Homeಮುಖಪುಟಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

ಅಪ್ರಾಪ್ತ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಮದುವೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌

- Advertisement -
- Advertisement -

ಮುಂಬೈ: ಅಪ್ರಾಪ್ತ ಮುಸ್ಲಿಂ ಯುವಕನನ್ನು ಮದುವೆಯಾಗಲು ನಿರ್ಧರಿಸಿದ ಹಿಂದೂ ಯುವತಿಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಮುಂಬೈನ  ಹಾಸ್ಟೆಲ್ ವೊಂದರಲ್ಲಿ ಇರುವ ಯುವತಿಯನ್ನು ಯಾರೊಬ್ಬರೂ ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ನಾವು ಯುವತಿಯ ಅದೃಷ್ಟವನ್ನು ಮಾತ್ರ ಬಯಸುತ್ತೇವೆ. ನಾವು ಆಕೆಗೆ ಎಲ್ಲಾ ಸ್ವಾತಂತ್ರ್ಯವನ್ನು ನೀಡುತ್ತೇವೆ. ಯುವತಿಯು ಏನು ಮಾಡಬೇಕೆಂದು ಬಯಸುತ್ತಿದ್ದರೋ ಅದನ್ನು ಮಾಡಲಿ ಎಂದು ಎಂದು ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠ ಹೇಳಿದೆ.

20 ವರ್ಷದ ಯುವತಿ ಪ್ರಸ್ತುತ ಚೆಂಬೂರಿನ ಸರ್ಕಾರಿ ಮಹಿಳಾ ಕೇಂದ್ರದಲ್ಲಿ (ಹಾಸ್ಟೆಲ್) ನೆಲೆಸಿದ್ದಾಳೆ. ಆಕೆ ತನ್ನ ಮನೆ ತೊರೆದು 19 ವರ್ಷದ ಮುಸ್ಲಿಂ ವ್ಯಕ್ತಿಯೊಂದಿಗೆ ಜೀವನ ನಡೆಸಲು ಪ್ರಾರಂಭಿಸಿದ ನಂತರ ಆಕೆಯ ತಂದೆ ದಾಖಲಿಸಿದ ದೂರಿನ ಮೇರೆಗೆ ನ್ಯಾಯಾಲಯ ಅವಳನ್ನು ಹಾಸ್ಟೆಲ್ ಗೆ ಕಳುಹಿಸಿತ್ತು.

ದೂರಿನ ನಂತರ, ಹುಡುಗಿಯನ್ನು ಠಾಣೆಗೆ ಕರೆಸಲಾಯಿತು. ಅಲ್ಲಿ ಬಜರಂಗದಳದ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಹಾಜರಿದ್ದರು. ಪೊಲೀಸ್ ಅಧಿಕಾರಿಗಳು ಅವಳನ್ನು ಬೆದರಿಸಿ ಮತ್ತು ಸಂಬಂಧವನ್ನು ತ್ಯಜಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮುಸ್ಲಿಂ ವ್ಯಕ್ತಿಯ ಅರ್ಜಿಯಲ್ಲಿ ಹೇಳಲಾಗಿದೆ.

ಈ ಒತ್ತಡದ ಹೊರತಾಗಿಯೂ, ಹುಡುಗಿ ಅರ್ಜಿದಾರರನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಳು ಮತ್ತು ತನ್ನ ಹೆತ್ತವರ ಬಳಿಗೆ ಮರಳಲು ನಿರಾಕರಿಸಿದಳು. ಪರಿಣಾಮವಾಗಿ ಆಕೆಯನ್ನು ಆಶ್ರಯಧಾಮಕ್ಕೆ ಕಳುಹಿಸಲಾಯಿತು.

ನಂತರ ಆ ವ್ಯಕ್ತಿ ಆಕೆಯನ್ನು ಆಶ್ರಯಮನೆಯಿಂದ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಯುವತಿಯ ತಂದೆ, ವಕೀಲ ಸನಾ ರಯೀಸ್ ಖಾನ್ ಮೂಲಕ ಮಗಳನ್ನು ತನ್ನ ಸುಪರ್ದಿಗೆ ನೀಡುವಂತೆ ಕೋರಿದ್ದರು.

ಯುವತಿಯೊಂದಿಗೆ ಮಾತನಾಡಲು ವಕೀಲ ಖಾನ್‌ಗೆ ನ್ಯಾಯಾಲಯ ಅನುಮತಿ ನೀಡಿತು. ಅವರು ಗುರುವಾರ ಮಹಿಳೆಯನ್ನು ಒಂದು ಗಂಟೆ ಭೇಟಿಯಾಗಿ, ಯುವತಿಯು ಸ್ವಲ್ಪ “ವಿಚಿತ್ರವಾಗಿ” ತೋರುತ್ತಿದ್ದರು ಎಂದು ಶುಕ್ರವಾರ ಪೀಠದ ಮುಂದೆ ಖಾನ್ ಹೇಳಿದರು.

ಒಂದು ಹಂತದಲ್ಲಿ, ಅವಳು ತನ್ನ ಹೆತ್ತವರೊಂದಿಗೆ ಇರಲು ಸಿದ್ಧಳಾಗಿದ್ದಾಳೆಂದು ಹೇಳಿದಳು. ನಂತರ ಅವಳು ಅರ್ಜಿದಾರರೊಂದಿಗೆ ಹೋಗಿ ವಾಸಿಸಲು ಬಯಸುವುದಾಗಿ ಹೇಳಿದಳು. ಅವಳ ಕೈಗಳು ನಡುಗುತ್ತಿದ್ದವು ಮತ್ತು ಅವಳು ಸ್ಥಿರವಾಗಿ ಕಾಣಲಿಲ್ಲ. ಅವಳ ಆಯ್ಕೆಯು ಬಾಹ್ಯ ಒತ್ತಡ ಮತ್ತು ಅನಗತ್ಯ ಪ್ರಭಾವದಿಂದ ಮುಕ್ತವಾಗಿಲ್ಲವೆಂದು ತೋರುತ್ತದೆ.  ಇಂತಹ ಸ್ಥಿತಿಯಲ್ಲಿ, ಅವಳು ತಿಳುವಳಿಕೆಯುಳ್ಳ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವಂತೆ ತೋರುತ್ತಿಲ್ಲ ಎಂದು ಖಾನ್ ಪೀಠದ ಮುಂದೆ ಹೇಳಿದರು.

ಅರ್ಜಿದಾರ ಮುಸ್ಲಿಂ ವ್ಯಕ್ತಿಯು 2025ರ ಅಕ್ಟೋಬರ್‌ನಲ್ಲಿ ಮದುವೆಯ ವಯಸ್ಸಿಗೆ ತಲುಪುತ್ತಾನೆ. ಅಲ್ಲಿಯವರೆಗೆ ಅಂದರೆ ಸುಮಾರು  ಎರಡು ವರ್ಷಗಳ ಕಾಲ ಯುವತಿ ಮತ್ತು ಅರ್ಜಿದಾರನು ಕಾಯುವಂತೆ ಖಾನ್ ಸಲಹೆ ನೀಡಿದರು.

ಯುವತಿಯ ತಂದೆಯು ತನ್ನ ಮಗಳಿಗಾಗಿಯ ಬ್ಯೂಟಿ ಸಲೂನ್ ವ್ಯವಹಾರವನ್ನು ಸ್ಥಾಪಿಸಲು ಸಿದ್ಧರಿದ್ದಾರೆ ಮತ್ತು ಈ ಎರಡು ವರ್ಷಗಳವರೆಗೆ ಅರ್ಜಿದಾರರೊಂದಿಗೆ ಯುವತಿಯು ಫೋನ್‌ನಲ್ಲಿ ಮಾತನಾಡಲು ಅನುಮತಿ ನೀಡುತ್ತಾರೆ. ನಂತರ ಯುವತಿಯು ತನ್ನ ಜೀವನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಕೀಲರು ಹೇಳಿದರು.

ಇದೀಗ ಅರ್ಜಿದಾರರ ಜೊತೆ ಹೋಗುವ ತನ್ನ ನಿರ್ಧಾರದ ಬಗ್ಗೆ ಯುವತಿ ಅಚಲವಾಗಿದ್ದರೆ, ತಂದೆ ಜೊತೆ ಹೋಗಲು ಯುವತಿ ನಿರಾಕರಿಸುತ್ತಿದ್ದಾರೆ ಎಂದು ಖಾನ್ ಹೇಳಿದರು.

ನಿಸ್ಸಂಶಯವಾಗಿ ಯುವತಿ ವಯಸ್ಕಳಾಗಿರುವುದರಿಂದ, ಯಾರು ಆಕೆಯನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ.ನಾವು ಅವಳ ಸ್ವತಂತ್ರದ ಆಯ್ಕೆಯನ್ನು ಮಾತ್ರ ಬಯಸುತ್ತೇವೆ.  ಯುವತಿಯು ಏನು ಮಾಡಬೇಕೆಂದು ಬಯಸುತ್ತರೋ ಅದನ್ನು ಮಾಡಲಿ ಎಂದು ಪೀಠ ಹೇಳಿದೆ.

ಅರ್ಜಿದಾರನ ವಿವರವನ್ನು ತಾರ್ಕಿಕತೆಯೊಂದಿಗೆ  ನೋಡಿದ ಪೀಠವು ತರುವಾಯ ಅದನ್ನು ಅಂಗೀಕರಿಸಿತು.

ಇದನ್ನೂ ಓದಿ….ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...