Homeಮುಖಪುಟಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ - ಅಸ್ಸಾಂ ಸಿಎಂ ಹಿಮಂತ ಶರ್ಮಾ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಇಲ್ಲ – ಅಸ್ಸಾಂ ಸಿಎಂ ಹಿಮಂತ ಶರ್ಮಾ

- Advertisement -
- Advertisement -

ನಿವಾಸಿಗಳು ಅಥವಾ ಅವರ ಕುಟುಂಬದ ಸದಸ್ಯರು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯ ಭಾಗವಾಗಲು ಅರ್ಜಿ ಸಲ್ಲಿಸದಿದ್ದರೆ ಅಸ್ಸಾಂ ಸರ್ಕಾರ ಅಂತವರ ಆಧಾರ್ ಕಾರ್ಡ್‌ಗಾಗಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸುತ್ತದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ, ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಖಚಿತಪಡಿಸಿಕೊಳ್ಳಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಸ್ತಾವನೆಯನ್ನು ಅನುಮೋದಿಸಲಾಗಿದೆ ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎನ್‌ಆರ್‌ಸಿಗೆ ಅರ್ಜಿ

“ಕಳೆದ ಎರಡು ತಿಂಗಳಲ್ಲಿ ಅಸ್ಸಾಂ ಪೋಲೀಸ್, ತ್ರಿಪುರಾ ಪೋಲೀಸ್ ಮತ್ತು ಬಿಎಸ್ಎಫ್ [ಗಡಿ ಭದ್ರತಾ ಪಡೆ] ಹಲವಾರು ನುಸುಳುಕೋರರನ್ನು ಬಂಧಿಸಿದ್ದಾರೆ. ಅದಕ್ಕಾಗಿಯೇ ಬಾಂಗ್ಲಾದೇಶದಿಂದ ಒಳನುಸುಳುವಿಕೆ ಬಗ್ಗೆ ನಮಗೆ ಕಳವಳವಿದೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯು ಅಸ್ಸಾಂನಲ್ಲಿ ಬಂಗಾಳಿ ಮುಸ್ಲಿಂ ಸಮುದಾಯವನ್ನು ಸ್ಥಳೀಯ ಜನರ ಸಂಪನ್ಮೂಲಗಳು, ಉದ್ಯೋಗಗಳು ಮತ್ತು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ “ನುಸುಳುಕೋರರು” ಎಂದು ಆಗಾಗ್ಗೆ ಹಣೆಪಟ್ಟಿ ಕಟ್ಟುತ್ತಿದೆ. ಜೊತೆಗೆ ಈ ಸಮುದಾಯವು ಅಸ್ಸಾಮಿ ಸಂಸ್ಕೃತಿ ಮತ್ತು ಗುರುತಿಗೆ ಬೆದರಿಕೆಯನ್ನುಂಟುಮಾಡುತ್ತದೆ ಎಂದು ಪಕ್ಷವೂ ಚಿತ್ರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದ್ದು, ಅದಕ್ಕಾಗಿಯೇ ನಾವು ಆಧಾರ್ ಕಾರ್ಡ್ ಕಾರ್ಯವಿಧಾನವನ್ನು ಕಠಿಣಗೊಳಿಸಲು ನಿರ್ಧರಿಸಿದ್ದೇವೆ” ಎಂದು ಹಿಮಂತ ಶರ್ಮಾ ಹೇಳಿದ್ದಾರೆ. ಆಧಾರ್ ಒಂದು ವಿಶಿಷ್ಟವಾದ 12 ಅಂಕಿಯ ಸಂಖ್ಯೆಯ ಗುರುತಿನ ಸಂಖ್ಯೆಯಾಗಿದ್ದು, ಇದನ್ನು ಶಾಸನಬದ್ಧ ಸಂಸ್ಥೆಯಾದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಭಾರತದ ನಿವಾಸಿಗಳಿಗೆ ನೀಡಲಾಗುತ್ತದೆ.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಉದ್ದೇಶದಿಂದ ಅಸ್ಸಾಂ ಆಗಸ್ಟ್ 31, 2019 ರಂದು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ)ಯನ್ನು ಪ್ರಕಟಿಸಿತ್ತು. ಅದರಂತೆ ನಿವಾಸಿಗಳು ತಾವು ಅಥವಾ ಅವರ ಪೂರ್ವಜರು ಅಸ್ಸಾಂ ಅನ್ನು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗುತ್ತದೆ.

ಅದಾಗ್ಯೂ, ರಾಜ್ಯದಾದ್ಯಂತ 19 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳು ಅಥವಾ 5.77% ಅರ್ಜಿದಾರರು ಎನ್‌ಆರ್‌ಸಿಯ ಅಂತಿಮ ಪಟ್ಟಿಯಿಂದ ಹೊರಗುಳಿದಿದ್ದಾರೆ. ಎನ್‌ಆರ್‌ಸಿಗೆ ಇನ್ನಷ್ಟೆ ಸೂಚನೆ ನೀಡಬೇಕಿದೆ.

ಸೆಪ್ಟೆಂಬರ್ 7 ರಂದು, ಅಸ್ಸಾಂನಲ್ಲಿ ಆಧಾರ್ ಸಂಖ್ಯೆಗಳನ್ನು ನೀಡುವ ಪ್ರಕ್ರಿಯೆಯನ್ನು “ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು” ಎಂದು ಹಿಮಂತ ಶರ್ಮಾ ಘೋಷಿಸಿದ್ದಾರೆ. ಅರ್ಜಿದಾರರು 2015 ರಲ್ಲಿ ಅರ್ಜಿ ಸಲ್ಲಿಸುವಾಗ ಅವರಿಗೆ ಒದಗಿಸಲಾದ ತಮ್ಮ ಎನ್‌ಆರ್‌ಸಿ ಅರ್ಜಿ ಸಂಖ್ಯೆಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

“ಎನ್‌ಆರ್‌ಸಿ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಲೆಕ್ಕಿಸದೆ ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಮಾತ್ರ ಆಧಾರ್ ಅನ್ನು ಪಡೆದುಕೊಳ್ಳಬಹುದು. ಈ ನೀತಿಯಿಂದ ಅಸ್ಸಾಂನಲ್ಲಿ ಯಾವುದೇ ಶಂಕಿತ ವಿದೇಶಿಯರು ಆಧಾರ್ ಕಾರ್ಡ್‌ಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಖಚಿತಪಡಿಸುತ್ತದೆ. ಜೊತೆಗೆ ಇದು ಅಕ್ರಮ ವಿದೇಶಿಯರ ಒಳನುಸುಳುವಿಕೆಯವನ್ನು ತಡೆಯುತ್ತದೆ.” ಎಂದು ಅವರು ಹೇಳಿದ್ದಾರೆ.

ಆಧಾರ್ ನೀಡಲು ಹೊಸ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಜಾರಿಗೆ ತರಲು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ನೋಡಲ್ ಏಜೆನ್ಸಿಯಾಗಲಿದೆ ಎಂದು ಮುಖ್ಯಮಂತ್ರಿ ಬುಧವಾರ ಹೇಳಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ವೃತ್ತ ಮಟ್ಟದಲ್ಲಿ ವೃತ್ತ ಅಧಿಕಾರಿಗಳು ಇದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಕಾರ್ಯವಿಧಾನದ ಪ್ರಕಾರ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಆಧಾರ್‌ಗಾಗಿ ಹೊಸ ಅರ್ಜಿಯನ್ನು ಪರಿಶೀಲನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತದೆ ಎಂದು ಹಿಮಂತಾ ಶರ್ಮಾ ಹೇಳಿದ್ದಾರೆ. ಇದರ ನಂತರ, ಅರ್ಜಿದಾರರು ಅಥವಾ ಅವರ ಕುಟುಂಬವು ಎನ್‌ಆರ್‌ಸಿಗೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದರೆ ಸರ್ಕಲ್ ಅಧಿಕಾರಿ ಅದನ್ನು ಪರಿಶೀಲಿಸುತ್ತಾರೆ.

“ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕಂಡುಬಂದರೆ, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸರ್ಕಲ್ ಆಫೀಸರ್ ಕ್ಷೇತ್ರ ಮಟ್ಟದ ಪರಿಶೀಲನೆಗೆ ಹೋಗುತ್ತಾರೆ. ಅಧಿಕಾರಿಗೆ ಸಂಪೂರ್ಣವಾಗಿ ಮನವರಿಕೆಯಾದ ನಂತರ, ಆಧಾರ್ ಅನ್ನು ಅನುಮೋದಿಸಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ಸಿಎಂ ಅವರ ಈ ಕ್ರಮವನ್ನು ಹೋರಾಟಗಾರರು ವಿರೋಧಿಸಿದ್ದು, ಗುರುತಿನ ದಾಖಲೆಗಾಗಿ ಅರ್ಹತಾ ಮಾನದಂಡಗಳನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ. ಅವರ ಈ ತೀರ್ಮಾನವು ಆಧಾರ್ ಕಾಯಿದೆ ಮತ್ತು ಆಧಾರ್ ಪರಿಕಲ್ಪನೆಯನ್ನು ತಿದ್ದುಪಡಿ ಮಾಡುತ್ತದೆ, ಇದು ದೊಡ್ಡ ಪರಿಣಾಮಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....