Homeಮುಖಪುಟಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

2020ರ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಗುರುವಾರ ಭೇಟಿಯಾಗಿದ್ದಾರೆ. ಬೆಳಗ್ಗೆ 11.15 ರ ಸುಮಾರಿಗೆ ಬೂಲ್ ಗರ್ಹಿ ಗ್ರಾಮವನ್ನು ತಲುಪಿದ ಅವರು, ಸಂತ್ರಸ್ತೆಯ ಮನೆಯಲ್ಲಿ ಅವರ ಕುಟುಂಬದೊಂದಿಗೆ ಸುಮಾರು 35 ನಿಮಿಷಗಳ ಕಾಲ ಕಳೆದು, ಅವರೊಂದಿಗೆ ಸಂವಾದ ನಡೆಸಿದ್ದಾರೆ. ಅದಾಗ್ಯೂ, ಅವರ ಭೇಟಿಗೆಂದು ಗ್ರಾಮದಲ್ಲಿ ನೆರೆದಿದ್ದ ಮಾಧ್ಯಮದ ಗುಂಪಿನೊಂದಿಗೆ ಮಾತನಾಡದೆ ಅವರು ನಿರ್ಗಮಿಸಿದ್ದಾರೆ. ಹತ್ರಾಸ್ ಅತ್ಯಾಚಾರ-ಕೊಲೆ

ರಾಹುಲ್ ಭೇಟಿಯ ಕಾರಣಕ್ಕೆ ಕುಗ್ರಾಮ ಮತ್ತು ಅದರ ಸುತ್ತಮುತ್ತ ಪೊಲೀಸ್ ನಿಯೋಜನೆಯನ್ನು ಹೆಚ್ಚಿಸಲಾಗಿತ್ತು. ರಾಹುಲ್ ಗಾಂಧಿ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹತ್ರಾಸ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಚಂದ್ರಗುಪ್ತ ವಿಕ್ರಮಾದಿತ್ಯ, “ರಾಹುಲ್ ಗಾಂಧಿ ಅವರಿಗೆ ಈ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಯಾವಾಗಲೂ ಅವರನ್ನು ಬೆಂಬಲಿಸುತ್ತಿದ್ದು, ಅದನ್ನು ಮುಂದುವರಿಸುತ್ತಾರೆ. ಅವರು ಇಂದು ಅವರ ಸಮಸ್ಯೆಗಳನ್ನು ಆಲಿಸಲು ಬಂದಿದ್ದು, ಅವರು ಸಮಸ್ಯೆಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಾಹುಲ್ ಗಾಂಧಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಹೋಗಲು ಪ್ರಯತ್ನಿಸಿದ್ದರು. ಆದರೆ, ಡಿಸೆಂಬರ್ 10 ರವರೆಗೆ ಸಾರ್ವಜನಿಕ ಪ್ರತಿನಿಧಿಗಳು ಸೇರಿದಂತೆ ಹೊರಗಿನವರ ಪ್ರವೇಶವನ್ನು ರಾಜ್ಯ ಸರ್ಕಾರ ನಿಷೇಧಿಸಿದ್ದರಿಂದ ಸ್ಥಳೀಯ ಅಧಿಕಾರಿಗಳು ಅವರನ್ನು ತಡೆದಿದ್ದರು. ಹತ್ರಾಸ್ ಅತ್ಯಾಚಾರ-ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದಕ್ಕೂ ಮುನ್ನ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ತಂದೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ಗುರುವಾರ ಹಂಚಿಕೊಂಡಿದೆ. ಅದರ ನಂತರ ರಾಹುಲ್ ಗಾಂಧಿ ಕುಟುಂಬವನ್ನು ಭೇಟಿ ಮಾಡಿದ್ದಾರೆ.
“ಹತ್ರಾಸ್‌ನ ಸಂತ್ರಸ್ತ ಕುಟುಂಬವು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ. ಈ ಪತ್ರದ ನಂತರ, ರಾಹುಲ್ ಗಾಂಧಿ ಇಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಬಂದಿದ್ದಾರೆ” ಎಂದು ಪಕ್ಷವು ಪತ್ರವನ್ನು ಹಂಚಿಕೊಂಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ನೇರವಾಗಿ ಉದ್ದೇಶಿಸಿ ಬರೆದಿದ್ದ ಪತ್ರದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ಭರವಸೆಗಳನ್ನು ನಿಜವಾಗಿಯು ಈಡೇರಿಸಲು ಮತ್ತು ಸೆಪ್ಟೆಂಬರ್ 14, 2020 ರಂದು ನಡೆದ ಘಟನೆಗೆ ನ್ಯಾಯವನ್ನು ಪಡೆಯಲು ಕುಟುಂಬವು ಇನ್ನೂ ಹೇಗೆ ಕಾಯುತ್ತಿದೆ ಎಂಬುದನ್ನು ವ್ಯಕ್ತಪಡಿಸಲಾಗಿತ್ತು.

ರಾಜ್ಯದ ಅಧಿಕಾರಿಗಳು ಮತ್ತು ನ್ಯಾಯಾಲಯವು ಈ ವಿಷಯವನ್ನು ನಿಭಾಯಿಸುವ ಬಗ್ಗೆ ಹತಾಶೆ ವ್ಯಕ್ತಪಡಿಸಿದ ಸಂಸತ್ರಸ್ತೆಯ ತಂದೆ ಓಂಪ್ರಕಾಶ್, ಯುಪಿ ಆಡಳಿತವು ಕುಟುಂಬದ ಅನುಮತಿಯಿಲ್ಲದೆ ಸಂತ್ರಸ್ತೆಯ ದೇಹವನ್ನು ಅಂತ್ಯಸಂಸ್ಕಾರ ಮಾಡಿದೆ ಎಂದು ಹೇಳಿದ್ದಾರೆ.

‘‘ನನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆನ್ನುಮೂಳೆ ಮುರಿದು ದೇಹವನ್ನು ಛಿದ್ರಗೊಳಿಸಲಾಗಿತ್ತು. ಬಳಿಕ ನನ್ನ ಮನೆಯವರ ಅನುಮತಿಯಿಲ್ಲದೆ ರಾತ್ರಿಯ ಕತ್ತಲಲ್ಲಿ ಆಡಳಿತವು ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಮಧ್ಯಾಹ್ನ 2.30ಕ್ಕೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ್ದಾರೆ. ಯಾರ ದೇಹವನ್ನು ಸುಟ್ಟು ಹಾಕಲಾಗಿದೆ ಎಂಬುದು ನನಗೆ ಮತ್ತು ನನ್ನ ಕುಟುಂಬಕ್ಕೆ ಇಂದಿಗೂ ತಿಳಿದಿಲ್ಲ,” ಎಂದು ಪತ್ರವು ಹೇಳಿತ್ತು.

“ಗೌರವಾನ್ವಿತ ರಾಹುಲ್ ಗಾಂಧಿ ಅವರೆ, ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನನ್ನ ಕುಟುಂಬದ ಒಬ್ಬರಿಗೆ ಉದ್ಯೋಗ ಮತ್ತು ಮನೆಯನ್ನು ನೀಡುವುದಾಗಿ ನನ್ನ ಕುಟುಂಬಕ್ಕೆ ಲಿಖಿತ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಉದ್ಯೋಗವನ್ನಾಗಲಿ ಅಥವಾ ಮನೆಯನ್ನಾಗಲಿ ನೀಡಿಲ್ಲ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ’’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಸಿಆರ್‌ಪಿಎಫ್ ಭದ್ರತೆಯಲ್ಲಿ ಜೈಲುವಾಸ’

ಸಂತ್ರಸ್ತೆಯ ಕುಟುಂಬವು ಸಿಆರ್‌ಪಿಎಫ್ ಒದಗಿಸಿದ ಭದ್ರತೆಯ ಅಡಿಯಲ್ಲಿ “ಜೈಲುವಾಸ” ಅನುಭವಿಸಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. “ಜೊತೆಗೆ ಉದ್ಯೋಗವಿಲ್ಲ ಮತ್ತು ಯಾರೂ ಉದ್ಯೋಗಕ್ಕಾಗಿ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜಾಮೀನು ಪಡೆದಿರುವ ಆರೋಪಿಗಳು ಮುಕ್ತವಾಗಿ ತಿರುಗಾಡುತ್ತಿದ್ದು, ನಾವು ಮನೆಯಲ್ಲಿಯೇ ಇದ್ದು ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದೇವೆ’’ ಎಂದು ತಂದೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬೃಜೇಶ್ ಪಾಠಕ್, “ಈ ಪ್ರಕರಣದ ಬಗ್ಗೆ ಸಿಬಿಐ ಈಗಾಗಲೇ ವಿಚಾರಣೆ ನಡೆಸಿದೆ. ಬಿಜೆಪಿ ಆಡಳಿತದಲ್ಲಿ ಯಾವುದೇ ಅಪರಾಧಿಗಳನ್ನು ತಪ್ಪಿಸಿಕೊಳ್ಳಲು ಅವಕಾಶವಿಲ್ಲ. ಸಂಭಾಲ್ ಇರಲಿ ಅಥವಾ ಹತ್ರಾಸ್ ಆಗಿರಲಿ, ಅವರು (ಗಾಂಧಿ) ಅವರನ್ನು ಪ್ರಚಾರದಲ್ಲಿರಲು ಭೇಟಿ ನೀಡುತ್ತಾರೆಯೇ ಹೊರತು ಬೇರೆ ಯಾವುದೇ ಕಾರಣಕ್ಕಾಗಿ ಅಲ್ಲ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 3, 2020 ರಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು ಮತ್ತು ಮೃತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಹೋರಾಡುವುದಾಗಿ ಘೋಷಿಸಿದ್ದರು.

19 ವರ್ಷದ ಯುವತಿ ಮೇಲೆ ಸೆಪ್ಟೆಂಬರ್ 14, 2020 ರಂದು ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಈ ವೇಳೆ ತೀವ್ರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಅಲಿಘರ್‌ಗೆ ಮತ್ತು ನಂತರ ದೆಹಲಿಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಸೆಪ್ಟೆಂಬರ್ 29, 2020 ರಂದು ಸಾವನ್ನಪ್ಪಿದ್ದರು. ಅಕ್ಟೋಬರ್ 30 ರ ಮುಂಜಾನೆ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರ ಅನುಮತಿಯಿಲ್ಲದೆ ನಡೆಸಲಾಗಿತ್ತು ಎಂದು ಅವರ ಕುಟುಂಬವು ಆರೋಪಿಸಿತ್ತು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, “ಕುಟುಂಬದವರ ಇಚ್ಛೆಯಂತೆ” ಶವಸಂಸ್ಕಾರವನ್ನು ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆಯ ನಂತರ, ಸಿಬಿಐ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ ಮತ್ತು ಎಲ್ಲಾ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...