Homeಮುಖಪುಟಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

- Advertisement -
- Advertisement -

ರಾಜಕೀಯ ಅರಾಜಕತೆ ಉಂಟಾಗಿರುವ ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ಆಯ್ಕೆಯಾಗಿದ್ದಾರೆ. ಮಂಗಳವಾರ (ಡಿ.10) ಹಾಲಿ ಸರ್ಕಾರ ಮತ್ತು ಮುಂಬರುವ ಸರ್ಕಾರದ ಮುಖ್ಯಸ್ಥರ ಜೊತೆ ಬಶೀರ್ ಸಭೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸಿರಿಯಾದ ಅಧ್ಯಕ್ಷರಾಗಿದ್ದ ಬಶರ್ ಅಲ್ ಅಸದ್ ಪಲಾಯನ ಮಾಡಿದ ಬಳಿಕ, ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಬಂಡುಕೋರರನ್ನು ಬೆಂಬಲಿಸಿದ್ದಾರೆ. ನೂತನ ಮಧ್ಯಂತರ ಸರ್ಕಾರ ರಚನೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗಾಗಿ, ಬಂಡುಕೋರರ ಗುಂಪಿನ ನಾಯಕ ಮೊಹಮ್ಮದ್ ಅಲ್ ಬಶೀರ್ ಅಧಿಕಾರವಹಿಸಿಕೊಂಡಿದ್ದಾರೆ. 2025ರ ಮಾರ್ಚ್‌ವರೆಗೆ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಶೀರ್ ಆಡಳಿತವನ್ನು ‘ಪರಿವರ್ತನಾ ಸರ್ಕಾರ’ (Transitional Govt) ಎಂದು ಹೇಳಲಾಗಿದೆ.

ಸೋಮವಾರ (ಡಿ.9) ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದರು.

ಆ ಬಳಿಕ, ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಪ್ರಧಾನಿ ಜಲಾಲಿ ಹೇಳಿದ್ದರು.

ವಾಯುವ್ಯ ಸಿರಿಯಾದ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯವನ್ನು ಬಂಡುಕೋರರ ಪ್ರಬಲ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ತನ್ನ ವಶಕ್ಕೆ ಪಡೆದುಕೊಂಡ ಬಳಿಕ, ಕಳೆದ ಜನವರಿಯಿಂದ ಮೊಹಮ್ಮದ್ ಅಲ್ ಬಶೀರ್ ಅಲ್ಲಿನ ಆಡಳಿತ ನೋಡಿಕೊಳ್ಳುತ್ತಿದ್ದರು. ಬಶೀರ್ ಆಡಳಿತವನ್ನು ಬಂಡುಕೋರರ ಗುಂಪು ‘ಮುಕ್ತಿ ಸರ್ಕಾರ’ (Salvation government) ಎಂದಿದೆ.

ಮಂಗಳವಾರ ನಡೆಸಿದ ಸಭೆಯಲ್ಲಿ ಮೊಹಮ್ಮದ್ ಅಲ್ ಬಶೀರ್ ಅವರು ಮುಂದಿನ ಜವಾಬ್ದಾರಿ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ. ದೇಶದ ಜನರು ‘ಸ್ಥಿರತೆ ಮತ್ತು ಶಾಂತತೆಯನ್ನು ಆನಂದಿಸಿ’ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಸಿರಿಯಾದ ಹೊಸ ಸರ್ಕಾರ ‘ಉತ್ತಮ ಸಂದೇಶ’ ಸಾರಲಿ ಎಂದು ಸಿರಿಯಾದ ವಿಶ್ವಸಂಸ್ಥೆಯ ಪ್ರತಿನಿಧಿ ಹೇಳಿದ್ದಾರೆ.

ಸಿರಿಯಾದ ಭವಿಷ್ಯದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಹೊಸ ಸರ್ಕಾರ ಅಲ್ಪಸಂಖ್ಯಾತರನ್ನು ಗೌರವಿಸಲಿ, ವಿಶ್ವಾಸಾರ್ಹತೆ ಕಾಪಾಡಲಿ ಮತ್ತು ಎಲ್ಲರ ಒಳಗೊಳ್ಳುವಿಕೆಯನ್ನು ಖಾತ್ರಿಪಡಿಸಲಿ ಎಂದು ಯುಎಸ್‌ ಸರ್ಕಾರದ ಕಾರ್ಯದರ್ಶಿ ಆಂಟೋನಿ ಜೆ. ಬ್ಲಿಂಕೆನ್ ತಿಳಿಸಿದ್ದಾರೆ.

ಮೊಹಮ್ಮದ್ ಬಶೀರ್ ಯಾರು?

ಎಲೆಕ್ಟ್ರಿಕಲ್ ಎಂಜಿನಿಯರ್ ಪದವಿ ಪಡೆದಿರುವ ಸಿರಿಯಾದ ನೂತನ ಹಂಗಾಮಿ ಪ್ರಧಾನಿ ಮೊಹಮ್ಮದ್ ಅಲ್ ಬಶೀರ್, 2011 ರಲ್ಲಿ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗುವ ಮೊದಲು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡಿದ್ದರು.

ಕಳೆದ ಜನವರಿಯಲ್ಲಿ ಬಶೀರ್ ಅವರನ್ನು ತಮ್ಮ ನಿಯಂತ್ರಣದಲ್ಲಿರುವ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳ ‘ಮುಕ್ತಿ ಸರ್ಕಾರ’ದ (Salvation government) ಪ್ರಧಾನ ಮಂತ್ರಿಯಾಗಿ ಅಥವಾ ಆಡಳಿತಗಾರನಾಗಿ ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ನೇಮಿಸಿತ್ತು.

ಇಸ್ಲಾಮಿಕ್ ನೀತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಧಾರ್ಮಿಕ ಮಂಡಳಿಯ ಮೂಲಕ ಸಚಿವಾಲಯಗಳು, ಸ್ಥಳೀಯ ಇಲಾಖೆಗಳು, ನ್ಯಾಯಾಂಗ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಬಂಡುಕೋರರ ಮುಕ್ತಿ ಸರ್ಕಾರ ಒಂದು ರಾಜ್ಯದಂತೆ ಕಾರ್ಯನಿರ್ವಹಿಸಿತ್ತು.

ಬಂಡುಕೋರರ ಗುಂಪು ಹೆಚ್‌ಟಿಎಸ್ ಮತ್ತು ಅದರ ಮಿತ್ರರು ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ, ಅಲ್ಲಿನ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿತ್ತು. ಆಗ ಮುಕ್ತಿ ಸರ್ಕಾರದ ಮೂಲಕ ಅವುಗಳನ್ನು ಮೊಹಮ್ಮದ್ ಅಲ್ ಬಶೀರ್ ಪುನಃ ಸ್ಥಾಪಿಸಿದ್ದರು.

ಬಂಡುಕೋರರ ಗುಂಪು ಸಿರಿಯಾದ ರಾಜಧಾನಿ ಡಮಾಸ್ಕಸ್ ಮೇಲೆ ಡಿ.8ರಂದು ಹಿಡಿತ ಸಾಧಿಸಿದ್ದಾರೆ. ಆ ಬಳಿಕ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ ರಷ್ಯಾದ ಮಾಸ್ಕೋಗೆ ಪಲಾಯನ ಮಾಡಿದೆ. ಸಿರಿಯಾ ಬಂಡುಕೋರರ ವಶವಾಗುವ ಮೂಲಕ ಬಶರ್ ಅಲ್ ಅಸಾದ್ ಕುಟುಂಬದ 50 ವರ್ಷಗಳ ನಿರಂಕುಶ ಆಡಳಿತ ಕೊನೆಗೊಂಡಿದೆ. ಬಂಡುಕೋರರ ಗುಂಪು, ” ನಮ್ಮ ಹೋರಾಟ ಅಸದ್ ಆಡಳಿತ ವಿರುದ್ದವಾಗಿತ್ತು. ಆತನ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೆ ಎಲ್ಲರನ್ನು ಒಳಗೊಂಡ ಸರ್ಕಾರ ರಚಿಸಿ ದೇಶ ಮುನ್ನಡೆಸುತ್ತೇವೆ” ಎಂದಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...