Homeಮುಖಪುಟನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ - ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

- Advertisement -
- Advertisement -

ಲೋಕಸಭೆಯಲ್ಲಿ ಬಿಜೆಪಿ ಸಂಸದರು ತಮ್ಮ ಬಗ್ಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಸದನದ ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದ್ದಾರೆ. ಈ ವಿಷಯವನ್ನು ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ತಮ್ಮ ವಿರುದ್ಧದ ಅವಹೇಳನಕಾರಿ

“ಸದನವು ಕಾರ್ಯನಿರ್ವಹಿಸಬೇಕು ಮತ್ತು ಸದನದಲ್ಲಿ ಚರ್ಚೆಯಾಗಬೇಕು ಎಂಬುದು ನಮ್ಮ ಗುರಿಯಾಗಿದೆ. ಅವರು ನನ್ನ ಬಗ್ಗೆ ಏನು ಬೇಕಾದರೂ ಹೇಳಬಹುದು, ಆದರೆ ಸದನದಲ್ಲಿ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ.” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಸ್ಪೀಕರ್ ಬಿರ್ಲಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅದಾಗ್ಯೂ, ತಮ್ಮ ಮೇಲಿನ ಯಾವ ಟೀಕೆಗಳನ್ನು ಕಡತದಿಂದ ತೆಗೆದುಹಾಕುವಂತೆ ಅವರು ಬಯಸುತ್ತಿದ್ದಾರೆ ಎಂಬುದನ್ನು ರಾಹುಲ್ ಗಾಂಧಿ ನಿರ್ದಿಷ್ಟವಾಗಿ ಹೇಳಿಲ್ಲ. ಆದಾಗ್ಯೂ, ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದಿಂದಲೂ, ಬಿಜೆಪಿಯ ಸದಸ್ಯರು ಕಾಂಗ್ರೆಸ್ ಉನ್ನತ ನಾಯಕತ್ವವು ಭಾರತವನ್ನು “ಅಸ್ಥಿರಗೊಳಿಸಲು” ಬಿಲಿಯನೇರ್ ಲೋಕೋಪಕಾರಿ ಜಾರ್ಜ್ ಸೊರೊಸ್‌ನೊಂದಿಗೆ ಸಂಚು ರೂಪಿಸಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದಾರೆ. ತಮ್ಮ ವಿರುದ್ಧದ ಅವಹೇಳನಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 6 ರಂದು ಪಕ್ಷದ ನಾಯಕರಾದ ಸಂಬಿತ್ ಪಾತ್ರ ಮತ್ತು ಕೆ ಲಕ್ಷ್ಮಣ್ ಅವರು ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರನ್ನು “ದೇಶದ್ರೋಹಿ” ಎಂದು ಕರೆದಿದ್ದರು. ಆರ್ಗನೈಸ್ಡ್ ಕ್ರೈಮ್ ಅಂಡ್ ಕರಪ್ಷನ್ ರಿಪೋರ್ಟಿಂಗ್ ಪ್ರಾಜೆಕ್ಟ್‌(OCCRP)ಗೆ ಫ್ರೆಂಚ್ ತನಿಖಾ ಪತ್ರಿಕೋದ್ಯಮವಾದ ಮೀಡಿಯಾಪಾರ್ಟ್ ನಡೆಸಿದ ತನಿಖೆಯನ್ನು ಉಲ್ಲೇಖಿಸಿದ್ದ ಅವರು, “OCCRP ಮತ್ತು ರಾಹುಲ್ ಗಾಂಧಿ ಎರಡು ದೇಹ ಮತ್ತು ಒಂದು ಆತ್ಮ. ರಾಹುಲ್ ಗಾಂಧಿಗೆ ಭಾರತ ಮುಂದೆ ಹೋಗುವುದು ಇಷ್ಟವಿಲ್ಲ. ಭಾರತೀಯ ಸಂಸತ್ತು ಕಾರ್ಯನಿರ್ವಹಿಸುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿದ್ದರು.

OCCRP ಹಲವಾರು ಅಮೆರಿಕ ಸರ್ಕಾರದ ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಮೀಡಿಯಾಪಾರ್ಟ್ ಇತ್ತೀಚೆಗೆ ವರದಿ ಮಾಡಿತ್ತು. OCCRP ಸಂಸ್ಥೆಯು ಅಮೆರಿಕ ಆದ್ಯತೆಯ ವಿಷಯವೆಂದು ಪರಿಗಣಿಸುವ ಕೆಲವು ದೇಶಗಳ ತನಿಖೆಗಳಿಗೆ ಖರ್ಚು ಮಾಡುತ್ತಿದೆ ಎಂದು ವರದಿ ಹೇಳಿತ್ತು. ಸಂಸ್ಥೆಯು ರಷ್ಯಾ, ವೆನೆಜುವೆಲಾ, ಮಾಲ್ಟಾ, ಸೈಪ್ರಸ್ ಮತ್ತು ಮೆಕ್ಸಿಕನ್ ಮೇಲೆ ವರದಿ ಮಾಡಿದೆ ಎಂದು ಹೇಳಿತ್ತು. ಅದಾಗ್ಯೂ, ಯಾವುದೇ ವರದಿಯಲ್ಲೂ ಭಾರತದ ಪ್ರಸ್ತಾಪವೇ ಇರಲಿಲ್ಲ.

ತನಿಖಾ ವರದಿ ಮಾಡಿರುವ ಮೀಡಿಯಾಪಾರ್ಟ್‌ನ ನಿರ್ದೇಶಕಿ ಕ್ಯಾರಿನ್ ಫೌಟೊ ಪ್ರತಿಕ್ರಿಯಿಸಿ, ಬಿಜೆಪಿಯು “ಪಿತೂರಿ ಸಿದ್ಧಾಂತ” ವನ್ನು ಪ್ರಚಾರ ಮಾಡಲು ತನ್ನ ವರದಿಯನ್ನು ವಿರೂಪಗೊಳಿಸಿದೆ ಎಂದು ಆರೋಪಿಸಿದ್ದಾರೆ. “ನಾವು ಎಂದಿಗೂ ಪ್ರಕಟಿಸದ ನಕಲಿ ಸುದ್ದಿಗಳನ್ನು ಹರಡಲು ಮೀಡಿಯಾಪಾರ್ಟ್‌ನ ಲೇಖನವನ್ನು ಬಿಜೆಪಿ ತಪ್ಪಾಗಿ ಬಳಸಿಕೊಂಡಿದೆ” ಎಂದು ಫೌಟೆಯು ಹೇಳಿರುವುದಾಗಿ ದಿ ವೈರ್ ಉಲ್ಲೇಖಿಸಿದೆ.

ಇದರ ಹೊರತಾಗಿಯೂ ಬಿಜೆಪಿ ಸಂಸದರು ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಈ ನಡುವೆ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ “ಅತ್ಯಂತ ದೂಷಣೆಯ ಭಾಷೆ” ಬಳಸಿದ್ದಕ್ಕಾಗಿ ಸಂಬಿತ್ ಪಾತ್ರಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಡಿಸೆಂಬರ್ 6 ರಂದು ಬಿರ್ಲಾ ಅವರಿಗೆ ಪತ್ರ ಬರೆದಿದ್ದರು.

ಬಿಜೆಪಿ ಸಂಸದರು ತಮ್ಮ ವಿರುದ್ಧ ಆರೋಪ ಮಾಡುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಆದರೆ ನಾವು ಸದನವನ್ನು ನಡೆಸಲು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ. ಡಿಸೆಂಬರ್ 13 ರಂದು ಸಂವಿಧಾನದ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ, “ಈ ಚರ್ಚೆ ನಡೆಯಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ಅದಾನಿ ಗ್ರೂಪ್ ಸಂಸ್ಥಾಪಕ ಗೌತಮ್ ಅದಾನಿ ವಿರುದ್ಧದ ಹಣಕಾಸು ಅವ್ಯವಹಾರದ ಆರೋಪಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ನರೇಂದ್ರ ಮೋದಿ ಸರ್ಕಾರ ಬಯಸುವುದಿಲ್ಲ ಎಂದು ಅವರು ಆರೋಪಿಸಿದ್ದಾರೆ. “ಅವರು ಸಮಸ್ಯೆಯನ್ನು ಬೇರೆಡೆಗೆ ತಿರುಗಿಸಲು ಬಯಸುತ್ತಾರೆ, ಆದರೆ ನಾವು ಈ ವಿಷಯವನ್ನು ಎತ್ತುತ್ತಲೇ ಇರುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನವೆಂಬರ್ 20 ರಂದು, ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಮಂದಿಯನ್ನು ನ್ಯೂಯಾರ್ಕ್‌ನಲ್ಲಿ ಭಾರತದಲ್ಲಿ ಸೌರ ಯೋಜನೆಗಳ ಕುರಿತಾದ ಪ್ರಕರಣದಲ್ಲಿ ದೋಷಾರೋಪಣೆ ಮಾಡಲಾಗಿದೆ. ಆದಾಗ್ಯೂ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದ್ದು ಅವುಗಳನ್ನು ಆಧಾರರಹಿತ ಎಂದು ಹೇಳಿದೆ. ಈ ಆರೋಪದ ನಂತರ ರಾಹುಲ್ ಗಾಂಧಿ ಅವರು ಅದಾನಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...