Homeಮುಖಪುಟಲೋಕಸಭೆಯಲ್ಲಿ 'ಅಗೌರವ'ದ ಹೇಳಿಕೆ - ಸಚಿವ ಪಿಯೂಷ್ ಗೋಯಲ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್

ಲೋಕಸಭೆಯಲ್ಲಿ ‘ಅಗೌರವ’ದ ಹೇಳಿಕೆ – ಸಚಿವ ಪಿಯೂಷ್ ಗೋಯಲ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್

- Advertisement -
- Advertisement -

ವಿರೋಧ ಪಕ್ಷವು ಹಂಗೇರಿಯನ್ ಅಮೆರಿಕನ್ ಉದ್ಯಮಿ ಮತ್ತು ಲೋಕೋಪಕಾರಿ ಜಾರ್ಜ್ ಸೊರೊಸ್‌ ಅವರೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಪ್ರತಿಪಾದಿಸಿ “ಮಾನಹಾನಿಕರ ಮತ್ತು ಅವಮಾನಕರ” ಹೇಳಿಕೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಕಾಂಗ್ರೆಸ್ ಗುರುವಾರ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪಕ್ಷವು ದೇಶವನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸೊರೊಸ್‌ನೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿಯು ತನ್ನ ಆರೋಪಗಳನ್ನು ಪುನರುಚ್ಚರಿಸಿದ ನಂತರ ಸಂಸತ್ತಿನ ಉಭಯ ಸದನಗಳು ಕಳೆದ ಕೆಲವು ದಿನಗಳಲ್ಲಿ ಕೋಲಾಹಲಕ್ಕೆ ಸಾಕ್ಷಿಯಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಣಿಪುರದಲ್ಲಿ ತನ್ನ ವೈಫಲ್ಯಗಳನ್ನು ಮರೆಮಾಚಲು ಕೇಂದ್ರದ ಎನ್‌ಡಿಎ ಸರ್ಕಾರವು ಸೊರೊಸ್‌ ಅವರನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಮಣಿಪುರ ಇಡೀ ಮಾನವೀಯ ಬಿಕ್ಕಟ್ಟಿನಲ್ಲಿದೆ. ರಾಜ್ಯದಾದ್ಯಂತ ಜನರು ಭಯ ಮತ್ತು ಅನಿಶ್ಚಿತತೆಯಿಂದ ಬದುಕುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮೇ 2023 ರ ವೇಳೆ ರಾಜ್ಯದಲ್ಲಿ ಮೈತೇಯಿ ಮತ್ತು ಕುಕಿ-ಝೋ-ಹ್ಮಾರ್ಸ್ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ಪ್ರಾರಂಭವಾದಾಗಿನಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಏರಿಕೆ ಕಂಡುಬಂದಿದ್ದು, 22 ನವೆಂಬರ್‌ನಿಂದ ಕನಿಷ್ಠ 7 ಜನರು ಕೊಲ್ಲಲ್ಪಟ್ಟಿದ್ದಾರೆ.

ಮಣಿಪುರದ ಪರಿಸ್ಥಿತಿಯನ್ನು ಉನ್ನತ ಮಟ್ಟದಲ್ಲಿ ನಿಭಾಯಿಸಲಾಗುತ್ತಿದೆ ಎಂದು ಸಚಿವ ಪಿಯೂಷ್ ಗೋಯಲ್ ಪ್ರತಿಕ್ರಿಯಿಸಿದ್ದಾರೆ. “ಅವರು ಇದಕ್ಕೆ [ಕಾಂಗ್ರೆಸ್] ಪ್ರತಿಕ್ರಿಯಿಸಬೇಕು. ಜಾರ್ಜ್ ಸೊರೊಸ್ ಮತ್ತು ಈ ಎಲ್ಲಾ ಆಂತರಿಕ ಗೊಂದಲಗಳ ನಡುವೆ ಏನು ಸಂಬಂಧವಿದೆ ಎಂಬುದನ್ನು ರಾಷ್ಟ್ರಕ್ಕೆ ತಿಳಿಸಬೇಕು. ದೇಶದಲ್ಲಿನ ಆಂತರಿಕ ಗೊಂದಲಗಳಿಗೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಿದ್ದು, ಅವರು ವಿದೇಶಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ರಾಜ್ಯದ ಪರಿಸ್ಥಿತಿಗೆ ಕಾಂಗ್ರೆಸ್ “ಮಾತ್ರ ಹೊಣೆ” ಎಂದು ಗೋಯಲ್ ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಅವರಿಗೆ ಏನು ಸಂಬಂಧವಿದೆ?… ಇದಕ್ಕೆ ಕಾರಣ ಕಾಂಗ್ರೆಸ್ ಪಕ್ಷ ಮತ್ತು ಜಾರ್ಜ್ ಸೊರೊಸ್ ಅವರಂತಹ ಅನುದಾನಿತ ಸಂಸ್ಥೆಗಳು ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತಿವೆ” ಎಂದು ಅವರು ಹೇಳಿದ್ದಾರೆ.

ಈ ಹೇಳಿಕೆ ವಿರುದ್ಧ ಗುರುವಾರ ಬಿರ್ಲಾ ಅವರಿಗೆ ನೀಡಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಟಾಗೋರ್ ಅವರು, ಸಚಿವ ಗೊಗೋಯ್‌ ಅವರ ಟೀಕೆಗಳನ್ನು ಉಲ್ಲೇಖಿಸಿದ್ದಾರೆ. “ಸಚಿವರು ಸದನದಲ್ಲಿ ಇಂತಹ ಅವಹೇಳನಕಾರಿ ಉಲ್ಲೇಖಗಳನ್ನು ಮಾಡಲು ಅವಕಾಶ ನೀಡಿರುವುದು ತುಂಬಾ ಆಶ್ಚರ್ಯಕರವಾಗಿದೆ” ಎಂದು ಹೇಳಿದರು. ಸಚಿವರ ಈ ಟೀಕೆಗಳು “ಮಾನಹಾನಿಕರ ಮತ್ತು ಅಮಾನವೀಯ” ಎಂದು ಹೇಳಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಇದನ್ನೂ ಓದಿ: ‘ಒಬ್ಬ ವ್ಯಕ್ತಿಗಾಗಿ, 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

‘ಒಬ್ಬ ವ್ಯಕ್ತಿಗಾಗಿ 142 ಕೋಟಿ ಜನರನ್ನು ಕಡೆಗಣಿಸಲಾಗಿದೆ’ : ಪ್ರಿಯಾಂಕಾ ಗಾಂಧಿ

ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ಇದನ್ನೂ ಓದಿ: ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...