Homeಮುಖಪುಟಸಂಭಾಲ್  ಶಾಹಿ ಮಸೀದಿಯ ಸಮೀಕ್ಷಾ ವರದಿ ಸಿದ್ದ: ಕಮೀಷನರ್

ಸಂಭಾಲ್  ಶಾಹಿ ಮಸೀದಿಯ ಸಮೀಕ್ಷಾ ವರದಿ ಸಿದ್ದ: ಕಮೀಷನರ್

- Advertisement -
- Advertisement -

ಲಕ್ನೋ:  ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ  ಸಂಭಾಲ್ ನ  ಶಾಹಿ ಮಸೀದಿಯ ಸಮೀಕ್ಷಾ ವರದಿಯನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ಅಡ್ವೋಕೇಟ್ ಕಮಿಷನರ್ ರಮೇಶ್ ರಾಘವ್ ಅವರು ನ್ಯಾಯಾಲಯವನ್ನು ಕೋರಿರುವುದರಿಂದ ಸಂಭಾಲ್‌ನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು (ಹಿರಿಯ ವಿಭಾಗ)  ಮಾನ್ಯಮಾಡಿದ್ದಾರೆ.

ಸಂಭಾಲ್ ಮಸೀದಿ ಪ್ರಕರಣದಲ್ಲಿ ಯಾವುದೇ ಆದೇಶವನ್ನು ನೀಡದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ನ್ಯಾಯಾಲಯ ನಿರಾಕರಿಸಿದೆ ಮತ್ತು ಜನವರಿ 8ಕ್ಕೆ ವಿಚಾರಣೆಯ ಮುಂದಿನ ದಿನಾಂಕವನ್ನು ನಿಗದಿಪಡಿಸಿದೆ.

ವಕೀಲ ಕಮಿಷನರ್‌ರ ಸಮೀಕ್ಷಾ ವರದಿಯನ್ನು  ತಿರಸ್ಕರಿಸುವಂತೆ ಸಲ್ಲಿಸಿದ ಶಾಹಿ ಮಸೀದಿ ಸಮಿತಿಯ ಅರ್ಜಿಯನ್ನೂ ನ್ಯಾಯಾಲಯವು ಒಪ್ಪಿಕೊಂಡಿದೆ.

ನಾನು ಸಂಭಾಲ್ ಮಸೀದಿಯ ಕುರಿತು ಸಮೀಕ್ಷೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಕ್ಕೆ 15 ದಿನಗಳ ಕಾಲಾವಕಾಶ ಕೇಳಿದ್ದೇನೆ. ಆದರೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ನನ್ನ ಅರ್ಜಿಯನ್ನು ಕಡತದಲ್ಲಿ ಇರಿಸುವುದಕ್ಕೆ ಪರಿಗಣಿಸಲಾಗಿದೆ ಎಂದು ಕಮೀಷನರ್ ತಿಳಿಸಿದ್ದಾರೆ.

ಸಮೀಕ್ಷೆಯ ಅಂತಿಮ ವರದಿ ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿದೆ. ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದಲ್ಲಿ  ಪ್ರಸ್ತುತಪಡಿಸಲಾಗುವುದು.  ಆದರೆ ಆರೋಗ್ಯ ಸಮಸ್ಯೆಗಳ ಕಾರಣ, ನಾನು ನ್ಯಾಯಾಲಯದಿಂದ 15 ದಿನಗಳ ಕಾಲಾವಕಾಶವನ್ನು ಕೇಳಿದ್ದೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಮೀಷನರ್ ಅವರು ಹೇಳಿದ್ದಾರೆ.

ನನಗೆ ಕಳೆದ ಮೂರು ದಿನಗಳಿಂದ ಜ್ವರವಿದೆ. ವರದಿಯನ್ನು ವಿಶ್ಲೇಷಿಸಲು ನನಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯವು ಅಡ್ವೋಕೇಟ್ ಕಮಿಷನರ್ ಮತ್ತು ಮಸೀದಿ ಸಮಿತಿಯ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಸಂಭಾಲ್ ಮಸೀದಿಯ ಸಮೀಕ್ಷೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಕಾರಣ ಯಾವುದೇ ಆದೇಶವನ್ನು ನೀಡಲಿಲ್ಲ ಎಂದು ಸಂಭಾಲ್‌ನ ಜಿಲ್ಲಾ ಸರ್ಕಾರಿ ವಕೀಲ ಪ್ರಿನ್ಸ್ ಶರ್ಮಾ ಹೇಳಿದರು.

ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂದು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಸಮೀಕ್ಷೆಗೆ ನ್ಯಾಯಾಲಯವು ಆದೇಶ ನೀಡಿತ್ತು. ನಂತರ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ನವೆಂಬರ್ 19 ರಂದು ನಡೆಸಲಾಗಿತ್ತು.

ನವೆಂಬರ್ 24ರಂದು ಮತ್ತೆ ಮಸೀದಿ ಸಮೀಕ್ಷೆ ನಡೆಸುತ್ತಿದ್ದಾಗ ಹಿಂಸಾಚಾರ ನಡೆದಿತ್ತು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು. ಸುಮಾರು 29 ನಮ್ಮ ಸಿಬ್ಬಂದಿ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದರು.

ಹಿಂಸಾಚಾರದ ನಂತರ,  ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ  ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತು.  ನವೆಂಬರ್ 29 ರಂದು ಸುಪ್ರೀಂ ಕೋರ್ಟ್, ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಸಂಬಂಧಿಸಿದ ಯಾವುದೇ ಆದೇಶವನ್ನು ನೀಡದಂತೆ ಸಂಭಾಲ್ ವಿಚಾರಣಾ ನ್ಯಾಯಾಲಯಕ್ಕೆ ಆದೇಶ ನೀಡಿತ್ತು.

ಅಲಹಾಬಾದ್ ಹೈಕೋರ್ಟ್  ಮಸೀದಿ ಸಮಿತಿಯ ಅರ್ಜಿಯನ್ನು ವಿಚಾರಣೆ ನಡೆಸುವವರೆಗೂ ಸಮೀಕ್ಷೆಯ  ವರದಿಯನ್ನು ಸೀಲ್ ಮಾಡಿ ಇಡುವಂತೆ  ಸುಪ್ರೀಂ ಕೋರ್ಟ್ ಆದೇಶಿಸಿದೆ.

ಸಂಭಾಲ್ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು (ಹಿರಿಯ ವಿಭಾಗ) ನವೆಂಬರ್ 19 ರಂದು ಜೈನ್ ಅವರು ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಶಾಹಿ ಮಸೀದಿಯ ಸಮೀಕ್ಷೆಯನ್ನು ನಡೆಸಲು ಅಡ್ವೋಕೆಟ್ ಕಮಿಷನರ್ ಅನ್ನು ನೇಮಿಸುವಂತೆ ಆದೇಶಿಸಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ರಮೇಶ್ ರಾಘವ್ ಅವರನ್ನು ಅಡ್ವೋಕೆಟ್ ಕಮಿಷನರ್ ಆಗಿ ನೇಮಿಸಲಾಯಿತು. ಅದೇ ದಿನ ಸಂಜೆ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕ್ರಿಶನ್ ಕುಮಾರ್ ಅವರ ಸಮ್ಮುಖದಲ್ಲಿ ಮಸೀದಿಯ ಆರಂಭಿಕ ಸಮೀಕ್ಷೆಯನ್ನು ನಡೆಸಲಾಯಿತು.

ಎರಡನೇ ಸುತ್ತಿನ ಸಮೀಕ್ಷೆಯು ನವೆಂಬರ್ 24 ರಂದು ಪ್ರಾರಂಭವಾಯಿತು. ನವೆಂಬರ್ 29 ರಂದು ಮುಂದಿನ ವಿಚಾರಣೆಯಲ್ಲಿ, ವಿಚಾರಣಾ ನ್ಯಾಯಾಲಯವು ವರದಿಯನ್ನು ಪೂರ್ಣಗೊಳಿಸಲು 10 ದಿನಗಳ ಕಾಲಾವಕಾಶ ನೀಡಿತ್ತು. ಗಡುವು ಸೋಮವಾರ  (ಡಿ.10) ಕೊನೆಗೊಂಡಿತು.

ಇದನ್ನೂ ಓದಿ…ಆಂಧ್ರ ಸಂಪುಟಕ್ಕೆ ಪವನ್ ಕಲ್ಯಾಣ್ ಸಹೋದರ ನಾಗಬಾಬು ಸೇರ್ಪಡೆ; ಸಿಎಂ ನಾಯ್ಡು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...