Homeಮುಖಪುಟಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು - ಸಂಸದ ಅಸಾದುದ್ದೀನ್ ಓವೈಸಿ

ಪ್ರಧಾನಿಗೆ ಸಂವಿಧಾನದ ವಿಧಿಗಳ ಪಾಠ ಮಾಡಬೇಕು – ಸಂಸದ ಅಸಾದುದ್ದೀನ್ ಓವೈಸಿ

- Advertisement -
- Advertisement -

ದೇಶದ ಮಸೀದಿಗಳು ಅಪಾಯದಲ್ಲಿದ್ದು, ವಕ್ಫ್ ಮಂಡಳಿಯನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ಎಂದು ಲೋಕಸಭೆಯಲ್ಲಿ ನಡೆಯುತ್ತಿರುವ ಸಂವಿಧಾನ ಕುರಿತ ಚರ್ಚೆಯ ಸಂದರ್ಭದಲ್ಲಿ ಶನಿವಾರ ಹೇಳಿದರು. ಪ್ರಧಾನಿಗೆ ಸಂವಿಧಾನದ

ಸದನದಲ್ಲಿ ಮಾತನಾಡಿದ ಅವರು, “ಮುಸ್ಲಿಮರನ್ನು ದುರ್ಬಲಗೊಳಿಸಲಾಗುತ್ತಿದ್ದು, ಅವರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲಾಗುತ್ತಿದೆ. ಮುಸ್ಲಿಮರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಸಾಚಾರ್ ಸಮಿತಿ ವರದಿಯ ಆಧಾರದ ಮೇಲೆ ಡಿಲಿಮಿಟೇಶನ್ ಜಾರಿಯಾಗುತ್ತಿಲ್ಲ” ಎಂದು ತಿಳಿಸಿದರು.

ಸದನದಲ್ಲಿ ಮಾತನಾಡುತ್ತಾ, ವಕ್ಫ್ ಆಸ್ತಿ ಕಿತ್ತುಕೊಳ್ಳುವುದು ಸರ್ಕಾರದ ಉದ್ದೇಶವಾಗಿದ್ದು, ಅವರು ತಮ್ಮ ಶಕ್ತಿಯ ಆಧಾರದ ಮೇಲೆ ಅದನ್ನು ಕಿತ್ತುಕೊಳ್ಳಲು ಬಯಸುತ್ತಾರೆ ಎಂದು ಓವೈಸಿ ಹೇಳಿದರು. ಉರ್ದು ನಾಶವಾಗುತ್ತಿದೆ ಎಂದು ಹೇಳಿದ ಅವರು, ಮುಸ್ಲಿಂ ಸಂಸ್ಕೃತಿ ನಾಶವಾಗುತ್ತಿದ್ದು, ಸಂವಿಧಾನವೇ ಸತ್ಯ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂವಿಧಾನದ 26 ನೇ ವಿಧಿಯು ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕನ್ನು ನೀಡುತ್ತದೆ. ಆದರೆ ವಕ್ಫ್‌ಗೂ ಸಂವಿಧಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಪ್ರಧಾನಿಗೆ ಪಾಠ ಮಾಡುವವರು ಯಾರು? ಸಂವಿಧಾನದ 26 ನೇ ವಿಧಿಯನ್ನು ಅವರಿಗೆ ಕಲಿಸಬೇಕು ಎಂದು ಅವರು ಹೇಳಿದರು.

ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ವಿಂಗಡಣೆಯನ್ನು ಮುಸ್ಲಿಂ ಜನರು ಗೆಲ್ಲಲು ಸಾಧ್ಯವಾಗದ ರೀತಿಯಲ್ಲಿ ಮಾಡಲಾಗಿದೆ ಎಂದು ಓವೈಸಿ ಪ್ರತಿಪಾದಿಸಿದ್ದಾರೆ. “2007 ರಲ್ಲಿ, ಸಾಚಾರ್ ಸಮಿತಿಯು ಹೊಸದಾಗಿ ಡಿಲಿಮಿಟೇಶನ್ ಕೇಳಿತ್ತು. ಹೊಸ ಜನಗಣತಿ ನಡೆಸಿದಾಗ ಸಾಚಾರ್ ಸಮಿತಿ ಶಿಫಾರಸುಗಳನ್ನು ಜಾರಿಗೆ ತರಲಾಗುವುದು ಎಂದು ನಾನು ಭಾವಿಸುವುದಿಲ್ಲ. ಮುಸ್ಲಿಮರಿಗೆ 15 ಮತ್ತು 16ನೇ ವಿಧಿಯಲ್ಲಿ ಮೀಸಲಾತಿ ಸಿಗಲಿಲ್ಲ. ಸಂವಿಧಾನದಲ್ಲಿ 25, 26, 29, 13, 14 ಮತ್ತು 21 ನೇ ವಿಧಿಗಳನ್ನು ಉಲ್ಲೇಖಿಸಿ, ಅದನ್ನು ಸರಿಯಾಗಿ ಪಾಲಿಸಲಾಗುತ್ತಿಲ್ಲ” ಎಂದರು.

“ಹಲವು ರಾಜ್ಯಗಳಲ್ಲಿ ಅದನ್ನು ತಿನ್ನಬಾರದು, ಇದನ್ನು ತಿನ್ನಬಾರದು ಎಂಬ ಕಾನೂನು ಮಾಡಲಾಗಿದೆ. ಹರಿಯಾಣ ಮತ್ತು ರಾಜಸ್ಥಾನದಲ್ಲಿ ಗೋರಕ್ಷಕರಿಗೆ ಪೊಲೀಸ್ ಅಧಿಕಾರವನ್ನು ನೀಡಲಾಯಿತು. ಅವರು ಗುಂಪು ಹತ್ಯೆಯಲ್ಲಿ ಮಾಡುವ ಮೂಲಕ ಅದನ್ನು ದುರುಪಯೋಗಪಡಿಸಿಕೊಂಡರು” ಎಂದು ಅವರು ಹೇಳಿದರು. ಪ್ರಧಾನಿಗೆ ಸಂವಿಧಾನದ

ಉದಾಹರಣೆಯೊಂದನ್ನು ನೀಡಿದ ಅವರು, ಸಬೀರ್ ಮಲಿಕ್ ಎಂಬವರು ದನದ ಮಾಂಸ ತಿಂದ ಕಾರಣಕ್ಕೆ ಹೊಡೆದು ಸಾಯಿಸಿದ್ದರು, ಆದರೆ ನಂತರ ತಿಳಿದದ್ದೇನೆಂದರೆ, ಅಂತಹದ್ದೇನೂ ನಡೆದಿಲ್ಲ ಎಂದು. ಜುನೈದ್ ಮತ್ತು ನಫೀರ್ ಕೂಡ ಸಜೀವ ದಹನವಾಗಿದ್ದರು. ಧಾರ್ಮಿಕ ಮತಾಂತರದ ಕಾನೂನನ್ನು ಪರಿಚಯಿಸಲಾಯಿತು. ನನ್ನ ಧರ್ಮವನ್ನು ಬದಲಾಯಿಸಲು ನಾನು ಸರ್ಕಾರವನ್ನು ಕೇಳಬೇಕೇ? ಎಂದು ಅವರು ಕೇಳಿದರು.

ಒಂದು ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬದುಕಿದ್ದರೆ, ಧರ್ಮ ಬದಲಾಯಿಸಲು ಸರ್ಕಾರದ ಅನುಮತಿ ಪಡೆಯಿರಿ ಎಂದು ಅವರಿಗೂ ಹೇಳುತ್ತಿದ್ದರು ಎಂದು ಓವೈಸಿ ಹೇಳಿದರು. “ನಮ್ಮದು ಸಾಂಸ್ಕೃತಿಕ ರಾಷ್ಟ್ರೀಯತೆ ಎಂದು ಬಿಜೆಪಿ ಹೇಳುತ್ತದೆ, ಆದರೆ ಅವರದ್ದು ಸಾಂಸ್ಕೃತಿಕ ರಾಷ್ಟ್ರೀಯತೆ ಅಲ್ಲ. ಅದರ ರಾಷ್ಟ್ರೀಯತೆ ಹಿಂದುತ್ವದ್ದಾಗಿದ್ದು, ಅದು ಭಾರತದ ರಾಷ್ಟ್ರೀಯತೆಯ ಸಂಪೂರ್ಣ ವಿರೋಧಿಯಾಗಿದೆ. ಸಂವಿಧಾನ ಅಲ್ಪಸಂಖ್ಯಾತರು, ದಲಿತರಿಗೆ ಹಲವು ಹಕ್ಕುಗಳನ್ನು ನೀಡಿದ್ದರೂ ಅದು ಸಿಗುತ್ತಿಲ್ಲ” ಎಂದು ಓವೈಸಿ ಹೇಳಿದರು.

ಇದನ್ನೂ ಓದಿ: ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...