Homeಮುಖಪುಟಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ - ಅಸ್ಸಾಂ ಸಿಎಂ ಹಿಮಂತ ಶರ್ಮಾ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ – ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

ನಿವಾಸಿಗಳು ಅಥವಾ ಅವರ ಕುಟುಂಬದ ಸದಸ್ಯರು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯ ಭಾಗವಾಗಲು ಅರ್ಜಿ ಸಲ್ಲಿಸದಿದ್ದರೆ ಅಸ್ಸಾಂ ಸರ್ಕಾರ ಅಂತವರ ಆಧಾರ್ ಕಾರ್ಡ್‌ಗಾಗಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸುತ್ತದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ, ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಖಚಿತಪಡಿಸಿಕೊಳ್ಳಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎನ್‌ಆರ್‌ಸಿಗೆ ಅರ್ಜಿ

“ಕಳೆದ ಎರಡು ತಿಂಗಳಲ್ಲಿ ಅಸ್ಸಾಂ ಪೋಲೀಸ್, ತ್ರಿಪುರಾ ಪೋಲೀಸ್ ಮತ್ತು ಬಿಎಸ್ಎಫ್ [ಗಡಿ ಭದ್ರತಾ ಪಡೆ] ಹಲವಾರು ನುಸುಳುಕೋರರನ್ನು ಬಂಧಿಸಿದ್ದಾರೆ. ಅದಕ್ಕಾಗಿಯೇ ಬಾಂಗ್ಲಾದೇಶದಿಂದ ಒಳನುಸುಳುವಿಕೆ ಬಗ್ಗೆ ನಮಗೆ ಕಳವಳವಿದೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯು ಅಸ್ಸಾಂನಲ್ಲಿ ಬಂಗಾಳಿ ಮುಸ್ಲಿಂ ಸಮುದಾಯವನ್ನು ಸ್ಥಳೀಯ ಜನರ ಸಂಪನ್ಮೂಲಗಳು, ಉದ್ಯೋಗಗಳು ಮತ್ತು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ “ನುಸುಳುಕೋರರು” ಎಂದು ಆಗಾಗ್ಗೆ ಹಣೆಪಟ್ಟಿ ಕಟ್ಟುತ್ತಿದೆ. ಜೊತೆಗೆ ಈ ಸಮುದಾಯವು ಅಸ್ಸಾಮಿ ಸಂಸ್ಕೃತಿ ಮತ್ತು ಗುರುತಿಗೆ ಬೆದರಿಕೆಯನ್ನುಂಟುಮಾಡುತ್ತದೆ ಎಂದು ಪಕ್ಷವೂ ಚಿತ್ರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದ್ದು, ಅದಕ್ಕಾಗಿಯೇ ನಾವು ಆಧಾರ್ ಕಾರ್ಡ್ ಕಾರ್ಯವಿಧಾನವನ್ನು ಕಠಿಣಗೊಳಿಸಲು ನಿರ್ಧರಿಸಿದ್ದೇವೆ” ಎಂದು ಹಿಮಂತ ಶರ್ಮಾ ಹೇಳಿದ್ದಾರೆ. ಆಧಾರ್ ಒಂದು ವಿಶಿಷ್ಟವಾದ 12 ಅಂಕಿಯ ಸಂಖ್ಯೆಯ ಗುರುತಿನ ಸಂಖ್ಯೆಯಾಗಿದ್ದು, ಇದನ್ನು ಶಾಸನಬದ್ಧ ಸಂಸ್ಥೆಯಾದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಭಾರತದ ನಿವಾಸಿಗಳಿಗೆ ನೀಡಲಾಗುತ್ತದೆ.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಅಸ್ಸಾಂ ಆಗಸ್ಟ್ 31, 2019 ರಂದು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯನ್ನು ಪ್ರಕಟಿಸಿತ್ತು. ಅದರಂತೆ ನಿವಾಸಿಗಳು ತಾವು ಅಥವಾ ಅವರ ಪೂರ್ವಜರು ಅಸ್ಸಾಂ ಅನ್ನು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗುತ್ತದೆ.

ಅದಾಗ್ಯೂ, ರಾಜ್ಯದಾದ್ಯಂತ 19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ಎನ್‌ಆರ್‌ಸಿಗೆ ಇನ್ನಷ್ಟೆ ಸೂಚನೆ ನೀಡಬೇಕಿದೆ.

ಸೆಪ್ಟೆಂಬರ್ 7 ರಂದು, ಅಸ್ಸಾಂನಲ್ಲಿ ಆಧಾರ್ ಸಂಖ್ಯೆಗಳನ್ನು ನೀಡುವ ಪ್ರಕ್ರಿಯೆಯನ್ನು “ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು” ಎಂದು ಹಿಮಂತ ಶರ್ಮಾ ಘೋಷಿಸಿದ್ದಾರೆ. ಅರ್ಜಿದಾರರು 2015 ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ತಮ್ಮ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

“ಎನ್‌ಆರ್‌ಸಿ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಮಾತ್ರ ಆಧಾರ್ ಅನ್ನು ಪಡೆದುಕೊಳ್ಳಬಹುದು. ಈ ನೀತಿಯಿಂದ ಅಸ್ಸಾಂನಲ್ಲಿ ಯಾವುದೇ ಶಂಕಿತ ವಿದೇಶಿಯರು ಆಧಾರ್ ಕಾರ್ಡ್‌ಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಖಚಿತಪಡಿಸುತ್ತದೆ. ಜೊತೆಗೆ ಇದು ಅಕ್ರಮ ವಿದೇಶಿಯರ ಒಳನುಸುಳುವಿಕೆಯವನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಆಧಾರ್ ನೀಡಲು ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ನೋಡಲ್ ಏಜೆನ್ಸಿಯಾಗಲಿದೆ ಎಂದು ಮುಖ್ಯಮಂತ್ರಿ ಬುಧವಾರ ಹೇಳಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ವೃತ್ತ ಮಟ್ಟದಲ್ಲಿ ವೃತ್ತ ಅಧಿಕಾರಿಗಳು ಇದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಕಾರ್ಯವಿಧಾನದ ಪ್ರಕಾರ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಆಧಾರ್‌ಗಾಗಿ ಹೊಸ ಅರ್ಜಿಯನ್ನು ಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತದೆ ಎಂದು ಹಿಮಂತಾ ಶರ್ಮಾ ಹೇಳಿದ್ದಾರೆ. ಇದರ ನಂತರ, ಅರ್ಜಿದಾರರು ಅಥವಾ ಅವರ ಕುಟುಂಬವು ಎನ್‌ಆರ್‌ಸಿಗೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದರೆ ಸರ್ಕಲ್ ಅಧಿಕಾರಿ ಅದನ್ನು ಪರಿಶೀಲಿಸುತ್ತಾರೆ.

“ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕಂಡುಬಂದರೆ, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸರ್ಕಲ್ ಆಫೀಸರ್ ಕ್ಷೇತ್ರ ಮಟ್ಟದ ಪರಿಶೀಲನೆಗೆ ಹೋಗುತ್ತಾರೆ. ಅಧಿಕಾರಿಗೆ ಸಂಪೂರ್ಣವಾಗಿ ಮನವರಿಕೆಯಾದ ನಂತರ, ಆಧಾರ್ ಅನ್ನು ಅನುಮೋದಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ಸಿಎಂ ಅವರ ಈ ಕ್ರಮವನ್ನು ಹೋರಾಟಗಾರರು ವಿರೋಧಿಸಿದ್ದು, ಗುರುತಿನ ದಾಖಲೆಗಾಗಿ ಅರ್ಹತಾ ಮಾನದಂಡಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ. ಅವರ ಈ ತೀರ್ಮಾನವು ಆಧಾರ್ ಕಾಯಿದೆ ಮತ್ತು ಆಧಾರ್ ಪರಿಕಲ್ಪನೆಯನ್ನು ತಿದ್ದುಪಡಿ ಮಾಡುತ್ತದೆ, ಇದು ದೊಡ್ಡ ಪರಿಣಾಮಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...