Homeಮುಖಪುಟ'ವೈಕಂ ಪ್ರಶಸ್ತಿ' ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

- Advertisement -
- Advertisement -

ಕೇರಳದ ದೇವಸ್ಥಾನ ಪ್ರವೇಶದ ‘ವೈಕಂ’ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ಚೊಚ್ಚಲ ‘ವೈಕಂ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಇಂದು ಸ್ವೀಕರಿಸಿದರು.

ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಪೆರಿಯಾರ್ ಸ್ಮಾರಕ ಮತ್ತು ಗ್ರಂಥಾಲಯವನ್ನು’ ಉದ್ಘಾಟಿಸಿದ ಬಳಿಕ, ದೇವನೂರ ಮಹಾದೇವ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶಸ್ತಿ ಪ್ರದಾನ ಮಾಡಿದರು.

ಪೆರಿಯಾರ್‌ ರಾಮಸ್ವಾಮಿ ಅವರ ನೇತೃತ್ವದಲ್ಲಿ ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ ಇದೀಗ ನೂರು ವರ್ಷ ತುಂಬಿದೆ. ಆದ್ದರಿಂದ, ಶತಮಾನ ಸಮಾರಂಭ ಮತ್ತು ಪೆರಿಯಾರ್‌ ಸ್ಮಾರಕ ಉದ್ಘಾಟನಾ ಕಾರ್ಯಕ್ರವನ್ನು ಕೇರಳದ ವೈಕಂದಲ್ಲಿ ತಮಿಳುನಾಡು ಸರ್ಕಾರದಿಂದ ಗುರುವಾರ ಹಮ್ಮಿಕೊಳ್ಳಲಾಗಿತ್ತು. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಪಾಲ್ಗೊಂಡಿದ್ದರು. ಇದೇ ವೇದಿಕೆ ಕಾರ್ಯಕ್ರಮದಲ್ಲಿ ದೇವನೂರ ಮಹದೇವ ಅವರಿಗೆ ವೈಕಂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ, ತಾವು ಬರೆದಿರುವ ʻಆರ್‌ಎಸ್‌ಎಸ್‌ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್‌ ಮತ್ತು ಮಲೆಯಾಳಂ ಅವತರಣಿಯನ್ನು ಕೇರಳ ಸಿಎಂ ವಿಜಯನ್‌ ಅವರಿಗೆ, ಕನ್ನಡ, ಇಂಗ್ಲಿಷ್‌, ತಮಿಳು ಅವತರಣಿಯನ್ನು ತಮಿಳುನಾಡು ಸಿಎಂ ಸ್ಟಾಲಿನ್‌ ಅವರಿಗೆ ನೀಡಿದರು.

“ತಂಥೈ ಪೆರಿಯಾರ್ ಅವರ ವಿಚಾರವಾದಿ ತತ್ವಗಳ ಅನುಯಾಯಿಯಾಗಿ, ಖ್ಯಾತ ಸಾಹಿತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ದಣಿವರಿಯದ ಪ್ರತಿಪಾದಕರಾದ ದೇವನೂರು ಮಹಾದೇವ ಅವರಿಗೆ ಚೊಚ್ಚಲ ‘ವೈಕಂ ಪ್ರಶಸ್ತಿ’ ಪ್ರದಾನ ಮಾಡಲು ನಾನು ಹೆಮ್ಮೆಪಡುತ್ತೇನೆ. ಅವರ ಕೃತಿಗಳು ಅಸಮಾನತೆಗಳನ್ನು ಎದುರಿಸಲು ಮತ್ತು ಸಮಾನ ಸಮಾಜವನ್ನು ಮುನ್ನಡೆಸಲು ಸಹಕಾರಿಯಾಗಿದೆ” ಎಂದು ಪ್ರಶಸ್ತಿ ಪ್ರದಾನದ ಬಳಿಕ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ವೈಕಮ್‌ನಲ್ಲಿ ಈ ಪ್ರಶಸ್ತಿಯನ್ನು ನೀಡುವುದು ಆಳವಾದ ಮಹತ್ವವನ್ನು ಹೊಂದಿದೆ. ಏಕೆಂದರೆ, ಇಲ್ಲಿಯೇ ಪೆರಿಯಾರ್ ಅಸ್ಪೃಶ್ಯತೆ ವಿರುದ್ಧ ಐತಿಹಾಸಿಕ ಚಳುವಳಿಯನ್ನು ಮುನ್ನಡೆಸಿದರು. ಸಾಮಾಜಿಕ ಸಮಾನತೆ ಮತ್ತು ನ್ಯಾಯದ ಅನ್ವೇಷಣೆಯಲ್ಲಿ ದೇವನೂರು ಮಹಾದೇವ ಅವರ ಕಾರ್ಯವು ನಮಗೆ ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಲಿ” ಎಂದು ಸ್ಟಾಲಿನ್ ಹೇಳಿದ್ದಾರೆ.

ವೈಕಂ ಪ್ರಶಸ್ತಿಯು ₹5 ಲಕ್ಷ ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಇದನ್ನೂ ಓದಿ; ಗುಜರಾತ್‌ನಲ್ಲಿ ಲಾರಿ ಅಪಘಾತ; ಕೆಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಲಿಂಗೇಗೌಡ ಸೇರಿದಂತೆ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....