Homeಮುಖಪುಟಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

ಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

- Advertisement -
- Advertisement -

ಮಂಗಳವಾರ ಸಂಸತ್ತಿನ ಆವರಣದಲ್ಲಿ ಅದಾನಿ ಮತ್ತು ಮೋದಿ ಅವರ ವಿರುದ್ಧ ಹಲವಾರು ವಿರೋಧ ಪಕ್ಷದ ಸಂಸದರು ಕಪ್ಪು ‘ಜೋಲಾ’ಗಳನ್ನು (ಬ್ಯಾಗ್) ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಚಿತ್ರಗಳನ್ನು ಮತ್ತು ಅದರ ಮುಂಭಾಗದಲ್ಲಿ ‘ಮೋದಿ ಅದಾನಿ ಭಾಯಿ ಭಾಯಿ’ ಎಂದು ಬರೆದಿರುವ ಬ್ಯಾಗ್‌ಗಳನ್ನು ಸಂಸದರು ಪ್ರದರ್ಶಿಸಿದ್ದಾರೆ. ಅದಾನಿ ಭ್ರಷ್ಟಾಚಾರ

ಚಳಿಗಾಲದ ಅಧಿವೇಶನ ಪ್ರಾರಂಭವಾದ ನಂತರ ವಿಪಕ್ಷಗಳು ಅಧಿವೇಶನಕ್ಕೆ ಮುಂಚಿತವಾಗಿ ಬೆಳಿಗ್ಗೆ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್, ಡಿಎಂಕೆ, ಜೆಎಂಎಂ, ಎಡಪಕ್ಷಗಳ ಸಂಸದರು ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಮಂಗಳವಾರ ಕೂಡಾ ಪ್ರತಿಭಟನೆ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಒಂದು ಬದಿಯಲ್ಲಿ ಮೋದಿ ಮತ್ತು ಅದಾನಿ ಅವರ ವ್ಯಂಗ್ಯ ಚಿತ್ರಗಳು ಮತ್ತು ಬ್ಯಾಗ್‌ನ ಹಿಂಭಾಗದಲ್ಲಿ ‘ಮೋದಿ ಅದಾನಿ ಭಾಯಿ ಭಾಯ್’ ಎಂದು ಬರೆದ ಕಪ್ಪು ‘ಬ್ಯಾಗ್‌’ಗಳನ್ನು ಅವರು ಪ್ರದರ್ಶಿಸಿದ್ದಾರೆ . ಇದೇ ವೇಳೆ ಅವರು ಮೋದಿ ಮತ್ತು ಅದಾನಿ ನಡುವಿನ ಆರೋಪದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಈ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. ಅದಾನಿ ಭ್ರಷ್ಟಾಚಾರ

ಇದಕ್ಕೂ ಮುನ್ನ, ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವು ಮತ್ತು ಸಂಸತ್ತಿನಲ್ಲಿ ಮುಂದಿನ ಹಾದಿಯನ್ನು ಪರಿಶೀಲಿಸಲು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರ ಸಭೆಯನ್ನು ರಾಹುಲ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು.

ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ಇಂಡಿಯಾ ಒಕ್ಕೂಟದ ಪಕ್ಷಗಳ ನಾಯಕರು ಸಂಸತ್ತಿನ ಕಟ್ಟಡದಲ್ಲಿ ಪ್ರತಿಭಟನೆ ನಡೆಸಿದ ಒಂದು ದಿನದ ನಂತರ ಈ ಪ್ರತಿಭಟನೆ ನಡೆದಿದೆ. ಸೋಮವಾರ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಮತ್ತು ಗೌತಮ್ ಅದಾನಿ ಅವರ ಮುಖವಾಡಗಳನ್ನು ಧರಿಸಿರುವ ಕಾಂಗ್ರೆಸ್ ಸದಸ್ಯರೊಂದಿಗೆ ಅಣಕು ‘ಸಂದರ್ಶನ’ ನಡೆಸಿದ್ದರು.

ಸಂಸತ್ತಿನ ಆವರಣದಲ್ಲಿರುವ ಮಕರ ದ್ವಾರದ ಮೆಟ್ಟಿಲುಗಳ ಮುಂದೆ ನಿಂತು, ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಸೋಮವಾರ “ಮೋದಿ, ಅದಾನಿ ಏಕ್ ಹೈ” ಮತ್ತು “ನಮಗೆ ನ್ಯಾಯ ಬೇಕು” ಎಂಬ ಘೋಷಣೆಗಳನ್ನು ಕೂಗಿದ್ದರು.

ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದಲೂ ಅದಾನಿ ವಿಚಾರವಾಗಿ ಪ್ರತಿಪಕ್ಷಗಳ ಪ್ರತಿಭಟನೆಗಳು ಸಂಸತ್ತಿನ ಆವರಣದಲ್ಲಿ ನಡೆಯುತ್ತಿವೆ. ಅಮೆರಿಕದ ನ್ಯಾಯಾಲಯದಲ್ಲಿ ಅದಾನಿ ಮತ್ತು ಅವರ ಕಂಪೆನಿಯ ಇತರ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಸಲ್ಲಿಕೆಯಾದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಈ ವಿಚಾರವನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿವೆ.

ಇದನ್ನೂ ಓದಿ: ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...