೋದಿಯವರು (ಈಗ ಸರ್ಕಾರ ಅಂದರೆ ಮೋದಿ ಅನ್ನುವಂತಾಗಿದೆ) ಈಗ ಸದ್ಯಕ್ಕೆ RCEPಗೆ ಸಹಿ ಹಾಕಲು ನಿರಾಕರಿಸಿದ್ದಾರೆಯೇ ಎಂದು ನೋಡಿದರೆ ವಾಸ್ತವ ಹಾಗೆ ಕಾಣಿಸುವುದಿಲ್ಲ.

ಯಾಕೆಂದರೆ, ಇವತ್ತಿಗೂ ಖಅಇPಯ ಯಾವ್ಯಾವ ನಿಯಮಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಒಪ್ಪಿಗೆಯಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ನಮ್ಮ ನಾಗರಿಕರಿಗಾಗಲೀ ಅಥವಾ ಕನಿಷ್ಟ ನಮ್ಮ ಸಂಸದರಿಗಾಗಲೀ ಏನನ್ನೂ ತಿಳಿಸಿಲ್ಲ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು

ನಮ್ಮ ದೇಶದ ಹಲವಾರು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಹಲವು ಜನಪರ ಗುಂಪುಗಳು RCEP ಯ ಬಗ್ಗೆ ಜನರನ್ನು ಎಚ್ಚರಿಸಿ ಹಲವು ಪ್ರತಿಭಟನೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿದ್ದು ಸರ್ಕಾರ RCEP ಗೆ ಸಹಿ ಹಾಕದಿರಲು ಮುಖ್ಯ ಕಾರಣ.

ಹಾಗೆಯೇ, ಹಲವು ಸಣ್ಣ ಹಾಗೂ ಮಧ್ಯಮ ಗಾತ್ರದ ಕೈಗಾರಿಕಾ ಸಂಘಟನೆಗಳು, ಆಟೋಮೋಬೈಲ್ ಉದ್ದಿಮೆಯ ಸಂಘಟನೆಗಳು, ಟೆಕ್ಟ್ಸ್ಟೈಲ್ ಉದ್ದಿಮೆ ಸಂಘಟನೆಗಳು ಸರ್ಕಾರದ ಮೇಲೆ ಹಾಕಿದ ಒತ್ತಡವೂ ಸರ್ಕಾರ ಈಗ RCEP ಗೆ ಸಹಿ ಹಾಕದಂತೆ ತಡೆದಿದೆ.

ಆದರೆ ಈಗಾಗಲೇ CII ( Confederation of Indian Industries) ಮುಂದೆ ಭಾರತ RCEPಗೆ ಸಹಿ ಹಾಕಬೇಕಾಗುತ್ತದೆ ಎಂದು ಹೇಳಿದೆ. ಯಾಕೆಂದರೆ ಈ RCEP ಯಿಂದ ರೈತರಿಗೆ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ತೊಂದರೆಯಾಗುತ್ತದೆಯೇ ಹೊರತು ಬೃಹತ್ ಉದ್ಯಮಿಗಳಿಗೆ RCEP ಯಲ್ಲಿ ಲಾಭವೇ ಆಗುತ್ತದೆ. ಯಾಕೆಂದರೆ ರಿಲಯನ್ಸ್, ಅದಾನಿಯಂತಹ ಉದ್ಯಮಿಗಳು RCEP ಯ ಯಾವ ದೇಶದಲ್ಲಿ ಅನುಕೂಲವಿದೆಯೋ ಅಲ್ಲಿಯೇ ತಮ್ಮ ಉತ್ಪಾದನಾ ಘಟಕ ಸ್ಥಾಪಿಸಿ ಅಲ್ಲಿಂದಲೇ ಭಾರತ ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅಥವಾ ಬೇರೆ ದೇಶಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಭಾರತದಲ್ಲಿ ಲಾಭಕ್ಕೆ ಮಾರಿ ಮಾರುಕಟ್ಟೆ ಏಕಸ್ವಾಮ್ಯ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ.

ಈ ರೀತಿಯ ಬೃಹತ್ ಉದ್ದಿಮೆಗಳ ಒತ್ತಡ ಮತ್ತು ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ( ಬಹುಶಃ ಇನ್ನು ಮೂರು ತಿಂಗಳುಗಳಲ್ಲಿ – ಫೆಬ್ರವರಿ 2020) RCEP ಗೆ ಸಹಿ ಹಾಕುವ ಸಾಧ್ಯತೆ ದಟ್ಟವಾಗಿದೆ. ಹಾಗೂ ಅದಕ್ಕೆ ಪೂರಕವಾಗಿ ಜನಾಭಿಪ್ರಾಯ ರೂಪಿಸುವ ಕೆಲಸವೂ ಸದ್ದಿಲ್ಲದೆ ನಡೆಯುವ ಸಾಧ್ಯತೆಗಳೂ ಇವೆ.

ಆದುದರಿಂದ, ಈ ತಾತ್ಕಾಲಿಕ ಜಯದಲ್ಲಿ ಮೈಮರೆಯದೆ ಈ ದೇಶದ ರೈತರು, ಕಾರ್ಮಿಕರು, ಪತ್ರಕರ್ತರು, ಬರಹಗಾರರು, ಕಲಾವಿದರು ಒಟ್ಟಾರೆ ಈ ದೇಶದ ಬಗ್ಗೆ ಕಳಕಳಿ ಇರುವವರೆಲ್ಲರೂ ಸರ್ಕಾರದ ಮೇಲೆ RCEP ಗೆ ಮುಂದೆಯೂ ಸಹಿ ಹಾಕದಂತೆ ಪರಿಣಾಮಕಾರಿಯಾಗಿ ಒತ್ತಡ ಹಾಕುವ, ಹೋರಾಟ ರೂಪಿಸುವ ಅವಶ್ಯಕತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...