Homeಮುಖಪುಟಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

2020ರ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಗುರುವಾರ ಭೇಟಿಯಾಗಿದ್ದಾರೆ. ಬೆಳಗ್ಗೆ 11.15 ರ ಸುಮಾರಿಗೆ ಬೂಲ್ ಗರ್ಹಿ ಗ್ರಾಮವನ್ನು ತಲುಪಿದ ಅವರು, ಸಂತ್ರಸ್ತೆಯ ಮನೆಯಲ್ಲಿ ಅವರ ಕುಟುಂಬದೊಂದಿಗೆ ಸುಮಾರು 35 ನಿಮಿಷಗಳ ಕಾಲ ಕಳೆದು, ಅವರೊಂದಿಗೆ ಸಂವಾದ ನಡೆಸಿದ್ದಾರೆ. ಅದಾಗ್ಯೂ, ಅವರ ಭೇಟಿಗೆಂದು ಗ್ರಾಮದಲ್ಲಿ ನೆರೆದಿದ್ದ ಮಾಧ್ಯಮದ ಗುಂಪಿನೊಂದಿಗೆ ಮಾತನಾಡದೆ ಅವರು ನಿರ್ಗಮಿಸಿದ್ದಾರೆ. ಹತ್ರಾಸ್ ಅತ್ಯಾಚಾರ-ಕೊಲೆ

ರಾಹುಲ್ ಭೇಟಿಯ ಕಾರಣಕ್ಕೆ ಕುಗ್ರಾಮ ಮತ್ತು ಅದರ ಸುತ್ತಮುತ್ತ ಪೊಲೀಸ್ ನಿಯೋಜನೆಯನ್ನು ಹೆಚ್ಚಿಸಲಾಗಿತ್ತು. ರಾಹುಲ್ ಗಾಂಧಿ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹತ್ರಾಸ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಚಂದ್ರಗುಪ್ತ ವಿಕ್ರಮಾದಿತ್ಯ, “ರಾಹುಲ್ ಗಾಂಧಿ ಅವರಿಗೆ ಈ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಯಾವಾಗಲೂ ಅವರನ್ನು ಬೆಂಬಲಿಸುತ್ತಿದ್ದು, ಅದನ್ನು ಮುಂದುವರಿಸುತ್ತಾರೆ. ಅವರು ಇಂದು ಅವರ ಸಮಸ್ಯೆಗಳನ್ನು ಆಲಿಸಲು ಬಂದಿದ್ದು, ಅವರು ಸಮಸ್ಯೆಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಾಹುಲ್ ಗಾಂಧಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಹೋಗಲು ಪ್ರಯತ್ನಿಸಿದ್ದರು. ಆದರೆ, ಡಿಸೆಂಬರ್ 10 ರವರೆಗೆ ಸಾರ್ವಜನಿಕ ಪ್ರತಿನಿಧಿಗಳು ಸೇರಿದಂತೆ ಹೊರಗಿನವರ ಪ್ರವೇಶವನ್ನು ರಾಜ್ಯ ಸರ್ಕಾರ ನಿಷೇಧಿಸಿದ್ದರಿಂದ ಸ್ಥಳೀಯ ಅಧಿಕಾರಿಗಳು ಅವರನ್ನು ತಡೆದಿದ್ದರು. ಹತ್ರಾಸ್ ಅತ್ಯಾಚಾರ-ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದಕ್ಕೂ ಮುನ್ನ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ತಂದೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ಗುರುವಾರ ಹಂಚಿಕೊಂಡಿದೆ. ಅದರ ನಂತರ ರಾಹುಲ್ ಗಾಂಧಿ ಕುಟುಂಬವನ್ನು ಭೇಟಿ ಮಾಡಿದ್ದಾರೆ.
“ಹತ್ರಾಸ್‌ನ ಸಂತ್ರಸ್ತ ಕುಟುಂಬವು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ. ಈ ಪತ್ರದ ನಂತರ, ರಾಹುಲ್ ಗಾಂಧಿ ಇಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಬಂದಿದ್ದಾರೆ” ಎಂದು ಪಕ್ಷವು ಪತ್ರವನ್ನು ಹಂಚಿಕೊಂಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ನೇರವಾಗಿ ಉದ್ದೇಶಿಸಿ ಬರೆದಿದ್ದ ಪತ್ರದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ಭರವಸೆಗಳನ್ನು ನಿಜವಾಗಿಯು ಈಡೇರಿಸಲು ಮತ್ತು ಸೆಪ್ಟೆಂಬರ್ 14, 2020 ರಂದು ನಡೆದ ಘಟನೆಗೆ ನ್ಯಾಯವನ್ನು ಪಡೆಯಲು ಕುಟುಂಬವು ಇನ್ನೂ ಹೇಗೆ ಕಾಯುತ್ತಿದೆ ಎಂಬುದನ್ನು ವ್ಯಕ್ತಪಡಿಸಲಾಗಿತ್ತು.

ರಾಜ್ಯದ ಅಧಿಕಾರಿಗಳು ಮತ್ತು ನ್ಯಾಯಾಲಯವು ಈ ವಿಷಯವನ್ನು ನಿಭಾಯಿಸುವ ಬಗ್ಗೆ ಹತಾಶೆ ವ್ಯಕ್ತಪಡಿಸಿದ ಸಂಸತ್ರಸ್ತೆಯ ತಂದೆ ಓಂಪ್ರಕಾಶ್, ಯುಪಿ ಆಡಳಿತವು ಕುಟುಂಬದ ಅನುಮತಿಯಿಲ್ಲದೆ ಸಂತ್ರಸ್ತೆಯ ದೇಹವನ್ನು ಅಂತ್ಯಸಂಸ್ಕಾರ ಮಾಡಿದೆ ಎಂದು ಹೇಳಿದ್ದಾರೆ.

‘‘ನನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆನ್ನುಮೂಳೆ ಮುರಿದು ದೇಹವನ್ನು ಛಿದ್ರಗೊಳಿಸಲಾಗಿತ್ತು. ಬಳಿಕ ನನ್ನ ಮನೆಯವರ ಅನುಮತಿಯಿಲ್ಲದೆ ರಾತ್ರಿಯ ಕತ್ತಲಲ್ಲಿ ಆಡಳಿತವು ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಮಧ್ಯಾಹ್ನ 2.30ಕ್ಕೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ್ದಾರೆ. ಯಾರ ದೇಹವನ್ನು ಸುಟ್ಟು ಹಾಕಲಾಗಿದೆ ಎಂಬುದು ನನಗೆ ಮತ್ತು ನನ್ನ ಕುಟುಂಬಕ್ಕೆ ಇಂದಿಗೂ ತಿಳಿದಿಲ್ಲ,” ಎಂದು ಪತ್ರವು ಹೇಳಿತ್ತು.

“ಗೌರವಾನ್ವಿತ ರಾಹುಲ್ ಗಾಂಧಿ ಅವರೆ, ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನನ್ನ ಕುಟುಂಬದ ಒಬ್ಬರಿಗೆ ಉದ್ಯೋಗ ಮತ್ತು ಮನೆಯನ್ನು ನೀಡುವುದಾಗಿ ನನ್ನ ಕುಟುಂಬಕ್ಕೆ ಲಿಖಿತ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಉದ್ಯೋಗವನ್ನಾಗಲಿ ಅಥವಾ ಮನೆಯನ್ನಾಗಲಿ ನೀಡಿಲ್ಲ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ’’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಸಿಆರ್‌ಪಿಎಫ್ ಭದ್ರತೆಯಲ್ಲಿ ಜೈಲುವಾಸ’

ಸಂತ್ರಸ್ತೆಯ ಕುಟುಂಬವು ಸಿಆರ್‌ಪಿಎಫ್ ಒದಗಿಸಿದ ಭದ್ರತೆಯ ಅಡಿಯಲ್ಲಿ “ಜೈಲುವಾಸ” ಅನುಭವಿಸಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. “ಜೊತೆಗೆ ಉದ್ಯೋಗವಿಲ್ಲ ಮತ್ತು ಯಾರೂ ಉದ್ಯೋಗಕ್ಕಾಗಿ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜಾಮೀನು ಪಡೆದಿರುವ ಆರೋಪಿಗಳು ಮುಕ್ತವಾಗಿ ತಿರುಗಾಡುತ್ತಿದ್ದು, ನಾವು ಮನೆಯಲ್ಲಿಯೇ ಇದ್ದು ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದೇವೆ’’ ಎಂದು ತಂದೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬೃಜೇಶ್ ಪಾಠಕ್, “ಈ ಪ್ರಕರಣದ ಬಗ್ಗೆ ಸಿಬಿಐ ಈಗಾಗಲೇ ವಿಚಾರಣೆ ನಡೆಸಿದೆ. ಬಿಜೆಪಿ ಆಡಳಿತದಲ್ಲಿ ಯಾವುದೇ ಅಪರಾಧಿಗಳನ್ನು ತಪ್ಪಿಸಿಕೊಳ್ಳಲು ಅವಕಾಶವಿಲ್ಲ. ಸಂಭಾಲ್ ಇರಲಿ ಅಥವಾ ಹತ್ರಾಸ್ ಆಗಿರಲಿ, ಅವರು (ಗಾಂಧಿ) ಅವರನ್ನು ಪ್ರಚಾರದಲ್ಲಿರಲು ಭೇಟಿ ನೀಡುತ್ತಾರೆಯೇ ಹೊರತು ಬೇರೆ ಯಾವುದೇ ಕಾರಣಕ್ಕಾಗಿ ಅಲ್ಲ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 3, 2020 ರಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು ಮತ್ತು ಮೃತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಹೋರಾಡುವುದಾಗಿ ಘೋಷಿಸಿದ್ದರು.

19 ವರ್ಷದ ಯುವತಿ ಮೇಲೆ ಸೆಪ್ಟೆಂಬರ್ 14, 2020 ರಂದು ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಈ ವೇಳೆ ತೀವ್ರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಅಲಿಘರ್‌ಗೆ ಮತ್ತು ನಂತರ ದೆಹಲಿಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಸೆಪ್ಟೆಂಬರ್ 29, 2020 ರಂದು ಸಾವನ್ನಪ್ಪಿದ್ದರು. ಅಕ್ಟೋಬರ್ 30 ರ ಮುಂಜಾನೆ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರ ಅನುಮತಿಯಿಲ್ಲದೆ ನಡೆಸಲಾಗಿತ್ತು ಎಂದು ಅವರ ಕುಟುಂಬವು ಆರೋಪಿಸಿತ್ತು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, “ಕುಟುಂಬದವರ ಇಚ್ಛೆಯಂತೆ” ಶವಸಂಸ್ಕಾರವನ್ನು ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆಯ ನಂತರ, ಸಿಬಿಐ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ ಮತ್ತು ಎಲ್ಲಾ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...