Homeಮುಖಪುಟಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ...

ಸಿರಿಯಾ ಬಳಿಕ ಕೊರಿಯಾದಲ್ಲಿ ಅರಾಜಕತೆ : ಅಧ್ಯಕ್ಷರ ವಿರುದ್ಧ ಜನಾಕ್ರೋಶ ; ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಸಚಿವ!

- Advertisement -
- Advertisement -

ಡಿಸೆಂಬರ್ 3, 2024ರಂದು ದಕ್ಷಿಣ ಕೊರಿಯಾದಲ್ಲಿ ಏಕಾಏಕಿ ‘ತುರ್ತು ಮಿಲಿಟರಿ ಆಡಳಿತ’ ಘೋಷಣೆ ಮಾಡಿದ ಬಳಿಕ ಉಂಟಾಗಿರುವ ರಾಜಕೀಯ ಅರಾಜಕತೆ, ದಿನಕ್ಕೊಂದು ಬೆಳವಣಿಗೆಗೆ ಕಾರಣವಾಗುತ್ತಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಡಿ.3 ಮಂಗಳವಾರ ಸಂಜೆ (ಭಾರತೀಯ ಕಾಲಮಾನ ಸಂಜೆ 6.57 ನಿಮಿಷ) ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದರು.

ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಕೇವಲ 6 ಗಂಟೆಗಳಲ್ಲೇ ಹಿಂಪಡೆದರು.

ಮಿಟಲಿರಿ ಆಡಳಿತ ಘೋಷಣೆ ಬಳಿ ಏನಾಯಿತು? 

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದರು. ಇದರಿಂದ ಬೆದರಿದ ಅಧ್ಯಕ್ಷ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದರು.

ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು, ಸಂಸದರು ಅಸೆಂಬ್ಲಿ ಕಟ್ಟಡ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ಜನರ ಆಕ್ರೋಶಕ್ಕೆ ಮಣಿದು ತನ್ನ ಆದೇಶವನ್ನು ಹಿಂಪಡೆದ ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅಧ್ಯಕ್ಷ ಯೋಲ್, “ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ವಾಗ್ದಂಡನೆ ಗೊತ್ತುವಳಿ 

ವಿಪಕ್ಷಗಳನ್ನು ಹತ್ತಿಕ್ಕಲು ಮಿಲಿಟರಿ ಆಡಳಿತ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿತ್ತು. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಬಂತು. ಆದರೆ, ಸೂಕ್ತ ಬೆಂಬಲ ದೊರೆಯದ ಹಿನ್ನೆಲೆ ವಿಫಲವಾಯಿತು.

ಅಸೆಂಬ್ಲಿಯಲ್ಲಿ ಒಟ್ಟು 195 ಸದಸ್ಯರು ಮತ ಚಲಾಯಿಸಿದ್ದಾರೆ. ಆದರೆ, ಮತ ಚಲಾಯಿಸಿದ ಸದಸ್ಯರ ಸಂಖ್ಯೆಯು ಒಟ್ಟು ಸದಸ್ಯರ ಮೂರನೇ ಎರಡರಷ್ಟು ಬಹುಮತವನ್ನು ತಲುಪಲಿಲ್ಲ. ಆದ್ದರಿಂದ ಈ ವಿಷಯದ ಮೇಲಿನ ಮತವು ಮಾನ್ಯವಾಗಿಲ್ಲ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ವೂ ವೊನ್-ಶಿಕ್ ಹೇಳಿದ್ದಾರೆ.

300 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಮೂರನೇ ಎರಡರಷ್ಟು ಅಂದರೆ 200 ಮತಗಳ ಅಗತ್ಯವಿತ್ತು. ಸದನದಲ್ಲಿ ವಿಪಕ್ಷಗಳು 192 ಸದಸ್ಯರನ್ನು ಹೊಂದಿದ್ದು, ಆಡಳಿತಾರೂಢ ಮೈತ್ರಿಕೂಟದ ಮೂವರು ನಿರ್ಣಯದ ಪರ ಮತ ಹಾಕಿದ್ದರು. ಅಧ್ಯಕ್ಷ ಯೂನ್ ಅವರ ಪೀಪಲ್ ಪವರ್ ಪಾರ್ಟಿ(ಪಿಪಿಪಿ)ಯ ಸದಸ್ಯರು ಮತದಾನವನ್ನು ಬಹಿಷ್ಕರಿಸಿದ್ದರು.

ಅಧ್ಯಕ್ಷರ ವಿರುದ್ಧ ಮತ್ತೊಂದು ವಾಗ್ದಂಡನೆ ಗೊತ್ತುವಳಿ ಮಂಡಿಸಲು ವಿಪಕ್ಷಗಳಿಗೆ ಡಿಸೆಂಬರ್ 11ರ ಬಳಿಕವಷ್ಟೇ ಅವಕಾಶವಿತ್ತು. ಹಾಗಾಗಿ, ಮುಂದಿನ ಶನಿವಾರ (ಡಿ.15) ಪದಚ್ಯುತಿಗೆ ಆಗ್ರಹಿಸಿ ಮತ್ತೊಂದು ವಾಗ್ದಂಡನೆ ಗೊತ್ತುವಳಿ ಮಂಡಿಸುವ ಸಾಧ್ಯತೆ ಇದೆ.

ಕ್ಷಮೆ ಯಾಚಿಸಿದ ಅಧ್ಯಕ್ಷ ಯೋಲ್

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಘೋಷಿಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್, ದೇಶದ ಜನರ ಕ್ಷಮೆ ಯಾಚಿಸಿದ್ದಾರೆ. ಸಾರ್ವಜನಿಕವಾಗಿ ಗದ್ದಲ ಸೃಷ್ಟಿಯಾಗುವಂತೆ ಆದೇಶ ಹೊರಡಿಸಿದ್ದಕಾಗಿ ಕ್ಷಮೆ ಕೋರುತ್ತಿರುವುದಾಗಿ ದೂರದರ್ಶನದ ಭಾಷಣದಲ್ಲಿ ಅವರು ಶನಿವಾರ (ಡಿ.7) ಹೇಳಿದ್ದಾರೆ. ಸೇನಾ ಆಡಳಿತ ಜಾರಿಯಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಯೋಲ್ ವಿರುದ್ದ ತನಿಖೆ 

ದೇಶದಲ್ಲಿ ಮಿಲಿಟರಿ ಆಡಳಿತ ಹೇರಿಕೆ ಮಾಡಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್, ಆಂತರಿಕ ಇಲಾಖೆ ಸಚಿವ ಮತ್ತು ರಕ್ಷಣಾ ಇಲಾಖೆಯ ಮಾಜಿ ಸಚಿವರ ವಿರುದ್ಧ ದಕ್ಷಿಣ ಕೊರಿಯಾ ಪ್ರಾಸಿಕ್ಯೂಟರ್‌ಗಳು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಮಂಗಳವಾರ (ಡಿ.10) ಯೋಲ್ ಅವರ ಕಚೇರಿಗಳಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಯೋಲ್ ಅವರ ವಿದೇಶ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗಿದೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಅವರನ್ನು ಬಂಧಿಸಿರುವ ಪೊಲೀಸರು ಕಸ್ಟಡಿಯಲ್ಲಿಟ್ಟಿದ್ದಾರೆ. ಅಲ್ಲಿ ಕಿಮ್ ಯೋಂಗ್-ಹ್ಯುನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್ ಯೋಂಗ್-ಹ್ಯುನ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ಅಧ್ಯಕ್ಷ ಯೋಲ್ ನೇಮಿಸಿದ್ದಾರೆ.

ಏಪ್ರಿಲ್ ಅಥವಾ ಮೇನಲ್ಲಿ ಚುನಾವಣೆ ಸಾಧ್ಯತೆ

ಮಿಲಿಟರಿ ಆಡಳಿತ ಹೇರಲು ವಿಫಲ ಯತ್ನ ನಡೆಸಿ ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿರುವ ಅಧ್ಯಕ್ಷ
ಯೂನ್ ಸುಕ್ ಯೋಲ್ ಅವರು ಫೆಬ್ರವರಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಏಪ್ರಿಲ್-ಮೇನಲ್ಲಿ ದೇಶದಲ್ಲಿ ಚುನಾವಣೆ ನಡೆಯಬಹುದು ಎಂದು ದಕ್ಷಿಣ ಕೊರಿಯಾದ ಆಡಳಿತ ಪಕ್ಷ ಪೀಪಲ್ ಪವರ್ ಪಾರ್ಟಿ (ಪಿಪಿಪಿ) ಹೇಳಿದೆ. ಆದರೆ, ಅದಕ್ಕೂ ಮುನ್ನ ಸಂಸತ್ತಿನಲ್ಲಿ ಅಧ್ಯಕ್ಷರ ಪದಚ್ಯುತಿಗೆ ಚುನಾವಣೆ ನಡೆದರೆ ಯೋಲ್ ತನ್ನ ಸ್ಥಾನ ಕಳೆದುಕೊಳ್ಳಬಹುದು.

ಅಸೆಂಬ್ಲಿ ಮುಂದೆ ಬೃಹತ್ ಪ್ರತಿಭಟನೆ

ಮಿಲಿಟರಿ ಆಡಳಿತದ ವಿಫಲ ಯತ್ನದ ಬಳಿಕ ಅಧ್ಯಕ್ಷ ಯೋನ್ ಸುಕ್ ಯೋಲ್ ರಾಜೀನಾಮೆಗೆ ಆಗ್ರಹಿಸಿ ದೇಶದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಮಂಗಳವಾರ (ಡಿ.10) ರಾಜಧಾನಿ ಸಿಯೋಲ್‌ನಲ್ಲಿ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಜಮಾಯಿಸಿದ ಸಾವಿರಾರು ಜನರು ಕೈಯ್ಯಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟಿಸಿದರು. ಯೋಲ್ ಪದಚ್ಯುತಿಗೆ ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಸುಮಾರು 40 ಸಾವಿರ ಜನರು ಭಾಗವಹಿಸಿದ್ದಾರೆ ಎಂದು ಅದರ ಸಂಘಟಕರು ತಿಳಿಸಿದ್ದಾರೆ.

ಪ್ರಸ್ತುತ ದಕ್ಷಿಣ ಕೊರಿಯಾದಲ್ಲಿ ಯೋನ್ ಸುಕ್ ಯೋಲ್ ವಿರುದ್ದ ಜನಾಕ್ರೋಶವಿದೆ. ರಾಜೀನಾಮೆಗೆ ಒತ್ತಾಯಗಳು ಹೆಚ್ಚಾಗುತ್ತಿದೆ. ದೇಶದ ಅಲ್ಲಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿದೆ. ದಿನಕ್ಕೊಬ್ಬರು ಸಂಪುಟ ಸಚಿವರು ರಾಜೀನಾಮೆ ಕೊಡುತ್ತಿದ್ದಾರೆ. ಅಧ್ಯಕ್ಷ ತುರ್ತು ಪರಿಸ್ಥಿತಿ ಹೇರಲು ಯತ್ನಿಸಿ ತಪ್ಪು ಮಾಡಿದರು ಎಂಬ ಅಸಮಾಧಾನ ಅವರ ಸ್ವಪಕ್ಷದಲ್ಲೇ ಇದೆ.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

ಇದನ್ನೂ ಓದಿ : ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...