Homeಮುಖಪುಟಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

2020ರ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಗುರುವಾರ ಭೇಟಿಯಾಗಿದ್ದಾರೆ. ಬೆಳಗ್ಗೆ 11.15 ರ ಸುಮಾರಿಗೆ ಬೂಲ್ ಗರ್ಹಿ ಗ್ರಾಮವನ್ನು ತಲುಪಿದ ಅವರು, ಸಂತ್ರಸ್ತೆಯ ಮನೆಯಲ್ಲಿ ಅವರ ಕುಟುಂಬದೊಂದಿಗೆ ಸುಮಾರು 35 ನಿಮಿಷಗಳ ಕಾಲ ಕಳೆದು, ಅವರೊಂದಿಗೆ ಸಂವಾದ ನಡೆಸಿದ್ದಾರೆ. ಅದಾಗ್ಯೂ, ಅವರ ಭೇಟಿಗೆಂದು ಗ್ರಾಮದಲ್ಲಿ ನೆರೆದಿದ್ದ ಮಾಧ್ಯಮದ ಗುಂಪಿನೊಂದಿಗೆ ಮಾತನಾಡದೆ ಅವರು ನಿರ್ಗಮಿಸಿದ್ದಾರೆ. ಹತ್ರಾಸ್ ಅತ್ಯಾಚಾರ-ಕೊಲೆ

ರಾಹುಲ್ ಭೇಟಿಯ ಕಾರಣಕ್ಕೆ ಕುಗ್ರಾಮ ಮತ್ತು ಅದರ ಸುತ್ತಮುತ್ತ ಪೊಲೀಸ್ ನಿಯೋಜನೆಯನ್ನು ಹೆಚ್ಚಿಸಲಾಗಿತ್ತು. ರಾಹುಲ್ ಗಾಂಧಿ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹತ್ರಾಸ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಚಂದ್ರಗುಪ್ತ ವಿಕ್ರಮಾದಿತ್ಯ, “ರಾಹುಲ್ ಗಾಂಧಿ ಅವರಿಗೆ ಈ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಯಾವಾಗಲೂ ಅವರನ್ನು ಬೆಂಬಲಿಸುತ್ತಿದ್ದು, ಅದನ್ನು ಮುಂದುವರಿಸುತ್ತಾರೆ. ಅವರು ಇಂದು ಅವರ ಸಮಸ್ಯೆಗಳನ್ನು ಆಲಿಸಲು ಬಂದಿದ್ದು, ಅವರು ಸಮಸ್ಯೆಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಾಹುಲ್ ಗಾಂಧಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಹೋಗಲು ಪ್ರಯತ್ನಿಸಿದ್ದರು. ಆದರೆ, ಡಿಸೆಂಬರ್ 10 ರವರೆಗೆ ಸಾರ್ವಜನಿಕ ಪ್ರತಿನಿಧಿಗಳು ಸೇರಿದಂತೆ ಹೊರಗಿನವರ ಪ್ರವೇಶವನ್ನು ರಾಜ್ಯ ಸರ್ಕಾರ ನಿಷೇಧಿಸಿದ್ದರಿಂದ ಸ್ಥಳೀಯ ಅಧಿಕಾರಿಗಳು ಅವರನ್ನು ತಡೆದಿದ್ದರು. ಹತ್ರಾಸ್ ಅತ್ಯಾಚಾರ-ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದಕ್ಕೂ ಮುನ್ನ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ತಂದೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ಗುರುವಾರ ಹಂಚಿಕೊಂಡಿದೆ. ಅದರ ನಂತರ ರಾಹುಲ್ ಗಾಂಧಿ ಕುಟುಂಬವನ್ನು ಭೇಟಿ ಮಾಡಿದ್ದಾರೆ.
“ಹತ್ರಾಸ್‌ನ ಸಂತ್ರಸ್ತ ಕುಟುಂಬವು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ. ಈ ಪತ್ರದ ನಂತರ, ರಾಹುಲ್ ಗಾಂಧಿ ಇಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಬಂದಿದ್ದಾರೆ” ಎಂದು ಪಕ್ಷವು ಪತ್ರವನ್ನು ಹಂಚಿಕೊಂಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ನೇರವಾಗಿ ಉದ್ದೇಶಿಸಿ ಬರೆದಿದ್ದ ಪತ್ರದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ಭರವಸೆಗಳನ್ನು ನಿಜವಾಗಿಯು ಈಡೇರಿಸಲು ಮತ್ತು ಸೆಪ್ಟೆಂಬರ್ 14, 2020 ರಂದು ನಡೆದ ಘಟನೆಗೆ ನ್ಯಾಯವನ್ನು ಪಡೆಯಲು ಕುಟುಂಬವು ಇನ್ನೂ ಹೇಗೆ ಕಾಯುತ್ತಿದೆ ಎಂಬುದನ್ನು ವ್ಯಕ್ತಪಡಿಸಲಾಗಿತ್ತು.

ರಾಜ್ಯದ ಅಧಿಕಾರಿಗಳು ಮತ್ತು ನ್ಯಾಯಾಲಯವು ಈ ವಿಷಯವನ್ನು ನಿಭಾಯಿಸುವ ಬಗ್ಗೆ ಹತಾಶೆ ವ್ಯಕ್ತಪಡಿಸಿದ ಸಂಸತ್ರಸ್ತೆಯ ತಂದೆ ಓಂಪ್ರಕಾಶ್, ಯುಪಿ ಆಡಳಿತವು ಕುಟುಂಬದ ಅನುಮತಿಯಿಲ್ಲದೆ ಸಂತ್ರಸ್ತೆಯ ದೇಹವನ್ನು ಅಂತ್ಯಸಂಸ್ಕಾರ ಮಾಡಿದೆ ಎಂದು ಹೇಳಿದ್ದಾರೆ.

‘‘ನನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆನ್ನುಮೂಳೆ ಮುರಿದು ದೇಹವನ್ನು ಛಿದ್ರಗೊಳಿಸಲಾಗಿತ್ತು. ಬಳಿಕ ನನ್ನ ಮನೆಯವರ ಅನುಮತಿಯಿಲ್ಲದೆ ರಾತ್ರಿಯ ಕತ್ತಲಲ್ಲಿ ಆಡಳಿತವು ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಮಧ್ಯಾಹ್ನ 2.30ಕ್ಕೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ್ದಾರೆ. ಯಾರ ದೇಹವನ್ನು ಸುಟ್ಟು ಹಾಕಲಾಗಿದೆ ಎಂಬುದು ನನಗೆ ಮತ್ತು ನನ್ನ ಕುಟುಂಬಕ್ಕೆ ಇಂದಿಗೂ ತಿಳಿದಿಲ್ಲ,” ಎಂದು ಪತ್ರವು ಹೇಳಿತ್ತು.

“ಗೌರವಾನ್ವಿತ ರಾಹುಲ್ ಗಾಂಧಿ ಅವರೆ, ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನನ್ನ ಕುಟುಂಬದ ಒಬ್ಬರಿಗೆ ಉದ್ಯೋಗ ಮತ್ತು ಮನೆಯನ್ನು ನೀಡುವುದಾಗಿ ನನ್ನ ಕುಟುಂಬಕ್ಕೆ ಲಿಖಿತ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಉದ್ಯೋಗವನ್ನಾಗಲಿ ಅಥವಾ ಮನೆಯನ್ನಾಗಲಿ ನೀಡಿಲ್ಲ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ’’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಸಿಆರ್‌ಪಿಎಫ್ ಭದ್ರತೆಯಲ್ಲಿ ಜೈಲುವಾಸ’

ಸಂತ್ರಸ್ತೆಯ ಕುಟುಂಬವು ಸಿಆರ್‌ಪಿಎಫ್ ಒದಗಿಸಿದ ಭದ್ರತೆಯ ಅಡಿಯಲ್ಲಿ “ಜೈಲುವಾಸ” ಅನುಭವಿಸಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. “ಜೊತೆಗೆ ಉದ್ಯೋಗವಿಲ್ಲ ಮತ್ತು ಯಾರೂ ಉದ್ಯೋಗಕ್ಕಾಗಿ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜಾಮೀನು ಪಡೆದಿರುವ ಆರೋಪಿಗಳು ಮುಕ್ತವಾಗಿ ತಿರುಗಾಡುತ್ತಿದ್ದು, ನಾವು ಮನೆಯಲ್ಲಿಯೇ ಇದ್ದು ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದೇವೆ’’ ಎಂದು ತಂದೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬೃಜೇಶ್ ಪಾಠಕ್, “ಈ ಪ್ರಕರಣದ ಬಗ್ಗೆ ಸಿಬಿಐ ಈಗಾಗಲೇ ವಿಚಾರಣೆ ನಡೆಸಿದೆ. ಬಿಜೆಪಿ ಆಡಳಿತದಲ್ಲಿ ಯಾವುದೇ ಅಪರಾಧಿಗಳನ್ನು ತಪ್ಪಿಸಿಕೊಳ್ಳಲು ಅವಕಾಶವಿಲ್ಲ. ಸಂಭಾಲ್ ಇರಲಿ ಅಥವಾ ಹತ್ರಾಸ್ ಆಗಿರಲಿ, ಅವರು (ಗಾಂಧಿ) ಅವರನ್ನು ಪ್ರಚಾರದಲ್ಲಿರಲು ಭೇಟಿ ನೀಡುತ್ತಾರೆಯೇ ಹೊರತು ಬೇರೆ ಯಾವುದೇ ಕಾರಣಕ್ಕಾಗಿ ಅಲ್ಲ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 3, 2020 ರಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು ಮತ್ತು ಮೃತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಹೋರಾಡುವುದಾಗಿ ಘೋಷಿಸಿದ್ದರು.

19 ವರ್ಷದ ಯುವತಿ ಮೇಲೆ ಸೆಪ್ಟೆಂಬರ್ 14, 2020 ರಂದು ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಈ ವೇಳೆ ತೀವ್ರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಅಲಿಘರ್‌ಗೆ ಮತ್ತು ನಂತರ ದೆಹಲಿಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಸೆಪ್ಟೆಂಬರ್ 29, 2020 ರಂದು ಸಾವನ್ನಪ್ಪಿದ್ದರು. ಅಕ್ಟೋಬರ್ 30 ರ ಮುಂಜಾನೆ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರ ಅನುಮತಿಯಿಲ್ಲದೆ ನಡೆಸಲಾಗಿತ್ತು ಎಂದು ಅವರ ಕುಟುಂಬವು ಆರೋಪಿಸಿತ್ತು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, “ಕುಟುಂಬದವರ ಇಚ್ಛೆಯಂತೆ” ಶವಸಂಸ್ಕಾರವನ್ನು ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆಯ ನಂತರ, ಸಿಬಿಐ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ ಮತ್ತು ಎಲ್ಲಾ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...