Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...