Homeಕರ್ನಾಟಕಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

ಮೈಸೂರು: ದಶಕದ ಬಳಿಕ ದಲಿತರ ದೇವಸ್ಥಾನ ಪ್ರವೇಶ

- Advertisement -
- Advertisement -

ಜಯಪುರ: ದಲಿತರಿಗೆ ಪ್ರವೇಶವನ್ನು ನಿರಾಕರಿಸಿ, ಕಳೆದ 11 ವರ್ಷಗಳಿಂದ ಬೀಗ ಹಾಕಿದ್ದ, ಮೈಸೂರು ತಾಲ್ಲೂಕಿನ ಮಾರ್ಬಳ್ಳಿಯಲ್ಲಿ ಶುಕ್ರವಾರ ಮತ್ತೆ ಮಾರಮ್ಮ ದೇವಾಲಯದ ಬಾಗಿಲನ್ನು ಅಧಿಕಾರಿಗಳ ಮಧ್ಯೆಪ್ರವೇಶದಿಂದ ಬಾಗಿಲನ್ನು ತೆರೆಯಲಾಗಿದೆ.

ಊರಿನ ದಲಿತರು ದೇವಾಲಯವನ್ನು ಪ್ರವೇಶ ಮಾಡಿದರೆಂದು, ಮಾರ್ಬಳ್ಳಿಯ ವಾಲ್ಮೀಕಿ ನಾಯಕ ಜನಾಂಗದವರು ವಿರೋಧ ವ್ಯಕ್ತಪಡಿಸಿ, ದೇಗುಲಕ್ಕೆ ಬೀಗ ಹಾಕಲಾಗಿತ್ತು. ‌ಈ ಸಂಬಂಧ ಸರಕಾರಿ ಅಧಿಕಾರಿಗಳು ಎರಡು ಸಮುದಾಯದವರ ಮಧ್ಯೆ ಮಾತುಕತೆ ನಡೆಸಿದ ನಂತರ ಈ ದೇಗುಲದ ಬಾಗಿಲನ್ನು ತೆರೆಯಲಾಗಿದೆ.

ಈಚೆಗೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ್‌, ಸಮಾಜ ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮದ ಮುಖಂಡರ ಸಭೆ ನಡೆಸಲಾಗಿತ್ತು. ಇದು ಈಗ ಯಶಸ್ಸು ಕಂಡಿದೆ.

‘ಭಾರತೀಯ ಪ್ರಜೆಯಾದ ಯಾರಿಗೂ ಯಾವುದೇ ದೇವಾಲಯವನ್ನು ಪ್ರವೇಶಿಸುವ ಹಕ್ಕು ಇದೆ. ಎಲ್ಲರೂ  ಗ್ರಾಮದಲ್ಲಿ ಅನ್ಯೋನ್ಯತೆಯಿಂದ ಶಾಂತಿಯಿಂದ ಇರಬೇಕು. ಎಲ್ಲಾ ಜಾತಿ ಜನಾಂಗದವರಿಗೂ ದೇಗುಲಕ್ಕೆ ಮುಕ್ತ ಪ್ರವೇಶ ಮಾಡಿಕೊಡಬೇಕೆಂದು ಈ ಸಭೆಯಲ್ಲಿ ಸೂಚಿಸಲಾಗಿತ್ತು. ಇದಕ್ಕೆ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಸಹಮತ ವ್ಯಕ್ತಪಡಿಸಿದ್ದರು.

ಗ್ರಾಮ ಪಂಚಾಯಿತಿಯಲ್ಲಿ ತಹಶೀಲ್ದಾರ್ ಕೆ.ಎಂ. ಮಹೇಶ್ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ಶಾಂತಿ ಸಭೆ ನಡೆಸಲಾಗಿತ್ತು. ಇದಾದ ನಂತರ ದೇಗುಲದ ಬೀಗ ತೆಗೆದು ಎರಡು ಸಮುದಾಯಗಳ ಜನರಿಗೆ  ಪ್ರವೇಶಕ್ಕೆ ಅನುವು ಮಾಡಿಕೊಡಲಾಯಿತು. ದೀರ್ಘ ಕಾಲದ ನಂತರ ಮಾರಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು.

ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎ.ಎನ್.ಜನಾರ್ಧನ್, ಜಯಪುರ ನಾಡ ಕಚೇರಿ ಉಪತಹಶೀಲ್ದಾರ್ ಕೆ.ಎಸ್ ಕುಬೇರ್, ಕಂದಾಯ ಅಧಿಕಾರಿ ಸಿ.ವಿ.ಲೋಹಿತ್, ಗ್ರಾಮ ಲೆಕ್ಕಿಗ ಭಾಸ್ಕರ್, ಪಿಎಸ್ಐ ಹೇಮಲತಾ, ದಲಿತ ಮುಖಂಡರಾದ ಪರಮೇಶ್, ಕುಮಾರ್ ಹಾಗೂ ವಾಲ್ಮೀಕಿ ನಾಯಕ ಸಮುದಾಯ ಮುಖಂಡರಾದ ಶಿವಣ್ಣ ನಾಯಕ, ರಾಜಶೇಖರ ಮೂರ್ತಿ, ರಾಜ ನಾಯಕ, ರಾಜಣ್ಣ ಪಾಲ್ಗೊಂಡಿದ್ದರು.

ಇದನ್ನೂ ಓದಿ….ಕಲಬುರಗಿ | ಸಿಗರೇಟ್ ಬಾಕ್ಸ್ ಕದ್ದ ಆರೋಪ : ದಲಿತ ಯುವಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...