Homeಮುಖಪುಟಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು - ಸಂಸದ ಅಸಾದುದ್ದೀನ್ ಓವೈಸಿ

ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

- Advertisement -
- Advertisement -

ದೇಶದ ಮಸೀದಿಗಳು ಅಪಾಯದಲ್ಲಿದ್ದು, ವಕ್ಫ್ ಮಂಡಳಿಯನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಎಂದು ಲೋಕಸಭೆಯಲ್ಲಿ ನಡೆಯುತ್ತಿರುವ ಸಂವಿಧಾನ ಕುರಿತ ಚರ್ಚೆಯ ಸಂದರ್ಭದಲ್ಲಿ ಶನಿವಾರ ಹೇಳಿದರು. ಪ್ರಧಾನಿಗೆ ಸಂವಿಧಾನದ

ಸದನದಲ್ಲಿ ಮಾತನಾಡಿದ ಅವರು, “ಮುಸ್ಲಿಮರನ್ನು ದುರ್ಬಲಗೊಳಿಸಲಾಗುತ್ತಿದ್ದು, ಅವರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲಾಗುತ್ತಿದೆ. ಮುಸ್ಲಿಮರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಸಾಚಾರ್ ಸಮಿತಿ ವರದಿಯ ಆಧಾರದ ಮೇಲೆ ಡಿಲಿಮಿಟೇಶನ್ ಜಾರಿಯಾಗುತ್ತಿಲ್ಲ” ಎಂದು ತಿಳಿಸಿದರು.

ಸದನದಲ್ಲಿ ಮಾತನಾಡುತ್ತಾ, ವಕ್ಫ್ ಆಸ್ತಿ ಕಿತ್ತುಕೊಳ್ಳುವುದು ಸರ್ಕಾರದ ಉದ್ದೇಶವಾಗಿದ್ದು, ಅವರು ತಮ್ಮ ಶಕ್ತಿಯ ಆಧಾರದ ಮೇಲೆ ಅದನ್ನು ಕಿತ್ತುಕೊಳ್ಳಲು ಬಯಸುತ್ತಾರೆ ಎಂದು ಓವೈಸಿ ಹೇಳಿದರು. ಉರ್ದು ನಾಶವಾಗುತ್ತಿದೆ ಎಂದು ಹೇಳಿದ ಅವರು, ಮುಸ್ಲಿಂ ಸಂಸ್ಕೃತಿ ನಾಶವಾಗುತ್ತಿದ್ದು, ಸಂವಿಧಾನವೇ ಸತ್ಯ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂವಿಧಾನದ 26 ನೇ ವಿಧಿಯು ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕನ್ನು ನೀಡುತ್ತದೆ. ಆದರೆ ವಕ್ಫ್‌ಗೂ ಸಂವಿಧಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಪ್ರಧಾನಿಗೆ ಪಾಠ ಮಾಡುವವರು ಯಾರು? ಸಂವಿಧಾನದ 26 ನೇ ವಿಧಿಯನ್ನು ಅವರಿಗೆ ಕಲಿಸಬೇಕು ಎಂದು ಅವರು ಹೇಳಿದರು.

ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ವಿಂಗಡಣೆಯನ್ನು ಮುಸ್ಲಿಂ ಜನರು ಗೆಲ್ಲಲು ಸಾಧ್ಯವಾಗದ ರೀತಿಯಲ್ಲಿ ಮಾಡಲಾಗಿದೆ ಎಂದು ಓವೈಸಿ ಪ್ರತಿಪಾದಿಸಿದ್ದಾರೆ. “2007 ರಲ್ಲಿ, ಸಾಚಾರ್ ಸಮಿತಿಯು ಹೊಸದಾಗಿ ಡಿಲಿಮಿಟೇಶನ್ ಕೇಳಿತ್ತು. ಹೊಸ ಜನಗಣತಿ ನಡೆಸಿದಾಗ ಸಾಚಾರ್ ಸಮಿತಿ ಶಿಫಾರಸುಗಳನ್ನು ಜಾರಿಗೆ ತರಲಾಗುವುದು ಎಂದು ನಾನು ಭಾವಿಸುವುದಿಲ್ಲ. ಮುಸ್ಲಿಮರಿಗೆ 15 ಮತ್ತು 16ನೇ ವಿಧಿಯಲ್ಲಿ ಮೀಸಲಾತಿ ಸಿಗಲಿಲ್ಲ. ಸಂವಿಧಾನದಲ್ಲಿ 25, 26, 29, 13, 14 ಮತ್ತು 21 ನೇ ವಿಧಿಗಳನ್ನು ಉಲ್ಲೇಖಿಸಿ, ಅದನ್ನು ಸರಿಯಾಗಿ ಪಾಲಿಸಲಾಗುತ್ತಿಲ್ಲ” ಎಂದರು.

“ಹಲವು ರಾಜ್ಯಗಳಲ್ಲಿ ಅದನ್ನು ತಿನ್ನಬಾರದು, ಇದನ್ನು ತಿನ್ನಬಾರದು ಎಂಬ ಕಾನೂನು ಮಾಡಲಾಗಿದೆ. ಹರಿಯಾಣ ಮತ್ತು ರಾಜಸ್ಥಾನದಲ್ಲಿ ಗೋರಕ್ಷಕರಿಗೆ ಪೊಲೀಸ್ ಅಧಿಕಾರವನ್ನು ನೀಡಲಾಯಿತು. ಅವರು ಗುಂಪು ಹತ್ಯೆಯಲ್ಲಿ ಮಾಡುವ ಮೂಲಕ ಅದನ್ನು ದುರುಪಯೋಗಪಡಿಸಿಕೊಂಡರು” ಎಂದು ಅವರು ಹೇಳಿದರು. ಪ್ರಧಾನಿಗೆ ಸಂವಿಧಾನದ

ಉದಾಹರಣೆಯೊಂದನ್ನು ನೀಡಿದ ಅವರು, ಸಬೀರ್ ಮಲಿಕ್ ಎಂಬವರು ದನದ ಮಾಂಸ ತಿಂದ ಕಾರಣಕ್ಕೆ ಹೊಡೆದು ಸಾಯಿಸಿದ್ದರು, ಆದರೆ ನಂತರ ತಿಳಿದದ್ದೇನೆಂದರೆ, ಅಂತಹದ್ದೇನೂ ನಡೆದಿಲ್ಲ ಎಂದು. ಜುನೈದ್ ಮತ್ತು ನಫೀರ್ ಕೂಡ ಸಜೀವ ದಹನವಾಗಿದ್ದರು. ಧಾರ್ಮಿಕ ಮತಾಂತರದ ಕಾನೂನನ್ನು ಪರಿಚಯಿಸಲಾಯಿತು. ನನ್ನ ಧರ್ಮವನ್ನು ಬದಲಾಯಿಸಲು ನಾನು ಸರ್ಕಾರವನ್ನು ಕೇಳಬೇಕೇ? ಎಂದು ಅವರು ಕೇಳಿದರು.

ಒಂದು ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬದುಕಿದ್ದರೆ, ಧರ್ಮ ಬದಲಾಯಿಸಲು ಸರ್ಕಾರದ ಅನುಮತಿ ಪಡೆಯಿರಿ ಎಂದು ಅವರಿಗೂ ಹೇಳುತ್ತಿದ್ದರು ಎಂದು ಓವೈಸಿ ಹೇಳಿದರು. “ನಮ್ಮದು ಸಾಂಸ್ಕೃತಿಕ ರಾಷ್ಟ್ರೀಯತೆ ಎಂದು ಬಿಜೆಪಿ ಹೇಳುತ್ತದೆ, ಆದರೆ ಅವರದ್ದು ಸಾಂಸ್ಕೃತಿಕ ರಾಷ್ಟ್ರೀಯತೆ ಅಲ್ಲ. ಅದರ ರಾಷ್ಟ್ರೀಯತೆ ಹಿಂದುತ್ವದ್ದಾಗಿದ್ದು, ಅದು ಭಾರತದ ರಾಷ್ಟ್ರೀಯತೆಯ ಸಂಪೂರ್ಣ ವಿರೋಧಿಯಾಗಿದೆ. ಸಂವಿಧಾನ ಅಲ್ಪಸಂಖ್ಯಾತರು, ದಲಿತರಿಗೆ ಹಲವು ಹಕ್ಕುಗಳನ್ನು ನೀಡಿದ್ದರೂ ಅದು ಸಿಗುತ್ತಿಲ್ಲ” ಎಂದು ಓವೈಸಿ ಹೇಳಿದರು.

ಇದನ್ನೂ ಓದಿ: ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...