Homeಮುಖಪುಟಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

ಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

- Advertisement -
- Advertisement -

ಮಂಗಳವಾರ ಸಂಸತ್ತಿನ ಆವರಣದಲ್ಲಿ ಅದಾನಿ ಮತ್ತು ಮೋದಿ ಅವರ ವಿರುದ್ಧ ಹಲವಾರು ವಿರೋಧ ಪಕ್ಷದ ಸಂಸದರು ಕಪ್ಪು ‘ಜೋಲಾ’ಗಳನ್ನು (ಬ್ಯಾಗ್) ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಚಿತ್ರಗಳನ್ನು ಮತ್ತು ಅದರ ಮುಂಭಾಗದಲ್ಲಿ ‘ಮೋದಿ ಅದಾನಿ ಭಾಯಿ ಭಾಯಿ’ ಎಂದು ಬರೆದಿರುವ ಬ್ಯಾಗ್‌ಗಳನ್ನು ಸಂಸದರು ಪ್ರದರ್ಶಿಸಿದ್ದಾರೆ. ಅದಾನಿ ಭ್ರಷ್ಟಾಚಾರ

ಚಳಿಗಾಲದ ಅಧಿವೇಶನ ಪ್ರಾರಂಭವಾದ ನಂತರ ವಿಪಕ್ಷಗಳು ಅಧಿವೇಶನಕ್ಕೆ ಮುಂಚಿತವಾಗಿ ಬೆಳಿಗ್ಗೆ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್, ಡಿಎಂಕೆ, ಜೆಎಂಎಂ, ಎಡಪಕ್ಷಗಳ ಸಂಸದರು ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಮಂಗಳವಾರ ಕೂಡಾ ಪ್ರತಿಭಟನೆ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಒಂದು ಬದಿಯಲ್ಲಿ ಮೋದಿ ಮತ್ತು ಅದಾನಿ ಅವರ ವ್ಯಂಗ್ಯ ಚಿತ್ರಗಳು ಮತ್ತು ಬ್ಯಾಗ್‌ನ ಹಿಂಭಾಗದಲ್ಲಿ ‘ಮೋದಿ ಅದಾನಿ ಭಾಯಿ ಭಾಯ್’ ಎಂದು ಬರೆದ ಕಪ್ಪು ‘ಬ್ಯಾಗ್‌’ಗಳನ್ನು ಅವರು ಪ್ರದರ್ಶಿಸಿದ್ದಾರೆ . ಇದೇ ವೇಳೆ ಅವರು ಮೋದಿ ಮತ್ತು ಅದಾನಿ ನಡುವಿನ ಆರೋಪದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಈ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದ್ದಾರೆ. ಅದಾನಿ ಭ್ರಷ್ಟಾಚಾರ

ಇದಕ್ಕೂ ಮುನ್ನ, ವಿವಿಧ ವಿಷಯಗಳ ಬಗ್ಗೆ ಪಕ್ಷದ ನಿಲುವು ಮತ್ತು ಸಂಸತ್ತಿನಲ್ಲಿ ಮುಂದಿನ ಹಾದಿಯನ್ನು ಪರಿಶೀಲಿಸಲು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರ ಸಭೆಯನ್ನು ರಾಹುಲ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು.

ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ಇಂಡಿಯಾ ಒಕ್ಕೂಟದ ಪಕ್ಷಗಳ ನಾಯಕರು ಸಂಸತ್ತಿನ ಕಟ್ಟಡದಲ್ಲಿ ಪ್ರತಿಭಟನೆ ನಡೆಸಿದ ಒಂದು ದಿನದ ನಂತರ ಈ ಪ್ರತಿಭಟನೆ ನಡೆದಿದೆ. ಸೋಮವಾರ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಮತ್ತು ಗೌತಮ್ ಅದಾನಿ ಅವರ ಮುಖವಾಡಗಳನ್ನು ಧರಿಸಿರುವ ಕಾಂಗ್ರೆಸ್ ಸದಸ್ಯರೊಂದಿಗೆ ಅಣಕು ‘ಸಂದರ್ಶನ’ ನಡೆಸಿದ್ದರು.

ಸಂಸತ್ತಿನ ಆವರಣದಲ್ಲಿರುವ ಮಕರ ದ್ವಾರದ ಮೆಟ್ಟಿಲುಗಳ ಮುಂದೆ ನಿಂತು, ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಸೋಮವಾರ “ಮೋದಿ, ಅದಾನಿ ಏಕ್ ಹೈ” ಮತ್ತು “ನಮಗೆ ನ್ಯಾಯ ಬೇಕು” ಎಂಬ ಘೋಷಣೆಗಳನ್ನು ಕೂಗಿದ್ದರು.

ಚಳಿಗಾಲದ ಅಧಿವೇಶನ ಆರಂಭವಾದಾಗಿನಿಂದಲೂ ಅದಾನಿ ವಿಚಾರವಾಗಿ ಪ್ರತಿಪಕ್ಷಗಳ ಪ್ರತಿಭಟನೆಗಳು ಸಂಸತ್ತಿನ ಆವರಣದಲ್ಲಿ ನಡೆಯುತ್ತಿವೆ. ಅಮೆರಿಕದ ನ್ಯಾಯಾಲಯದಲ್ಲಿ ಅದಾನಿ ಮತ್ತು ಅವರ ಕಂಪೆನಿಯ ಇತರ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಸಲ್ಲಿಕೆಯಾದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಈ ವಿಚಾರವನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿವೆ.

ಇದನ್ನೂ ಓದಿ: ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ಬಗರ್ ಹುಕುಂ ನ 2.23 ಲಕ್ಷ ಅರ್ಜಿ ತಿರಸ್ಕಾರ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...