Homeಮುಖಪುಟಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ...

ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

- Advertisement -
- Advertisement -

ಕಳೆದ ಭಾನುವಾರ (ಡಿ.8, 2024) ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದು ದೇಶ ಬಂಡುಕೋರರ (ಹೋರಾಟಗಾರರ) ವಶವಾದ ಬಳಿಕ, ಸಿರಿಯಾ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಮಧ್ಯಂತರ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ.

ಕೆಲ ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ ಬಳಿಕ ನೋಬೆಲ್ ಪುರಸ್ಕತ ಮುಹಮ್ಮದ್ ಯೂನುಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಅದೇ ರೀತಿಯ ಬೆಳವಣಿಗೆ ಸಿರಿಯಾದಲ್ಲಿ ನಡೆಯುವ ಸಾಧ್ಯತೆ ಇದೆ.

ಪ್ರಸ್ತುತ ಸಿರಿಯಾ ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಗುಂಪಿನ ವಶದಲ್ಲಿದೆ. ಭಯೋತ್ಪಾದಕ ಗುಂಪು ಅಲ್-ಖೈದಾ ಮತ್ತು ಮಿತ್ರ ಬಣಗಳ ಬೆಂಬಲಿತ ಈ ಗುಂಪನ್ನು ‘ಅಲ್-ನುಸ್ರಾ ಫ್ರಂಟ್’ ಎಂದೂ ಕರೆಯಲಾಗುತ್ತದೆ. ಬಂಡುಕೋರರ ಈ ಗುಂಪಿಗೆ ಸಿರಿಯಾದ ಪ್ರತಿಪಕ್ಷಗಳ ಬೆಂಬಲವೂ ಇದೆ ಎನ್ನಲಾಗಿದೆ.

ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಸೋಮವಾರ ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಬಂಡುಕೋರರ ನಿಯಂತ್ರಣದಲ್ಲಿದ್ದ ಸಣ್ಣ ಪ್ರದೇಶವೊಂದರ ಆಡಳಿತ ನಡೆಸುತ್ತಿದ್ದ ಮೊಹಮ್ಮದ್ ಅಲ್ ಬಶೀರ್ ಅವರು ಮಧ್ಯಂತರ ಸರ್ಕಾರದ ನೇತೃತ್ವ ವಹಿಸುವ ಸಾಧ್ಯತೆ ಇದೆ.

ಸಹಜ ಸ್ಥಿತಿಯತ್ತ ಸಿರಿಯಾ :

ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದ ಬಳಿಕ ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಧ್ಯಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಹೇಳಿದ್ದಾರೆ.

ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಜಲಾಲಿ ತಿಳಿಸಿದ್ದಾರೆ.

ಸಿರಿಯಾ ಕರೆನ್ಸಿ ಮುಂದುವರಿಕೆ

ಸಿರಿಯಾದ ಬ್ಯಾಂಕ್‌ಗಳು ಮಂಗಳವಾರದಿಂದ ಪುನಃ ಕಾರ್ಯಾರಂಭ ಮಾಡಲಿವೆ. ಕಚೇರಿಗೆ ಹಿಂದಿರುಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಸಿರಿಯಾ ಕರೆನ್ಸಿ ಮುಂದುವರಿಯಲಿದೆ ಎಂದು ಸಿರಿಯಾ ಸೆಂಟ್ರಲ್ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇರಾಕ್ ಪ್ರವೇಶಿಸಿದ 4 ಸಾವಿರ ಸೈನಿಕರು

ಬಂಡುಕೋರರು ಅಥವಾ ಹೋರಾಟಗಾರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡ ಬಳಿಕ ಸಿರಿಯಾದ 4 ಸಾವಿರಕ್ಕೂ ಅಧಿಕ ಸೈನಿಕರು ಗಡಿದಾಟಿ ಇರಾಕ್ ಪ್ರವೇಶಿಸಿದ್ದಾರೆ ಎಂದು ಇರಾಕ್ ಸೇನಾ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಶಸ್ತ್ರ ಸಜ್ಜಿತ ವಾಹನಗಳೊಂದಿಗೆ ಸಿರಿಯಾದ ಸೈನಿಕರು ಇರಾಕ್ ಪ್ರವೇಶಿಸಿದ್ದಾರೆ. ಅವರನ್ನು ಶಿಬಿರಗಳಲ್ಲಿ ಇರಿಸಲಾಗುವುದು ಎಂದು ಇರಾಕ್‌ನ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಮಾಹಿತಿ ನೀಡಿವೆ.

ಮಾಸ್ಕೋದಲ್ಲಿ ಆಶ್ರಯ ಪಡೆದ ಅಸದ್, ಕುಟುಂಬ

ದೇಶ ಬಂಡುಕೋರರ ವಶವಾದ ಬಳಿಕ ಪಲಾಯನ ಮಾಡಿರುವ ಪದಚ್ಯುತ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ (ಪತ್ನಿ, ಮೂವರು ಮಕ್ಕಳು) ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಾನವೀಯ ನೆಲೆಯಲ್ಲಿ ಅಸದ್ ಮತ್ತು ಕುಟುಂಬಕ್ಕೆ ಆಶ್ರಯ ನೀಡಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಕಚೇರಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿ ಶುರು ಮಾಡಿದ ಅಮೆರಿಕ, ಇಸ್ರೇಲ್

ಸಿರಿಯಾ ಅಧ್ಯಕ್ಷ ಸ್ಥಾನದಿಂದ ಬಶರ್ ಅಲ್ ಅಸಾದ್ ಕೆಳಗಿಳಿಯುತ್ತಿದ್ದಂತೆ ಅಮೆರಿಕ ಮತ್ತು ಇಸ್ರೇಲ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಶುರುಮಾಡಿದೆ. ಸಿರಿಯಾದ ಪರಿಸ್ಥಿತಿಯ ಲಾಭ ಪಡೆದುಕೊಂಡು ಮರು ಸಂಘಟನೆಗೊಳ್ಳಲು  ಐಸಿಸ್‌ಗೆ ಅವಕಾಶ ನೀಡುವುದಿಲ್ಲ ಎಂದಿರುವ ಅಮೆರಿಕ ಸೋಮವಾರ (ಡಿ.9) ವೈಮಾನಿಕ ದಾಳಿ ನಡೆಸಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಬಿ-52, ಎಫ್‌-15 ಹಾಗೂ ಎ-10 ಬಾಂಬರ್ ವಿಮಾನಗಳನ್ನು ಬಳಸಿ ಐಸಿಸ್‌ನ 75 ನೆಲೆಗಳ ಮೇಲೆ ದಾಳಿ ನಡೆಸಿದೆ.

ಮತ್ತೊಂದೆಡೆ ಇಸ್ರೇಲ್ ಕೂಡ ರಾಜಧಾನಿ ಡಮಾಸ್ಕಸ್ ಸೇರಿದಂತೆ ಸಿರಿಯಾದಾದ್ಯಂತ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 100 ಕ್ಷಿಪಣಿಗಳನ್ನು ಇಸ್ರೇಲ್ ಹಾರಿಸಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...