Homeಮುಖಪುಟವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಭಾಷಣ : ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಮಾಡಿರುವ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಮಾಹಿತಿ ಕೇಳಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಯಾದವ್ ವಿವಾದಾತ್ಮಕ ಭಾಷಣ ಮಾಡಿರುವ ಕುರಿತು ಪ್ರಕಟಗೊಂಡಿರುವ ಸುದ್ದಿಗಳನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್, ಯಾದವ್ ಮಾಡಿರುವ ಭಾಷಣದ ಪೂರ್ಣಪಾಠ ಪಡೆದು ಮಾಹಿತಿ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

ನ್ಯಾ.ಯಾದವ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಹಲವು ದೂರುಗಳನ್ನು ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್ ಮಾಹಿತಿ ಕೋರಿದೆ.

ನ್ಯಾ. ಯಾದವ್ ಅವರ ಭಾಷಣದ ಕುರಿತು ಕಳವಳ ವ್ಯಕ್ತಪಡಿಸಿ ಸೋಮವಾರ (ಡಿ.9) ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಮತ್ತು ಕ್ಯಾಂಪೇನ್ ಫಾರ್ ಜುಡೀಶಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (ಸಿಜೆಎಆರ್) ಸಿಜೆಐ ಸಂಜೀವ್ ಖನ್ನಾ ಅವರಿಗೆ ಪತ್ರ ಬರೆದಿದ್ದರು.

ನ್ಯಾ. ಶೇಖರ್ ಕುಮಾರ್ ಯಾದವ್ ವಿರುದ್ಧ ಆಂತರಿಕ ತನಿಖೆ ನಡೆಸುವಂತೆ ಮತ್ತು ವಿಚಾರಣೆಗೆ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಅವರಿಂದ ವಾಪಸ್ ಪಡೆಯುವಂತೆ ಸಿಜೆಎಆರ್ ತನ್ನ ಪತ್ರದಲ್ಲಿ ಒತ್ತಾಯಿಸಿತ್ತು. ಯಾದವ್ ಅವರ ಹೇಳಿಕೆಗಳು ಅವರ ನ್ಯಾಯಾಂಗ ಕಾರ್ಯಗಳ ನಿರ್ವಹಣೆಯಲ್ಲಿ ನಿಷ್ಪಕ್ಷಪಾತ, ನ್ಯಾಯಸಮ್ಮತತೆ ಮತ್ತು ತಟಸ್ಥತೆಯ ಕೊರತೆಯನ್ನು ಸೂಚಿಸುತ್ತದೆ ಎಂದಿತ್ತು.

ನ್ಯಾ. ಯಾದವ್ ಅವರ ಹೇಳಿಕೆ ಇಡೀ ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುತ್ತವೆ. ಇಂತಹ ಪಕ್ಷಪಾತ ಪ್ರದರ್ಶಿಸುವ ವ್ಯಕ್ತಿಗಳಿಗೆ ನ್ಯಾಯಾಂಗದಲ್ಲಿ ಸ್ಥಾನವಿಲ್ಲ ಎಂದು ರಾಜ್ಯಸಭೆಯ ಮಾಜಿ ಸಂಸದೆಯೂ ಆಗಿರುವ ಬೃಂದಾ ಕಾರಟ್ ಸಿಜೆಐಗೆ ಬರೆದ ಪತ್ರದಲ್ಲಿ ಹೇಳಿದ್ದರು.

ನ್ಯಾಯಾಧೀಶರು ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಪೂರ್ವಾಗ್ರಹ ಪೀಡಿತ ಅಭಿಪ್ರಾಯಗಳನ್ನು ಹೊಂದಿರುವ ಕಾರಣ ಅವರಿಂದ ಯಾವುದೇ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ನ್ಯಾಯಮೂರ್ತಿ ಯಾದವ್ ಅವರ ಭಾಷಣವು ಸಂವಿಧಾನದ ಮೇಲಿನ ದಾಳಿಯಾಗಿದೆ ಭಾರತ ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ಅವಮಾನವಾಗಿದೆ ಎಂದು ಸಿಪಿಐ(ಎಂ) ಪಾಲಿಟ್‌ಬ್ಯುರೊ ಸದಸ್ಯ ಬೃಂದಾ ಕಾರಟ್ ಅಸಮಧಾನ ವ್ಯಕ್ತಪಡಿಸಿದ್ದರು.

ನ್ಯಾ. ಯಾದವ್ ಅವರ ವಿವಾದಾತ್ಮಕ ಭಾಷಣ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಸಂಸದ ಅಸಾದುದ್ದೀನ್ ಓವೈಸಿ ಅವರು ಯಾದವ್ ಅವರನ್ನು ಪದಚ್ಯುತಿಗೊಳಿಸುವ ನೋಟಿಸ್‌ಗೆ ಸಹಿ ಹಾಕಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಓವೈಸಿ, “ನ್ಯಾಯಾಧೀಶರ ನಡವಳಿಕೆಯು ಸುಪ್ರೀಂ ಕೋರ್ಟ್‌ನ ‘ನ್ಯಾಯಾಂಗ ಜೀವನದ ಮೌಲ್ಯಗಳ ಮರುಸ್ಥಾಪನೆ’ ನಿಯಮ ಸೇರಿದಂತೆ ಸಾಂವಿಧಾನಿಕ ಮೌಲ್ಯಗಳನ್ನು ಉಲ್ಲಂಘಿಸಿದೆ” ಎಂದಿದ್ದಾರೆ.

“ನನ್ನ ನೋಟಿಸ್ ಅನ್ನು ಲೋಕಸಭಾ ಸ್ಪೀಕರ್ ಪರಿಗಣಿಸಬೇಕಾದರೆ 100 ಲೋಕಸಭಾ ಸದಸ್ಯರ ಸಹಿ ಬೇಕಾಗಿದೆ” ಎಂದು ಓವೈಸಿ ತಿಳಿಸಿದ್ದಾರೆ.

ನ್ಯಾ. ಶೇಖರ್ ಕುಮಾರ್ ಯಾದವ್ ಭಾಷಣಕ್ಕೆ ಅಖಿಲ ಭಾರತ ವಕೀಲರ ಒಕ್ಕೂಟ ಕೂಡ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಷ್ಟ್ರಪತಿ ಮತ್ತು ಸಿಜೆಐಗೆ ಪತ್ರ ಬರೆದಿರುವ ಒಕ್ಕೂಟ, “ಯಾದವ್ ಅವರ ಭಾಷಣ ಮುಸ್ಲಿಂ ಅಲ್ಪಸಂಖ್ಯಾತರರ ವಿರುದ್ದದ ದ್ವೇಷ ಭಾಷಣವಾಗಿದೆ”ಎಂದಿದೆ. ಯಾದವ್ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಇದನ್ನೂ ಓದಿ : ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...