Homeಮುಖಪುಟಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ 'ವೋಟ್ ಜಿಹಾದ್' ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

ಮಹಾರಾಷ್ಟ್ರ ಚುನಾವಣೆಯ ವೇಳೆ ಬಳಸಿದ ‘ವೋಟ್ ಜಿಹಾದ್’ ನಂತಹ ಪದಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ಚುನಾವಣಾ ಅಧಿಕಾರಿ

- Advertisement -
- Advertisement -

ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕೆಲವು ರಾಜಕೀಯ ಪಕ್ಷಗಳು ಬಳಸಿದ “ವೋಟ್ ಜಿಹಾದ್” ನಂತಹ ವಿವಾದಾತ್ಮಕ ನುಡಿಗಟ್ಟುಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಪರಿಶೀಲನೆ ನಡೆಸುತ್ತಿದೆ ಎಂದು ಮಹಾರಾಷ್ಟ್ರ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ.ಕಿರಣ್ ಕುಲಕರ್ಣಿ ಅವರು ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಬುಧವಾರ ತಿಳಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಯ

ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ 650 ಕ್ಕೂ ಹೆಚ್ಚು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗಿದೆ ಎಂದು ಕಾನೂನು ಜಾರಿ ಸಂಸ್ಥೆಗಳು ಖಚಿತಪಡಿಸಿಕೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಚುನಾವಣೆಯ

‘ವೋಟ್ ಜಿಹಾದ್’ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅದರ ವಿರುದ್ಧ ಮುಂದಿನ ಕ್ರಮವನ್ನು ತೆಗೆದುಕೊಳ್ಳುವ ಮೊದಲು ಕೇಂದ್ರ ಚುನವಣಾ ಆಯೋಗವು ಕಾನೂನು, ಭಾಷಾ ಮತ್ತು ಸಾಮಾಜಿಕ ಡೊಮೇನ್‌ಗಳಾದ್ಯಂತ ಅದರ ಪರಿಣಾಮಗಳನ್ನು ಎಚ್ಚರಿಕೆಯಿಂದ ವಿಶ್ಲೇಷಿಸುತ್ತಿದೆ. ನಾವು ‘ವೋಟ್ ಜಿಹಾದ್’ ನಂತಹ ಪದಗಳೊಂದಿಗೆ ಬಹಳ ಜಾಗರೂಕರಾಗಿರಬೇಕು ಏಕೆಂದರೆ ಅವು ಗಂಭೀರ ಪರಿಣಾಮಗಳನ್ನು ಹೊಂದಿವೆ.” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇದು ಸಂಪೂರ್ಣ ಅಧ್ಯಯನದ ಅಗತ್ಯವಿರುವ ಹೊಸ ನುಡಿಗಟ್ಟು. ಕಾನೂನು, ಭಾಷಾ, ಸಾಮಾಜಿಕ ಮತ್ತು ಧಾರ್ಮಿಕ ಅಂಶಗಳನ್ನು ಪರಿಗಣಿಸಬೇಕಾಗಿದೆ. ಮುಖ್ಯ ಚುನಾವಣಾ ಅಧಿಕಾರಿ ಮತ್ತು ನಾನು ಸೇರಿದಂತೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಇದನ್ನು ವಿಶ್ಲೇಷಿಸುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿದ ನಂತರ ನಾವು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ” ಅವರು ಹೇಳಿದ್ದಾರೆ.

ಇಂತಹ ವಿವಾದಾತ್ಮಕ ನುಡಿಗಟ್ಟುಗಳು ಚುನಾವಣಾ ಭಾಷಣದ ಮೇಲೆ ಪರಿಣಾಮ ಬೀರಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆತುರದ ತೀರ್ಮಾನಗಳನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ. “ಇದು ದೀರ್ಘಾವಧಿಯ ಪ್ರಕ್ರಿಯೆಯಾಗಿದೆ. ಪದಗಳು ಮತ್ತು ಅವುಗಳ ಉಲ್ಲೇಖಗಳನ್ನು ವ್ಯಾಖ್ಯಾನಿಸಬೇಕು ಮತ್ತು ಕೂಲಂಕಷವಾಗಿ ವಿಶ್ಲೇಷಿಸಬೇಕು. ಹೊಸ ಪರಿಭಾಷೆಗೆ ಕಾನೂನು ಚೌಕಟ್ಟು ಇಲ್ಲ, ಆದ್ದರಿಂದ ನಾವು ಅಂತಹ ವಿಷಯಗಳನ್ನು ಅವುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ನಿರ್ವಹಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆದಿತ್ತು ಮತ್ತು ಮೂರು ದಿನಗಳ ನಂತರ ಮತಗಳನ್ನು ಎಣಿಕೆ ಮಾಡಲಾಯಿತು. ಚುನಾವಣೆ ಹಿನ್ನಲೆ ಅಕ್ಟೋಬರ್ 15 ರಂದು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿತ್ತು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗಾಗಿ ರಾಜ್ಯದಲ್ಲಿ ಒಟ್ಟು 659 ಪ್ರಕರಣಗಳು ದಾಖಲಾಗಿದೆ. ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯ ವೇಳೆ ದಾಖಲಾದ 366 ಪ್ರಕರಣಗಳಿಗಿಂತ ಇದು ಹೆಚ್ಚಾಗಿದೆ. “ನಮ್ಮ ತನಿಖಾ ಸಂಸ್ಥೆಗಳು ಲೋಕಸಭೆಯ ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯಗಳಲ್ಲಿ 300 ಚಾರ್ಜ್‌ಶೀಟ್‌ಗಳನ್ನು ಸಲ್ಲಿಸುವುದರೊಂದಿಗೆ ಅತ್ಯುತ್ತಮ ಕೆಲಸ ಮಾಡಿದೆ” ಎಂದು ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಪ್ರಕರಣಗಳ ಕುರಿತು ಮಾತನಾಡಿದ ಅವರು, “ನಾವು ಶ್ರದ್ಧೆಯಿಂದ ಕೆಲಸ  ಮಾಡುತ್ತಿದ್ದೇವೆ. ನಮ್ಮ ಕಾನೂನು ಜಾರಿ ಸಂಸ್ಥೆಗಳು ತನಿಖೆ ನಡೆಸುತ್ತಿವೆ ಮತ್ತು ಈ ಪ್ರಕರಣಗಳು ತಾರ್ಕಿಕ ಅಂತ್ಯವನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯಗಳಿಗೆ ಎಲ್ಲಾ ಆರೋಪಪಟ್ಟಿಗಳನ್ನು ಸಲ್ಲಿಸಲಾಗುವುದು” ಎಂದು ಅವರು ಹೇಳಿದ್ದಾರೆ. ಆದರೆ, ಅದರ ವಿರುದ್ಧದ ಕ್ರಮದ ಸಮಯವು ನ್ಯಾಯಾಂಗವನ್ನು ಅವಲಂಬಿಸಿರುತ್ತದೆ ಎಂದು ಅವರು ಹೇಳಿದ್ದಾರೆ.

“ಇವು ಕ್ರಿಮಿನಲ್ ಪ್ರಕರಣಗಳಾಗಿದ್ದು, ಆದ್ದರಿಂದ ಅವರು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಾರೆ. ಚುನಾವಣಾ ಸಂಬಂಧಿತ ಅಪರಾಧಗಳ ಬಗ್ಗೆ ನ್ಯಾಯಾಲಯಗಳು ಗಂಭೀರವಾಗಿರುತ್ತವೆ ಮತ್ತು ನಾವು ತ್ವರಿತ ಪರಿಹಾರಕ್ಕಾಗಿ ವಿನಂತಿಸುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ. ದ್ವೇಷ ಭಾಷಣಗಳ ಪ್ರಕರಣಗಳನ್ನು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ವ್ಯವಹರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿರಿಯಾ | ಭಾರತದ 75 ನಾಗರಿಕರ ಸ್ಥಳಾಂತರ – ಕೇಂದ್ರ ಸರ್ಕಾರ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...