Homeಮುಖಪುಟಮಣಿಪುರ ಹಿಂಸಾಚಾರ | ಸುಟ್ಟ ವಸತಿ ಮತ್ತು ಆಸ್ತಿಗಳ ವಿವರ ನೀಡುವಂತೆ ಕೇಳಿದ ಸುಪ್ರಿಂಕೋರ್ಟ್

ಮಣಿಪುರ ಹಿಂಸಾಚಾರ | ಸುಟ್ಟ ವಸತಿ ಮತ್ತು ಆಸ್ತಿಗಳ ವಿವರ ನೀಡುವಂತೆ ಕೇಳಿದ ಸುಪ್ರಿಂಕೋರ್ಟ್

- Advertisement -
- Advertisement -

ಮಣಿಪುರದ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಸಂಪೂರ್ಣ ಅಥವಾ ಭಾಗಶಃ ಸುಟ್ಟು ಭಸ್ಮವಾಗಿರುವ ವಸತಿಗಳು ಮತ್ತು ಆಸ್ತಿಗಳ ವಿವರಗಳನ್ನು ಮುಚ್ಚಿದ ಕವರ್‌ನಲ್ಲಿ ಒದಗಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಣಿಪುರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಣಿಪುರ ಹಿಂಸಾಚಾರ

ಅಪರಾಧಿಗಳು ಮತ್ತು ಅತಿಕ್ರಮಣದಾರರ ವಿರುದ್ಧ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಹೇಳುವಂತೆ ಕೂಡಾ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನವರಿ 20 ನಂತರದ ಅರ್ಜಿಯ ವಿಚಾರಣೆಗೆ ನಿಗದಿಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್, ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮತ್ತು ಅವರಿಗೆ ಪರಿಹಾರವನ್ನು ಮೇಲ್ವಿಚಾರಣೆ ಮಾಡಲು ಮೂವರು ಮಾಜಿ ಮಹಿಳಾ ಹೈಕೋರ್ಟ್ ನ್ಯಾಯಾಧೀಶರ ಸಮಿತಿಯನ್ನು ಸ್ಥಾಪಿಸಲು ಆದೇಶಿಸಿತ್ತು. ಜೊತೆಗೆ ಅಪರಾಧ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮಹಾರಾಷ್ಟ್ರದ ಮಾಜಿ ಪೊಲೀಸ್ ಮುಖ್ಯಸ್ಥ ದತ್ತಾತ್ರೇ ಪಡಸಾಲ್ಗಿಕರ್ ಅವರನ್ನು ಕೇಳಿತ್ತು. ಮಣಿಪುರ ಹಿಂಸಾಚಾರ

2023ರ ಮೇ 3ರಂದು ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಬುಡಕಟ್ಟು ಜನಾಂದ ನಡುವೆ ಜನಾಂಗೀಯ ಹಿಂಸಾಚಾರಗಳು ಭುಗಿಲೆದ್ದಿತ್ತು. ನವೆಂಬರ್ 2024 ರ ಅಂತ್ಯದ ವೇಳೆಗೆ ಹಿಂಸಾಚಾರದಲ್ಲಿ 258 ಜನರು ಮೃತಪಟ್ಟಿದ್ದಾರೆ. ಹಿಂಸಾಚಾರದಿಂದ 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸುಮಾರು 60,000 ಜನರು ನಿರಾಶ್ರಿತರಾಗಿದ್ದಾರೆ. ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸುವುದರೊಂದಿಗೆ ಪರಿಸ್ಥಿತಿಯು ಉಲ್ಬಣಗೊಳ್ಳುತ್ತಲೆ ಇದೆ.

ಈ ನಡುವೆ, ಮಣಿಪುರದ ವಿವಿಧ ಕಾಲೇಜುಗಳ ಕನಿಷ್ಠ 200 ಬುಡಕಟ್ಟು ವಿದ್ಯಾರ್ಥಿಗಳು ರಾಜಧಾನಿ ಇಂಫಾಲ್‌ನ ರಾಜಭವನದ ಬಳಿ 2023-24ರ ಪರಿಶಿಷ್ಟ ಪಂಗಡದ ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಎಲ್ಲಾ ಕಾಲೇಜು ಬುಡಕಟ್ಟು ವಿದ್ಯಾರ್ಥಿ ಒಕ್ಕೂಟದ (ಎಸಿಟಿಎಸ್‌ಯು) ನೇತೃತ್ವದಲ್ಲಿ ರಾಜಭವನದ ಬಳಿಯ ಜಿಪಿ ಮಹಿಳಾ ಕಾಲೇಜು ಎದುರು ಜಮಾಯಿಸಿದ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ್ದಾರೆ.

ಸ್ಥಳದಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಪಡೆಗಳು ಅವರನ್ನು ರ್ಯಾಲಿ ನಡೆಸದಂತೆ ತಡೆದರು. ಇದು ಸ್ವಲ್ಪ ಸಮಯದ ಘರ್ಷಣೆಗೆ ಕಾರಣವಾಯಿತು. ಧರಣಿ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಕೆಲವು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾರ್ಥಿ ಪ್ರತಿನಿಧಿ ಜಿ ಪನ್ಮೆ, ”2023-24ರ ನಮ್ಮ ಎಸ್‌ಟಿ ವಿದ್ಯಾರ್ಥಿವೇತನ ಇನ್ನೂ ಬಿಡುಗಡೆಯಾಗಿಲ್ಲ. ನಂತರ ಬುಡಕಟ್ಟು ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡನ್ನು ಮಣಿಪುರಕ್ಕೆ  ಹೋಲಿಸಿದ ನಟ ವಿಜಯ್; ವಿರೋಧ ವ್ಯಕ್ತಪಡಿಸಿದ ಡಿಎಂಕೆ

ತಮಿಳುನಾಡನ್ನು ಮಣಿಪುರಕ್ಕೆ  ಹೋಲಿಸಿದ ನಟ ವಿಜಯ್; ವಿರೋಧ ವ್ಯಕ್ತಪಡಿಸಿದ ಡಿಎಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...