Homeಕರ್ನಾಟಕಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

- Advertisement -
- Advertisement -

ಸರಕಾರದ ನಡೆಗೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಖಂಡನೆ

ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ 2.23 ಲಕ್ಷ  ಬಗರ್ ಹುಕುಂ ಅರ್ಜಿಗಳನ್ನು ಇಲ್ಲಿಯವರೆಗೆ ತಿರಸ್ಕರಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮೂನೆ–50, ನಮೂನೆ–53 ಮತ್ತು ನಮೂನೆ–57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು 20 ಮಾನದಂಡಗಳ ಆಧಾರದಲ್ಲಿ ಪರಿಶೀಲಿಸಲಾಗುತ್ತಿದೆ. ಅನರ್ಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಸಲ್ಲಿಕೆಯಾಗಿದ್ದ 42,350 ಅರ್ಜಿಗಳ ಪೈಕಿ, 33,499 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲದ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

18 ವರ್ಷ ಕೆಳಗಿನನವರು ಸಲ್ಲಿಸಿರುವ 7,000ಕ್ಕೂ ಹೆಚ್ಚುಅರ್ಜಿಗಳನ್ನು ತಿರಸ್ಕರಿಸಲಾಗಿದೆ.  ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು ಸಲ್ಲಿಸಿದ್ದ 27,452 ಅರ್ಜಿಗಳು, ನಗರಗಳ ಬಫರ್ ವಲಯದ ವ್ಯಾಪ್ತಿಯಲ್ಲಿ ಸಾಗುವಳಿ ಮಾಡುತ್ತಿರುವುದಾಗಿ ಸಲ್ಲಿಸಿದ್ದ 33,000 ಅರ್ಜಿಗಳು, ಅರಣ್ಯಕ್ಕೆ ಸಂಬಂಧಿಸಿದ 12,000 ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದು ಹೇಳಿದರು.

ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರುಪರಿಶೀಲನೆ ಒಳಪಡಿಸಲಾಗುವುದು ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕೃಷಿಕರೇ ಅಲ್ಲದವರು, ಅರ್ಜಿಯಲ್ಲಿ ಉಲ್ಲೇಖಿಸಿದ ಜಮೀನುಗಳಲ್ಲಿ ಸಾಗುವಳಿಯನ್ನೇ ಮಾಡದವರು, ಕುಟುಂಬದಲ್ಲಿ 5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು ಸಲ್ಲಿಸಿರುವ ಅರ್ಜಿಗಳನ್ನೂ ತಿರಸ್ಕರಿಸಲಾಗಿದೆ ಎಂದರು.

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು, ‘ಬಗರ್ ಹುಕುಂ ಸಾಗುವಳಿ ಸಮಿತಿಗಳ ನಿರ್ಣಯದಂತೆ ಭೂ ಮಂಜೂರಾತಿಯಾಗಿರುವ 10,651 ಪ್ರಕರಣಗಳಲ್ಲಿ ಈವರೆಗೂ ರೈತರ ಹೆಸರಿಗೆ ಖಾತೆ ಮಾಡದಿರುವುದು ಕಂಡುಬಂದಿದೆ’ ಎಂದು ವಿಧಾನಸಭೆಗೆ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 2,749, ಹಾಸನ ಜಿಲ್ಲೆಯಲ್ಲಿ 2,679, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,527 ಮತ್ತು ರಾಮನಗರ ಜಿಲ್ಲೆಯಲ್ಲಿ 1,144 ಪ್ರಕರಣಗಳಲ್ಲಿ ಇನ್ನೂ ಖಾತೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ಬಿಜೆಪಿಯ ಆರಗ ಜ್ಞಾನೇಂದ್ರ ಮಾತನಾಡಿ, ‘ರಾಜ್ಯದಲ್ಲಿ ಈಗ ರೂಪಿಸಿರುವ ಬಗರ್ ಹುಕುಂ ಭೂ ಮಂಜೂರಾತಿ ನಿಯಮಗಳು ಜಟಿಲವಾಗಿವೆ. ಅಧಿಕಾರಿಗಳೇ ಎಲ್ಲ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಕಂದಾಯ– ಅರಣ್ಯ ಜಮೀನು ಜಂಟಿಯಾಗಿರುವ ಸರ್ವೆ ನಂಬರ್‌ಗಳಲ್ಲಿ ಜಂಟಿ ಸರ್ವೆ ಪೂರ್ಣಗೊಳ್ಳದಿದ್ದರೂ ಅರಣ್ಯದ ನೆಪದಲ್ಲಿ ಅರ್ಜಿ ತಿರಸ್ಕರಿಸಲಾಗುತ್ತಿದೆ’ ಎಂದು ದೂರಿದರು.

‘ಕಂದಾಯ– ಅರಣ್ಯ ಜಮೀನುಗಳು ಒಂದೇ ಸರ್ವೆ ನಂಬರ್‌ಗಳಲ್ಲಿ ಇದ್ದು, ಜಂಟಿ ಸರ್ವೆ ನಡೆಸಿ ಗಡಿ ಗುರುತಿಸದ ಪ್ರಕರಣಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಜಂಟಿ ಸರ್ವೆ ನಡೆಸಲು ಕ್ರಮ ಕೈಗೊಳ್ಳುವೆ’ ಎಂದು ಭರವಸೆ ನೀಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ (ಬಗರ್ ಹುಕುಂ) ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ ಸಾಕಷ್ಟು ಅರ್ಜಿಗಳನ್ನು ಸರಕಾರ ತಿರಸ್ಕರಿಸಿದ್ದು,  ಸರಕಾರದ ಈ ನಡೆ ಅತ್ಯಂತ ಖಂಡನೀಯ.  ಫಾರಂ ನಂಬರ್ 50, 53, 57ರಲ್ಲಿ ಭೂ ಹಕ್ಕು ಪತ್ರಕ್ಕಾಗಿ ಸಲ್ಲಿಕೆಯಾದ ರೈತರ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವುದು ಮಾತ್ರ ಸರಕಾರದ ಸಾಧನೆಯಲ್ಲ. ಕಾನೂನು ನಿಯಮಗಳನ್ನು ಅದಷ್ಟು ಸಡಿಕೆ ಮಾಡಿ ರೈತರಿಗೆ ಭೂ ಮಂಜೂರಾತಿ ಮಾಡುವ ಇಚ್ಛಾಶಕ್ತಿ ಸರಕಾರಕ್ಕೆ ಇರಬೇಕಾಗಿದೆ. ಇದು ಅತ್ಯಂತ ಮುಖ್ಯವಾಗಿದೆ. ದೇಶದಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ.ಗಳ ಮಾಫಿ ಮಾಡುವ, ಇತರ ಕಾನೂನು ಸಡಿಲಿಕೆ ಮಾಡಿ ಅವರ ಕೈಗಾರಿಕೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಭೂಮಿಯನ್ನು ಸರಕಾರ ಒದಗಿಸುತ್ತಿರುವಾಗ ಬಡ ರೈತರಿಗಾಗಿ ಕೆಲ ಕಾನೂನು ಮಾರ್ಪಾಟು ಯಾಕೆ ಸಾಧ್ಯವಾಗುತ್ತಿಲ್ಲ. ರೈತರಿಗೆ ನ್ಯಾಯ ಒದಗಿಸುವಲ್ಲಿ ಸರಕಾರ ವಿಫಲವಾದಲ್ಲಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದ್ದಾರೆ.

ಇದನ್ನೂ ಓದಿ….ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...