Homeಮುಖಪುಟಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯ ವೇಳೆ ತೀವ್ರ ವಾಗ್ವಾದ - ರಾಜ್ಯಸಭೆ ಅಧಿವೇಶನ ಡಿಸೆಂಬರ್ 16...

ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯ ವೇಳೆ ತೀವ್ರ ವಾಗ್ವಾದ – ರಾಜ್ಯಸಭೆ ಅಧಿವೇಶನ ಡಿಸೆಂಬರ್ 16 ಕ್ಕೆ ಮುಂದೂಡಿಕೆ

- Advertisement -
- Advertisement -

ರಾಜ್ಯಸಭಾ ಸ್ಪೀಕರ್ ಜಗದೀಪ್ ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಆಡಳಿತರೂಢ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆಯನ್ನು ಡಿಸೆಂಬರ್ 16 ಕ್ಕೆ ಶುಕ್ರವಾರ ಮುಂದೂಡಲಾಗಿದೆ. ಪ್ರತಿಪಕ್ಷಗಳು ಪ್ರಸ್ತಾವನೆಯ ಮೇಲೆ ಚರ್ಚೆಗೆ ಒತ್ತಾಯಿಸುತ್ತಿದ್ದಂತೆ ಕೋಲಾಹಲ ಉಂಟಾಗಿದ್ದು, ಆದರೆ ಆಡಳಿತರೂಢ ಪಕ್ಷಗಳು ಆಕ್ಷೇಪಿಸಿದವು. ಈ ವೇಳೆ ಸದನದಲ್ಲಿ ಗೊಂದಲ ಉಂಟಾಗಿ ಕಲಾಪ ಮುಂದೂಡಿಕೆಗೆ ಕಾರಣವಾಯಿತು.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರನ್ನು ‘ಅತ್ಯಂತ ಪಕ್ಷಪಾತಿ’ ಎಂದು ಆರೋಪಿಸಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಅವಿಶ್ವಾಸ ನಿರ್ಣಯದ ನೋಟಿಸ್ ಅನ್ನು ಮಂಡಿಸಿವೆ. ಗದ್ದಲದ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಧನಕರ್ ಅವಕಾಶ ನೀಡಿದ್ದಾರೆ. ಧನಕರ್ ವಿರುದ್ಧದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಡಳಿತರೂಢ ಪೀಠದಿಂದ ಸಂಸದರಿಗೆ ಮಾತನಾಡಲು ಹೆಚ್ಚಿನ ಸಮಯಾವಕಾಶ ನೀಡುವ ಮೂಲಕ ಸಭಾಪತಿಗಳು ಒಲವು ತೋರುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಕಾಂಗ್ರೆಸ್‌ಗೆ ಅಗೌರವ ತೋರುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಧನಕರ್ ಅವರು ಖರ್ಗೆ ಮತ್ತು ಸಭಾನಾಯಕ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್‌ನಲ್ಲಿ ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನದಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನಿಸಿದ್ದಾರೆ. ನಂತರ ಅವರು ಡಿಸೆಂಬರ್ 16 ಕ್ಕೆ ಕಲಾಪವನ್ನು ಮುಂದೂಡಿದ್ದಾರೆ.

ಈ ನಡುವೆ, ವಿರೋಧ ಪಕ್ಷವು ಹಂಗೇರಿಯನ್ ಅಮೆರಿಕನ್ ಉದ್ಯಮಿ ಮತ್ತು ಲೋಕೋಪಕಾರಿ ಜಾರ್ಜ್ ಸೊರೊಸ್‌ ಅವರೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಪ್ರತಿಪಾದಿಸಿ “ಮಾನಹಾನಿಕರ ಮತ್ತು ಅವಮಾನಕರ” ಹೇಳಿಕೆ ನೀಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಗುರುವಾರ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಪಕ್ಷವು ದೇಶವನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವರ ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸೊರೊಸ್‌ನೊಂದಿಗೆ ಪಿತೂರಿ ನಡೆಸುತ್ತಿದೆ ಎಂದು ಆಡಳಿತಾರೂಢ ಬಿಜೆಪಿಯು ತನ್ನ ಆರೋಪಗಳನ್ನು ಪುನರುಚ್ಚರಿಸಿದ ನಂತರ ಸಂಸತ್ತಿನ ಉಭಯ ಸದನಗಳು ಕಳೆದ ಕೆಲವು ದಿನಗಳಲ್ಲಿ ಕೋಲಾಹಲಕ್ಕೆ ಸಾಕ್ಷಿಯಾಗುತ್ತಿವೆ.

ಇದನ್ನೂ ಓದಿ: ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?

ಸಿನಿಮಾ ಥಿಯೇಟರ್ ಕಾಲ್ತುಳಿದ ಪ್ರಕರಣದಲ್ಲಿ ಬಂಧನ; ನಟ ಅಲ್ಲು ಅರ್ಜುನ್ ಮೇಲಿನ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...