Homeಕರ್ನಾಟಕಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ದೇವೇಗೌಡರ ಮುದ್ರೆ!

- Advertisement -
- Advertisement -

| ನೀಲಗಾರ |

ಕಳೆದ ವಾರ ‘ಆಗಿಯೇಬಿಟ್ಟಿತಾ ಜೆಡಿಎಸ್-ಬಿಜೆಪಿ ಮೈತ್ರಿ?’ ಎಂಬ ವರದಿ ನಮ್ಮಲ್ಲಿ ಪ್ರಕಟವಾಗಿತ್ತು. ಮೇಲ್ನೋಟಕ್ಕೆ ಕುಮಾರಸ್ವಾಮಿಯವರ ಸಿದ್ಧಾಂತಹೀನ ದುಡುಕಿನ ಹೇಳಿಕೆಯಂತೆ ಕಂಡಿದ್ದ ಬೆಂಬಲದ ಹೇಳಿಕೆಯ ಹಿಂದೆ ಸ್ಪಷ್ಟ ಲೆಕ್ಕಾಚಾರವಿತ್ತು. ಸಿದ್ಧಾಂತಕ್ಕೂ ಅವರಿಗೂ ಸಂಬಂಧ ಹೇಗೂ ಇರಲಿಲ್ಲ. ಆದರೆ ಜೆಡಿಎಸ್‌ನ ಅಸ್ತಿತ್ವವೇ ಅಲುಗಾಡುತ್ತಿದೆ ಎಂಬುದನ್ನು ವಿವರಿಸುವ ನಾಲ್ಕು ಅಂಶಗಳನ್ನು ಆ ವರದಿಯಲ್ಲಿ ಬರೆಯಲಾಗಿತ್ತು.

ಇದೀಗ ದೇವೇಗೌಡರು ಒಂದು ಹೆಜ್ಜೆ ಮುಂದೆ ಹೋಗಿ, ಬಿಜೆಪಿ ಸರ್ಕಾರಕ್ಕೆ ಸ್ಪಷ್ಟ ಅಭಯವನ್ನು ನೀಡಿದ್ದಾರೆ. ಬಹಳ ನಾಜೂಕಿನಿಂದ ಅದಕ್ಕೆ ಬೇಕಾದ ಸಮರ್ಥನೆಯನ್ನೂ ಕೊಡುವ ಪ್ರಯತ್ನ ಮಾಡಿದ್ದಾರೆ. ‘ಸಿದ್ದರಾಮಯ್ಯ ಅಹಿಂದ ನಾಯಕ. ನಾನು ಯಾವ ಹಿಂದ ನಾಯಕನೋ ಗೊತ್ತಿಲ್ಲ. ಅವರು ಬೇಕಾದರೆ ಇನ್ನೊಂದು ಚುನಾವಣೆ ಬರಲಿ ಎಂತಲೂ ಹೇಳಬಹುದು. ನಾನು ಅಷ್ಟು ಶಕ್ತನಲ್ಲ. ಹಾಗಾಗಿ ಚುನಾವಣೆ ಬರುವುದು ಬೇಡ’ ಎಂದಿದ್ದಾರೆ. ದೇವೇಗೌಡರು ಖುದ್ದಾಗಿ ಫೋನ್ ಮಾಡಿ ಯಡಿಯೂರಪ್ಪನವರ ಹತ್ತಿರ ಮಾತಾಡಿದ್ದಾರೆ ಎಂತಲೂ ಹೇಳಲಾಗುತ್ತಿದೆ.

ಕಳೆದ ವಾರವೇ ಹೇಳಿದ್ದಂತೆ ಹಲವು ಶಾಸಕರು ಬಿಜೆಪಿಯ ಕಡೆಗೆ ಒಲವು ತೋರಿಸಿರುವುದು ಸ್ಪಷ್ಟವಿತ್ತು ಮತ್ತು ಬಿಜೆಪಿಯು ಘಾತುಕತನದಿಂದ ಇನ್ನಷ್ಟು ಜನರನ್ನು ಸೆಳೆದುಕೊಳ್ಳುವುದೂ ಕಷ್ಟವಿರಲಿಲ್ಲ. ಈ ವಾರದ ಬೆಳವಣಿಗೆ ಎಂದರೆ ಜೆಡಿಎಸ್‌ನ ವಿಧಾನಪರಿಷತ್ತಿನ ಸದಸ್ಯರು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವರು ಸಭೆಯೊಂದನ್ನು ನಡೆಸಿದರು ಮತ್ತು ರೆಸಾರ್ಟ್ವೊಂದಕ್ಕೆ ಜೊತೆಗೂಡಿ ಹೋಗುವ ಕುರಿತೂ ಚರ್ಚಿಸಿದರು. ಶಾಸಕರ ಅಸಮಾಧಾನ ತಣಿಸಲು ದೇವೇಗೌಡರು ಸಭೆ ಕರೆದರೆ, ಕುಮಾರಸ್ವಾಮಿ ಲಂಡನ್ ವಿಮಾನ ಹತ್ತಿದ್ದರು. ಇಂತಹ ಹಲವು ಸಂದರ್ಭಗಳಲ್ಲಿ ತಂದೆ, ಮಗ ಏನೋ ಭಿನ್ನ ನಿಲುವು ತಳೆದಂತೆ ಮಾಡುವುದು, ಸಭೆಯಲ್ಲಿ ತನ್ನ ಅಸಹಾಯಕತೆಯನ್ನು ತಂದೆ ಮಗನ ಮೇಲೆ ಅಥವಾ ಮಗ ತಂದೆಯ ಮೇಲೆ ಹಾಕುವುದು ಇವೆಲ್ಲವೂ ಸಂದಿಗ್ಧವನ್ನು ಮ್ಯಾನೇಜ್ ಮಾಡುವ ಗೌಡರ ಕುಟುಂಬದ ವಿಧಾನಗಳಲ್ಲಿ ಒಂದು. ಆದರೆ, ಅಂತಿಮವಾಗಿ ಇಬ್ಬರೂ ಒಂದೇ ನಿಲುವಿಗೆ ಬಂದಿರುತ್ತಾರೆ. ಇದರಲ್ಲಿ ನಿಜಕ್ಕೂ ದೊಡ್ಡಗೌಡರು ಮತ್ತು ಎಚ್‌ಡಿಕೆ ನಡುವಿನ ಅಭಿಪ್ರಾಯಬೇಧವೂ ಕೆಲಸ ಮಾಡದಿರುವುದಿಲ್ಲ. ಆದರೆ ಅದನ್ನೇ ಭಿನ್ನಮತ ನಿಭಾಯಿಸುವ ಅಸ್ತ್ರವಾಗಿ ಬಳಸುವ ಚಾಕಚಕ್ಯತೆ ಅವರಿಗೆ ಸಿದ್ಧಿಸಿದೆ.

ಈಗಲೂ ಅದೇ ಆಗಿದೆ. ಎಚ್‌ಡಿಕೆ ಹೇಳಿದ್ದನ್ನೇ ಗೌಡರೂ ಹೇಳಿದ್ದಾರೆ. ಕಾರಣಗಳನ್ನು ಅವರ ರೀತಿಯಲ್ಲಿ ಅವರೂ, ಇವರ ರೀತಿಯಲ್ಲಿ ಇವರೂ ಹೇಳಿದ್ದಾರಷ್ಟೇ. ‘ಸಿದ್ದರಾಮಯ್ಯರಿಂದಲೇ ಮೈತ್ರಿ ಸರ್ಕಾರ ಬಿದ್ದಿತು ಎಂದು ನನಗೆ ಈಗ ಮನವರಿಕೆಯಾಗಿದೆ’ ಎಂದು ದೊಡ್ಡ ಗೌಡರು ಇಂದು ಹೇಳಿದ್ದಾರೆ. ಅಂದರೆ ಇಡೀ ಕಾಂಗ್ರೆಸ್ ಪಕ್ಷಕ್ಕಿಂತ ಸಿದ್ದರಾಮಯ್ಯರನ್ನು ಗುರಿ ಮಾಡುವುದು, ಬಿಜೆಪಿಯ ಜೊತೆಗೆ ಕೈ ಜೋಡಿಸುವುದು ಮತ್ತು ಆ ಮೂಲಕ ಅಹಿಂದ ವರ್ಸಸ್ ಮೇಲ್ಜಾತಿ ಧ್ರುವೀಕರಣಕ್ಕೆ ಬೇಕಾದ ಕಥನ ಸಿದ್ಧ ಮಾಡುತ್ತಾ ಹೋಗುವುದು ಇದರ ಹಿಂದಿನ ಲೆಕ್ಕಾಚಾರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಅನ್ನು ಕೈ ಹಿಡಿದಿದ್ದು ಇದೇ ಆಗಿತ್ತು. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯಿಂದ ಇದಕ್ಕೆ ಒಂದಷ್ಟು ಧಕ್ಕೆ ಬಂದಿತ್ತು. ಈಗ ಮತ್ತೆ ಧ್ರುವೀಕರಣಕ್ಕೆ ಪ್ರಯತ್ನಿಸಿ ತಮ್ಮ ನೆಲೆ ಉಳಿಸಿಕೊಳ್ಳುವ ಯತ್ನ ಮಾಡುತ್ತಿರುವುದನ್ನು ಗೌಡರು ಇಂದು ಲೆಕ್ಕಾಚಾರ ಹಾಕಿ ಆಡಿದ ಮಾತುಗಳಲ್ಲಿ ನೋಡಬಹುದು.

ಅತ್ತ ಶರದ್‌ಪವಾರ್ ಜೊತೆಗೂ ಆಪ್ತರಾಗಿರುವ ದೇವೇಗೌಡರು ಹರಿಯಾಣ ಹಾಗೂ ಮಹಾರಾಷ್ಟ್ರಗಳಲ್ಲಿ ಅತಂತ್ರ ಪರಿಸ್ಥಿತಿ ಉಂಟಾದ ನಂತರ ಬಿಜೆಪಿಯ ಜೊತೆಗೆ ಕೈ ಜೋಡಿಸಲಾರರು ಎಂಬ ಮಾತು ಜೆಡಿಎಸ್ ವಲಯಗಳಲ್ಲಿತ್ತು. ಆದರೆ ಕರ್ನಾಟಕದ ಮಟ್ಟಿಗೆ ಜೆಡಿಎಸ್ ಪರಿಸ್ಥಿತಿ ಕಷ್ಟವಿತ್ತು. ಈಗಲೇ ಚುನಾವಣೆ ನಡೆದರೆ ಬಹಳವೇ ಕಷ್ಟವಿದೆ ಎಂಬ ದೇವೇಗೌಡರ ಮಾತು ಸುಳ್ಳಲ್ಲ. ರಾಜ್ಯಗಳ ಮಟ್ಟಿಗೆ ಏನೇ ವ್ಯತ್ಯಾಸ ಉಂಟಾದರೂ, ಕೇಂದ್ರದಲ್ಲಿ ಮೋದಿ-ಶಾರನ್ನು ಅಲುಗಾಡಿಸುವ ಶಕ್ತಿ ಸದ್ಯಕ್ಕಂತೂ ಕಾಣುತ್ತಿಲ್ಲ. ಹೀಗಾಗಿ ಇಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎನ್ನುವಷ್ಟು ದೂರಾಲೋಚನೆ ಪಳಗಿದ ರಾಜಕಾರಣಿಗಳಿಗೆ ಇರುವುದಿಲ್ಲವೇ?

ಹೀಗಾಗಿ ಈ ಸಾರಿ ಗೌಡರು ಯಾವ ಹಿಂಜರಿಕೆಯನ್ನೂ ತೋರಿಲ್ಲ. ಹಿಂದಿನ ಸಾರಿ ಜೆಡಿಎಸ್ ಬಿಜೆಪಿ ಮೈತ್ರಿಯಾದಾಗಲಾದರೂ ‘ಕೋಮುವಾದ, ಜಾತ್ಯಾತೀತತೆ’ ಇತ್ಯಾದಿ ಮಾತುಗಳು ಅವರ ಬಾಯಿಂದ ಬಂದಿದ್ದವು. ಆದರೆ ಈ ಸಾರಿ ಕೇವಲ ಸಿದ್ದರಾಮಯ್ಯರಿಗೆ ವಿರೋಧ ಮಾತ್ರವಲ್ಲದೇ ಯಡಿಯೂರಪ್ಪನವರ ಸರ್ಕಾರಕ್ಕೆ ಅಭಯವನ್ನೂ ನೀಡುವ ಸ್ಪಷ್ಟತೆಯನ್ನೂ ಅವರು ನೀಡಿಬಿಟ್ಟಿದ್ದಾರೆ. ಅದರ ಜೊತೆ ಜೊತೆಗೇ ಮುಂದಿನ ಯೋಜನೆಯನ್ನೂ ಪ್ರಕಟಿಸಿದ್ದಾರೆ. ಅದು – ಪಕ್ಷವನ್ನು ಕಟ್ಟುವುದು. ಸೈದ್ಧಾಂತಿಕ ಅವಕಾಶವಾದಿತನದ ಬಗ್ಗೆ ಏನೇ ಟೀಕೆ ಇದ್ದರೂ ಮೆಚ್ಚಿಕೊಳ್ಳಬೇಕಾದ್ದು ಗೌಡರ ಈ ಗುಣವನ್ನು.

ಏನು ತಿಪ್ಪರಲಾಗ ಹಾಕಿದರೂ ಯಡಿಯೂರಪ್ಪನವರ ಸರ್ಕಾರವು ಪೂರ್ಣಾವಧಿ ಬಾಳಲಾರದು ಎಂಬುದು ಖಚಿತ. ಹಾಗಾಗಿ ಒಂದಷ್ಟು ಕಾಲ ಸರ್ಕಾರವನ್ನು ಉಳಿಸಿ, ಅಷ್ಟು ಅವಧಿಯನ್ನು ಮುಂದಿನ ಚುನಾವಣೆಗೆ ತಯಾರಿ ಮಾಡಿಕೊಂಡರೆ ಒಳ್ಳೆಯದು ಎಂಬ ಮುಂದಾಲೋಚನೆ ಅವರದ್ದು. ಹೇಗೂ ಮುಂದೆಯೂ ಎರಡರಲ್ಲೊಂದು ಪಕ್ಷಕ್ಕೆ ತಮ್ಮ ಜೊತೆಗೆ ಮೈತ್ರಿ ಮಾಡಿಕೊಳ್ಳಲೇಬೇಕಾದಷ್ಟು ಅನಿವಾರ್ಯತೆಯಿರುವ ಅತಂತ್ರತೆ ಉಂಟಾಗುವಷ್ಟು ಪಕ್ಷ ಬೆಳೆಸುವುದಷ್ಟೇ ಸಾಧ್ಯ. ಆ ಮಧ್ಯೆ ಮಾಡಬೇಕಿರುವುದು ಸಿದ್ದರಾಮಯ್ಯರನ್ನು ಹಣಿಯುವುದಷ್ಟೇ.

ಬಹುಶಃ ಸಿದ್ದರಾಮಯ್ಯನವರ ಬೆಳವಣಿಗೆ ಇರುವುದೂ ಯಡಿಯೂರಪ್ಪ, ದೇವೇಗೌಡ ರಾಜಕಾರಣವನ್ನು ವಿರೋಧಿಸುವುದರಲ್ಲೇ ಇರಬಹುದು. ಹಾಗಾಗಿ ಕರ್ನಾಟಕದ ರಾಜಕಾರಣವು ಮತ್ತೆ 2018ರ ಹೊತ್ತಿಗೇ ಬಂದು ನಿಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...