Homeಮುಖಪುಟವಯನಾಡ್‌ ದುರಂತಕ್ಕೆ ಸಿಗದ ಪರಿಹಾರ ಪ್ಯಾಕೇಜ್ - ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ವಯನಾಡ್‌ ದುರಂತಕ್ಕೆ ಸಿಗದ ಪರಿಹಾರ ಪ್ಯಾಕೇಜ್ – ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

- Advertisement -
- Advertisement -

ರಾಜಕೀಯ ಕಾರಣಕ್ಕಾಗಿ ವಯನಾಡು ಭೂಕುಸಿತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರವು ನೆರವು ನಿರಾಕರಿಸುತ್ತಿದೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಶನಿವಾರ ಆರೋಪಿಸಿದ್ದು, ನೈಸರ್ಗಿಕ ವಿಕೋಪಗಳ ಸಮಯದಲ್ಲಿ ಸರ್ಕಾರವು ಯಾವುದೇ ತಾರತಮ್ಯ ಮಾಡಬಾರದು ಎಂದು ಪ್ರತಿಪಾದಿಸಿದ್ದಾರೆ. ವಯನಾಡ್‌ ದುರಂತಕ್ಕೆ

ಕೇಂದ್ರದ ತಾರತ್ಯಮ ನೀತಿಯನ್ನು ವಿರೋಧಿಸಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಕೇರಳದ ಸಂಸದರು ಶನಿವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ ನಂತರ, ಭೂಕುಸಿತ ಪೀಡಿತ ವಯನಾಡ್‌ಗೆ ಕೇಂದ್ರದಿಂದ ಪರಿಹಾರ ಪ್ಯಾಕೇಜ್‌ಗೆ ಒತ್ತಾಯಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ವಯನಾಡ್‌ ದುರಂತಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಸ್ಟೀಸ್ ಫಾರ್ ವಯನಾಡ್, ವಯನಾಡ್‌ಗೆ ಪರಿಹಾರ ಪ್ಯಾಕೇಜ್ ಒದಗಿಸಿ” ಎಂದು ಬರೆದಿರುವ ಬ್ಯಾನರ್ ಕೂಡ ಹಿಡಿದು ಮಕರ ದ್ವಾರದ ಮೆಟ್ಟಿಲುಗಳ ಮುಂದೆ ತಮ್ಮ ಪ್ರತಿಭಟನೆಯನ್ನು ನಡೆಸಿದ ಅವರು, “ವಯನಾಡಿಗೆ ನ್ಯಾಯ ನೀಡಿ” ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಸರ್ಕಾರವು ವಯನಾಡಿಗೆ ವಿಶೇಷ ಪ್ಯಾಕೇಜ್ ನೀಡಲು ನಿರಾಕರಿಸುತ್ತಿರುವುದು ನಮಗೆ ತುಂಬಾ ಬೇಸರ ತಂದಿದೆ. ಇದನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ನೀಡುವಂತೆ ನಾವು ಗೃಹ ಸಚಿವರ ಬಳಿಗೆ ಹೋಗಿದ್ದೇವೆ. ನಾವು ಪ್ರಧಾನಿ ಮತ್ತು ಸಾಧ್ಯವಿರುವ ಎಲ್ಲರಿಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದರು.

“ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಇದೇ ರೀತಿಯ ದೊಡ್ಡ ಪ್ರಮಾಣದ ವಿನಾಶ ಸಂಭವಿಸಿದೆ. ಅಲ್ಲಿಯೂ ಅವರು ಕೇಂದ್ರದ ನೆರವು ನೀಡಬೇಕೆಂದು ಅವರು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದಾರೆ. ವಯನಾಡಿನಲ್ಲಿ, ಇಡೀ ದೇಶವು ಜನರ ವಿನಾಶ, ಸಾವು ಮತ್ತು ನೋವನ್ನು ನೋಡಿದೆ. ಆದರೆ ರಾಜಕೀಯ ಕಾರಣಕ್ಕೆ, ಕೇಂದ್ರ ಸರ್ಕಾರವು ಇನ್ನೂ ಸಂತ್ರಸ್ತರಿಗೆ ನೀಡಬೇಕಾದುದನ್ನು ನೀಡಲು ನಿರಾಕರಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

“ಅವರು ಭಾರತದ ಪ್ರಜೆಗಳು, ನೈಸರ್ಗಿಕ ವಿಕೋಪಗಳ ಸಮಯದಲ್ಲಿ, ನೋವಿನ ಸಮಯದಲ್ಲಿ, ಯಾವುದೇ ರೀತಿಯ ಸಂಕಟದ ಸಮಯದಲ್ಲಿ ಯಾವುದೇ ತಾರತಮ್ಯ ಇರಬಾರದು. ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿಗಳು ಪ್ರತಿಯೊಬ್ಬ ಭಾರತೀಯ ನಾಗರಿಕನ ಪಾಲಕರಾಗಬೇಕು” ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಜುಲೈ 30 ರಂದು ಕೇರಳವನ್ನು ಅಪ್ಪಳಿಸಿದ ಈ ದುರಂತವು ಮೂರು ಗ್ರಾಮಗಳ ದೊಡ್ಡ ಭಾಗಗಳನ್ನು ನಾಶಪಡಿಸಿತ್ತು. ಪುಂಚಿರಿಮಟ್ಟಂ, ಚೂರಲ್ಮಲಾ ಮತ್ತು ಮುಂಡಕ್ಕೈ ಜೊತೆಗೆ ವಯನಾಡ್‌ನ ಅಟ್ಟಮಾಲಾ ಪ್ರದೇಶ ಕೂಡಾ ಹಾನಿಗೀಡಾಗಿವೆ. ಸರ್ಕಾರದ ಪ್ರಕಾರ, ದುರಂತದಲ್ಲಿ 231 ಜೀವಗಳು ಬಲಿಯಾಗಿವೆ.

ಇದನ್ನೂ ಓದಿ: ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ : ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ : ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...