Homeಮುಖಪುಟಧರ್ಮದ ಆಧಾರದ ಮೇಲೆ ಮೀಸಲಾತಿ ಸಾಧ್ಯವಿಲ್ಲ - ಸುಪ್ರೀಂಕೋರ್ಟ್

ಧರ್ಮದ ಆಧಾರದ ಮೇಲೆ ಮೀಸಲಾತಿ ಸಾಧ್ಯವಿಲ್ಲ – ಸುಪ್ರೀಂಕೋರ್ಟ್

- Advertisement -
- Advertisement -

2010 ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾಗುತ್ತಿರುವ ಹಲವಾರು ಜಾತಿಗಳ OBC ಸ್ಥಾನಮಾನವನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪುವನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳ ವಿಚಾರಣೆ ವೇಳೆ, ಮೀಸಲಾತಿಯು ಧರ್ಮದ ಆಧಾರದ ಮೇಲೆ ಇರಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ. ಹೈಕೋರ್ಟ್‌ನ ಮೇ 22 ರ ತೀರ್ಪನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಹಲವು ಅರ್ಜಿಗಳು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದವು.

“ಮೀಸಲಾತಿ ಧರ್ಮದ ಆಧಾರದ ಮೇಲೆ ಸಾಧ್ಯವಿಲ್ಲ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘‘ಇದು ಧರ್ಮದ ಆಧಾರದಲ್ಲಿ ಅಲ್ಲ, ಹಿಂದುಳಿದಿರುವಿಕೆಯ ಆಧಾರದಲ್ಲಿ ನೀಡಲಾಗಿದೆ’’ ಎಂದು ಹೇಳಿದ್ದಾರೆ. 2010 ರಿಂದ ಪಶ್ಚಿಮ ಬಂಗಾಳದಲ್ಲಿ ಹಲವಾರು ಜಾತಿಗಳಿಗೆ ನೀಡಲಾಗಿದ್ದ OBC ಸ್ಥಾನಮಾನವನ್ನು ಹೈಕೋರ್ಟ್ ರದ್ದುಗೊಳಿಸಿ, ಸಾರ್ವಜನಿಕ ವಲಯದ ಉದ್ಯೋಗಗಳು ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಕಾನೂನುಬಾಹಿರವೆಂದು ಪರಿಗಣಿಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತೀರ್ಪಿನ ವೇಳೆ ಹೈಕೋರ್ಟ್‌, “ಈ ಸಮುದಾಯಗಳನ್ನು ಒಬಿಸಿಗಳು ಎಂದು ಘೋಷಿಸಲು ಧರ್ಮವು ಏಕೈಕ ಮಾನದಂಡವಾಗಿದೆ ಎಂದು ತೋರುತ್ತದೆ” ಎಂದು ಹೇಳಿತ್ತು. 77 ವರ್ಗದ ಮುಸ್ಲಿಮರನ್ನು ಹಿಂದುಳಿದವರೆಂದು ಆಯ್ಕೆ ಮಾಡಿರುವುದು ಇಡೀ ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಹೈಕೋರ್ಟ್ ಹೇಳಿತ್ತು.

2012ರ ರಾಜ್ಯದ ಮೀಸಲಾತಿ ಕಾನೂನಿನ ನಿಬಂಧನೆಗಳು ಮತ್ತು 2010 ರಲ್ಲಿ ನೀಡಲಾದ ಮೀಸಲಾತಿಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬಗ್ಗೆ ತೀರ್ಪು ನೀಡಿದ್ದ ಹೈಕೋರ್ಟ್, ಈಗಾಗಲೇ ಸೇವೆಯಲ್ಲಿದ್ದ ಅಥವಾ ಮೀಸಲಾತಿಯ ಪ್ರಯೋಜನ ಪಡೆದಿರುವ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಬಡ ವರ್ಗಗಳ ನಾಗರಿಕರ ಸೇವೆಗಳಿಗೆ ತೀರ್ಪಿನಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು.

ಒಟ್ಟಾರೆಯಾಗಿ, ಏಪ್ರಿಲ್, 2010 ಮತ್ತು ಸೆಪ್ಟೆಂಬರ್, 2010 ರ ನಡುವೆ ನೀಡಲಾದ 77 ವರ್ಗಗಳ ಮೀಸಲಾತಿಯನ್ನು ಹೈಕೋರ್ಟ್ ರದ್ದುಗೊಳಿಸಿತು. ಇದೇ ವೇಳೆ, ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಕಾಯಿದೆ-2012 ರ ಅಡಿಯಲ್ಲಿ ನೀಡಲಾದ OBC ಮೀಸಲಾತಿ ಪಡೆದಿದ್ದ 37 ವರ್ಗಗಳನ್ನು ಕೂಡಾ ರದ್ದು ಮಾಡಿದೆ.

ಸೋಮವಾರದ ವಿಚಾರಣೆಯ ಸಂದರ್ಭದಲ್ಲಿ, ಪ್ರಕರಣದ ಬಗ್ಗೆ ಅವಲೋಕನವನ್ನು ನೀಡುವಂತೆ ಪ್ರಕರಣದಲ್ಲಿ ಹಾಜರಾದ ವಕೀಲರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಹೈಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿದ ಸಿಬಲ್, “ಕಾಯ್ದೆಯ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ ಇದು ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಪಡೆಯಲು ಬಯಸುವ ಸಾವಿರಾರು ವಿದ್ಯಾರ್ಥಿಗಳು, ಉದ್ಯೋಗಗಳನ್ನು ಬಯಸುವ ಜನರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಕೆಲವು ಮಧ್ಯಂತರ ಆದೇಶವನ್ನು ಜಾರಿಗೊಳಿಸಬೇಕು ಮತ್ತು ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಸಿಬಲ್ ಪೀಠವನ್ನು ಒತ್ತಾಯಿಸಿದ್ದಾರೆ. ಈ ವಿಷಯದಲ್ಲಿ ಕೆಲವು ಪ್ರತಿವಾದಿಗಳನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲ ಪಿ.ಎಸ್. ಪಟ್ವಾಲಿಯಾ ಸೇರಿದಂತೆ ಇತರ ವಕೀಲರ ಸಲ್ಲಿಕೆಗಳನ್ನು ಪೀಠವು ಆಲಿಸಿತು. ಜನವರಿ 7 ರಂದು ವಿವರವಾದ ಅರ್ಜಿಗಳನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...