Homeಕರ್ನಾಟಕಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

- Advertisement -
- Advertisement -

ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಭೆ ನಡೆಸಬೇಕು ಎಂಬ ಮಹಳಿಯರ ಬೇಡಿಕೆ ಹಲವು ವರ್ಷಗಳದ್ದು. ಅದಕ್ಕಾಗಿ ಇದೇ ವರ್ಷ ಜನವರಿಯಲ್ಲಿ 12 ದಿನಗಳ ಕಾಲ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿದ್ದರೂ ಸಹ ಅಂದಿನ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕನಿಷ್ಠ ಮಹಿಳೆಯನ್ನು ಭೇಟಿ ಮಾಡದೇ ದರ್ಪ ಮೆರೆದಿದ್ದರು.

ಆ ಸಂದರ್ಭದಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌, ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರ ಮಹಿಳೆಯರ ಪರವಾಗಿ ಮಾತನಾಡಿದ್ದರು. ಆದರೀಗ ಅದೇ ಮಹಿಳೆಯರು ಕನಿಷ್ಟ ಸಭೆ ನಡೆಸಿ ಎಂದು ಮುಖ್ಯಮಂತ್ರಿಗಳ ಬಳಿ ಒತ್ತಾಯಿಸಿದರೆ ಯಡಿಯೂರಪ್ಪನವರು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ನಿಷೇಧಿಸುವ ಯಾವುದೇ ಪ್ರಸ್ತಾಪ ನಮ್ಮ ಬಳಿ ಇಲ್ಲ ಎಂದು ಹೇಳಿರುವ ಮುಖ್ಯಮಂತ್ರಿಗಳು ಸಭೆ ಕುರಿತು ಮಾತೇ ಆಡುತ್ತಿಲ್ಲ.

ಪಟ್ಟು ಬಿಡದ ಬಡಮಹಿಳೆಯರು ಇಂದು ಬೆಂಗಳೂರಿಗೆ ಬಂದಿದ್ದಾರೆ. ಗಾಂಧಿಜೀಯವರ 150 ನೇ ಜಯಂತಿಯ ಅಂಗವಾಗಿ ಅವರ ಕನಸಾಗಿರುವ ಮದ್ಯಪಾನ ನಿಷೇಧವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಮಹಿಳೆಯರು ಸತ್ಯಾಗ್ರಹ ನಡೆಸುತ್ತಿದ್ದಾರೆ.

“ಸತ್ಯಾಗ್ರಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದರೆ ನಾವು ಅನುಮತಿ ನೀಡಲು ಆಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಕ್ಕೆ ಸಂಖ್ಯೆಯನ್ನು ಇಳಿಸಿಕೊಳ್ಳಲಾಯಿತು. ಆದರೆ ಇದೀಗ ನಮ್ಮ ಪ್ರತಿಭಟನೆಗೆ ಅನುಮತಿ ನೀಡದೇ, ಬೆಂಗಳೂರಿನ ಯಾವುದೇ ಜಾಗವನ್ನು ನಿಗದಿ ಮಾಡದೇ ನೂರಾರು ಸತ್ಯಾಗ್ರಹಿಗಳನ್ನು ರೈಲ್ವೆ ನಿಲ್ದಾಣದಲ್ಲೇ ಕೂರಿಸಲಾಗಿದೆ. ಮುಖ್ಯಮಂತ್ರಿಗಳು ಸಭೆ ಕರೆಯುವವರೆಗೂ ಬೆಂಗಳೂರಿನಿಂದ ಕದಲುವುದಿಲ್ಲ” ಎಂದು ಹಳ್ಳಿಗಳಿಂದ ಬಂದಿರುವ ತಾಯಂದಿರು ದಿಟ್ಟವಾಗಿ ಹೇಳುತ್ತಿದ್ದಾರೆ.

ಎಂತಹ ಕಾರ್ಯಕ್ರಮಕ್ಕೂ ಬೇಕಾದರೂ ಅನುಮತಿ ನೀಡುವ ಪೊಲೀಸ್‌ ಇಲಾಖೆ ಬಡ ಮಹಿಳೆಯರ ಸತ್ಯಾಗ್ರಹಕ್ಕೆ ಅನುಮತಿ ನೀಡದೇ ಇರುವುದು ನಾಚಿಗೇಡಿನ ಸಂಗತಿಯಾಗಿದೆ. ಮಹಿಳೆಯರ ಹೋರಾಟಕ್ಕೆ 15 ದಿನಗಳ ಮೊದಲೇ ಅನುಮತಿಗೆ ಅರ್ಜಿ ಹಾಕಿದ್ದರೂ ಅನುಮತಿ ನೀಡದ ಪೊಲೀಸ್‌ ಇಲಾಖೆ ಯಾರ ಮರ್ಜಿಗೆ ಒಳಗಾಗಿದೆ ಎಂಬ ಪ್ರಶ್ನೆ ಎದ್ದಿದೆ.

ಇಲ್ಲಿರುವ ಮಹಿಳೆಯರು ಮದ್ಯಪಾನದಿಂದಾಗುವ ದುಷ್ಪರಿಣಾಮಗಳನ್ನು ಸ್ವತಃ ಉಂಡು ಬಳಲಿದವರು. ಇವರೊಡಲಲ್ಲಿ ನೂರಾರು ನೋವಿನ ಕಥೆಗಳಿವೆ. ಸಮಾಜದ ಒಳಿತಿಗೆ, ಒಂದಿಷ್ಟು ನೆಮ್ಮದಿಯ ಬದುಕಿಗಾಗಿ ಮದ್ಯಪಾನ ನಿಷೇಧ ಮಾಡಿ ಎಂದು ಮಹಿಳೆಯರು ಬೇಡಿಕೆಯಿಟ್ಟಿದ್ದಾರೆ. ಒಮ್ಮೆಗೆ ಸಂರ್ಪೂಣ ಮದ್ಯಪಾನ ನಿಷೇಧ ಸಾದ್ಯವಿಲ್ಲವೆನ್ನುವುದು ಅವರಿಗೂ ಗೊತ್ತಿದೆ. ಮೊದಲು ಸರ್ಕಾರವೇ ಟಾರ್ಗೆಟ್‌ ನೀಡಿ ಮದ್ಯ ಮಾರಾಟ ಹೆಚ್ಚು ಮಾಡುವ ಆದೇಶ ವಾಪಸ್‌ ಪಡೆಯಬೇಕು, ಅಕ್ರಮ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಮದ್ಯ ಮಾರಟ ಎಷ್ಟಿರಬೇಕೆಂಬ ತೀರ್ಮಾನವನ್ನು ಗ್ರಾಮಪಂಚಾಯ್ತಿಗಳಿಗೆ ನೀಡಬೇಕು ಮತ್ತು ಕೊನೆಯದಾಗಿ ಈ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಸಭೆ ಕರೆಯಬೇಕು ಇವಿಷ್ಟೇ ಮಹಿಳೆಯರ ಹಕ್ಕೊತ್ತಾಯಗಳಾಗಿವೆ.

ಇನ್ನು ಹಿರಿಯ ಗಾಂಧಿವಾದಿ ಹೋರಾಟಗಾರ ಪ್ರಸನ್ನರವರು ಸತ್ಯಾಗ್ರಹ ನಡೆಯುತ್ತಿರುವ ರೈಲ್ವೆ ನಿಲ್ದಾಣಕ್ಕೆ ಬಂದು ಬೆಂಬಲ ಸೂಚಿಸಿದ್ದಾರೆ. “ನೂರಾರು ಮಹಿಳೆಯರು ತಮ್ಮ ನೋವಿನ ಕಥೆ ಹೇಳಲು, ಮದ್ಯ ನಿಷೇಧ ಆಗಬೇಕು ಅಂತ ಬೆಂಗಳೂರಿಗೆ ಬಂದಿದ್ದಾರೆ. ಅವರನ್ನು ಕರೆದು ಸಭೆ ನಡೆಸದೇ ಹೀಗೆ ಬೀದಿಯಲ್ಲಿ ಕೂರಿಸಿರುವುದು ನನಗೆ ತುಂಬಾ ನೋವಾಗುತ್ತಿದೆ.” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೊದಲ ಹಂತದಲ್ಲಿ ಚಳುವಳಿ ಗಟ್ಟಿಯಾಗಿರುವ ರಾಯಚೂರು…ಕಡೆಯಲ್ಲಿ ಹೆಂಡ ಮಾರಾಟ ರದ್ದಾಗಲಿ.

  2. ಹಲವಾರು ಹೋರಾಟ ತ್ಯಾಗ ಬಲಿದಾನ ಮತ್ತು ಚಳುವಳಿಗೆoದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಆದರೆ ಈಗ ಹೋರಾಟ ಅಥವಾ ಚಳುವಳಿಗಳನ್ನು ಮಾಡಲು ಸಕಾ೯ರ ದ ಅನುಮತಿ ಪಡೆಯಬೇಕು. ಸಕಾ೯ರ ಅನುಮತಿ ಕೊಡುತ್ತದೆ ಯೇ?

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...