Homeಮುಖಪುಟಇಂಡಿಯಾ ಮೈತ್ರಿಕೂಟವನ್ನು ಮಮತಾ ಬ್ಯಾನರ್ಜಿ ಮುನ್ನಡೆಸಲಿ : ಲಾಲು ಪ್ರಸಾದ್ ಯಾದವ್

ಇಂಡಿಯಾ ಮೈತ್ರಿಕೂಟವನ್ನು ಮಮತಾ ಬ್ಯಾನರ್ಜಿ ಮುನ್ನಡೆಸಲಿ : ಲಾಲು ಪ್ರಸಾದ್ ಯಾದವ್

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಮುನ್ನಡೆಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಅವಕಾಶ ನೀಡಬೇಕು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮಂಗಳವಾರ (ಡಿ.10) ಹೇಳಿದ್ದಾರೆ.

ಬಿಜೆಪಿ-ವಿರೋಧಿ ಒಕ್ಕೂಟದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಇಂಗಿತವನ್ನು ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿದ ಬೆನ್ನಲ್ಲೇ ಲಾಲು ಪ್ರಸಾದ್ ಯಾದವ್ ಅವರ ಪರ ಬ್ಯಾಟ್ ಬೀಸಿದ್ದಾರೆ.

ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್ ಮಮತಾ ಬ್ಯಾರ್ಜಿಯವರನ್ನು ಒಕ್ಕೂಟದ ನಾಯಕಿ ಎಂದು ಒಪ್ಪಿಕೊಂಡರೆ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಸೇರಿದಂತೆ ಯಾವುದೇ ಹಿರಿಯ ನಾಯಕರು ಇಂಡಿಯಾ ಒಕ್ಕೂಟದ ನಾಯಕತ್ವ ವಹಿಸುವುದಾದರೆ ನಮ್ಮದೇನು ಅಭ್ಯಂತರ ಇಲ್ಲ. ಆದರೆ, ಒಮ್ಮತದ ಮೂಲಕ ನಿರ್ಧಾರಕ್ಕೆ ಬರಬೇಕು ಎಂದು ಈ ಹಿಂದೆ ಲಾಲು ಪ್ರಸಾದ್ ಯಾದವ್ ಅವರ ಮಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದರು.

ಡಿಸೆಂಬರ್ 6ರಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಇಂಡಿಯಾ ಒಕ್ಕೂಟದ ಕಾರ್ಯಾಚರಣೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಅವಕಾಶ ನೀಡಿದರೆ ಒಕ್ಕೂಟದ ಜವಾಬ್ದಾರಿ ವಹಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಹುದ್ದೆಯ ಜೊತೆಗೆ ಪ್ರತಿಪಕ್ಷಗಳ ಒಕ್ಕೂಟವನ್ನು ಮುನ್ನಡೆಸುವ ಜವಬ್ದಾರಿಯನ್ನು ನಾನು ನಿಭಾಯಿಸಬಲ್ಲೆ ಎಂದಿದ್ದರು.

“ನಾನು ಇಂಡಿಯಾ ಒಕ್ಕೂಟ ರಚಿಸಿದ್ದೆ. ಅದನ್ನು ಮುನ್ನಡೆಸುವ ಜವಾಬ್ದಾರಿ ಈಗ ನಾಯಕತ್ವ ವಹಿಸಿರುವವರ ಮೇಲಿದೆ. ಅವರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಅಂದರೆ ಏನು ಮಾಡುವುದು? ನಾನು ಒಂದನ್ನು ಹೇಳಲು ಇಚ್ಚಿಸುತ್ತೇನೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕಿದೆ” ಎಂದು ಬೆಂಗಾಲಿ ಸುದ್ದಿವಾಹಿನಿ ನ್ಯೂಸ್ 18 ಬಾಂಗ್ಲಾ ಜೊತೆಗಿನ ಸಂದರ್ಶನದಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದರು.

ಡಿಸೆಂಬರ್ 15 ರಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಡೆಸಲು ಉದ್ದೇಶಿರುವ ರಾಜ್ಯವ್ಯಾಪಿ ಯಾತ್ರೆಯ ಕುರಿತು ಮಾತನಾಡಿರುವ ಲಾಲು ಪ್ರಸಾದ್ ಯಾದವ್ “ಅವರು ತಮ್ಮ ಕಣ್ಣುಗಳನ್ನು ರಿಫ್ರೆಶ್ ಮಾಡಲು ರಾಜ್ಯಾದ್ಯಂತ ಯಾತ್ರೆ ನಡೆಸುತ್ತಿದ್ದಾರೆ. ಆರ್‌ಜೆಡಿ ನೇತೃತ್ವದ ಸಮ್ಮಿಶ್ರ ಸರ್ಕಾರ 2025ರಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ” ಎಂದಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಡಿಸೆಂಬರ್ 15 ರಿಂದ ರಾಜ್ಯಾದ್ಯಂತ ‘ಮಹಿಳಾ ಸಂವಾದ ಯಾತ್ರೆ’ ಎಂಬ ಹೆಸರಿನಲ್ಲಿ ಯಾತ್ರೆ ನಡೆಸಲಿದ್ದಾರೆ. ಈ ವೇಳೆ ಅವರು ರಾಜ್ಯ ಸರ್ಕಾರದ ಏಳು-ಪರಿಹಾರ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ ಮತ್ತು ಮಹಿಳೆಯರೊಂದಿಗೆ ಸಂವಾದದ ಮೂಲಕ ಜನರ ನಾಡಿಮಿಡಿತ ಅರಿಯಲಿದ್ದಾರೆ.

ಇದನ್ನೂ ಓದಿ : ಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...