Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

- Advertisement -
- Advertisement -

ಸಿಯೋಲ್: ಮಿಲಿಟರಿ ಕಾನೂನು ಜಾರಿಗೊಳಿಸಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಯೋಲ್‍ರನ್ನು ದೋಷಾರೋಪಣೆಗೆ ಗುರಿಪಡಿಸುವ ನಿರ್ಣಯಕ್ಕೆ ದೇಶದ ಸಂಸತ್ತು ಅಂಗೀಕಾರ ನೀಡಿದೆ.

ಈ ಮೂಲಕ, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದಕ್ಕಾಗಿ ಯೋಲ್‌ ಅವರ ವಿರುದ್ಧ ವಾಗ್ದಂಡನೆ ಗೊತ್ತುವಳಿಯನ್ನು ಮಂಡಿಸಲಾಗಿತ್ತು. ಅಧ್ಯಕ್ಷರಿಗೆ ವಾಗ್ದಂಡನೆ ವಿಧಿಸಬೇಕೆಂದು ಕೋರಿದ್ದ ಈ ನಿರ್ಣಯದ ಬಗ್ಗೆ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶನಿವಾರ ಕಾವೇರಿದ ಚರ್ಚೆ ನಡೆಯಿತು. ನಂತರ ನಿರ್ಣಯವನ್ನು 204–85 ಮತಗಳಿಂದ ಅಂಗೀಕರಿಸಲಾಯಿತು.

ಯೋಲ್ ಅವರು ಪ್ರತಿನಿಧಿಸುವ ಕನ್ಸರ್ವೇಟಿವ್ ಪೀಪಲ್‌ ಪವರ್ ಪಾರ್ಟಿಯ (ಪಿಪಿಪಿ) ಕೆಲ ಸದಸ್ಯರು ಕೂಡ ನಿರ್ಣಯದ ಪರವಾಗಿಯೇ ಮತ ಚಲಾಯಿಸಿದ್ದಾರೆ.  ಈ ಬೆಳವಣಿಗೆ ಬೆನ್ನಲ್ಲೇ, ಯೋಲ್‌ ಅವರು ಅಧಿಕಾರವನ್ನು ಮೊಟಕುಗೊಳಿಸಲಾಯಿತು. ಪ್ರಧಾನಿ ಹಾನ್‌ ಡಕ್‌–ಸೂ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧ್ಯಕ್ಷರ ಪದಚ್ಯುತಿಯನ್ನು ಅನುಮೋದಿಸಬೇಕೇ ಅಥವಾ ಅಧಿಕಾರವನ್ನು ಪುನಃಸ್ಥಾಪಿಸಬೇಕೇ ಎಂಬುದನ್ನು ಅಲ್ಲಿನ ಸಾಂವಿಧಾನಿಕ ಕೋರ್ಟ್‌ 180 ದಿನಗಳಲ್ಲಿ ನಿರ್ಧರಿಸಬೇಕಿದೆ. ಕೋರ್ಟ್‌ನಲ್ಲಿಯೂ ಪದಚ್ಯುತಿ ಅನುಮೋದನೆಯಾದರೆ, ಆರು ತಿಂಗಳೊಳಗೆ ಪುನಃ ಚುನಾವಣೆ ನಡೆಯಬೇಕಿದೆ.

 

 

 

 

 

 

 

 

ಅಧ್ಯಕ್ಷರ ವಿರುದ್ಧದ ದೋಷಾರೋಪಣೆ ನಿರ್ಣಯವನ್ನು ವಿರೋಧ ಪಕ್ಷಗಳು ಮಂಡಿಸಿದ್ದು 300 ಸಂಸದರಲ್ಲಿ 204 ಸಂಸದರು ನಿರ್ಣಯದ ಪರ ಮತ್ತು 85 ಸಂಸದರು ವಿರುದ್ಧ ಮತ ಹಾಕಿದ್ದಾರೆ. ಮೂವರು ಸಂಸದರು ಮತದಾನಕ್ಕೆ ಹಾಜರಾಗಲಿಲ್ಲ. 8 ಮತಗಳನ್ನು ಅಸಿಂಧುಗೊಳಿಸಲಾಗಿದೆ. ವಾಗ್ದಂಡನೆಗೆ ಗುರಿಪಡಿಸಲು ಕನಿಷ್ಠ 200 ಸದಸ್ಯರ ಬೆಂಬಲ ಅಗತ್ಯವಿತ್ತು. ನಿರ್ಣಯ ತಂದಿರುವ ಪ್ರತಿಪಕ್ಷಗಳ ಸದಸ್ಯ ಬಲ 192 ಆಗಿದ್ದು ನಿರ್ಣಯವು ಅಂಗೀಕಾರವಾಗಬೇಕಾದರೆ ಆಡಳಿತಾರೂಢ ಪಿಪಿಪಿಯ ಕನಿಷ್ಠ 8 ಸದಸ್ಯರ ಬೆಂಬಲವು ಅಗತ್ಯವಿತ್ತು. ನಿರ್ಣಯವನ್ನು ಶನಿವಾರ ಮತಕ್ಕೆ ಹಾಕಿದಾಗ ಪಿಪಿಪಿ ಪಕ್ಷದ 12 ಮಂದಿ ನಿರ್ಣಯದ ಪರ ಮತ ಹಾಕಿದರು. ಇದಕ್ಕೂ ಮುನ್ನ ಡಿಸೆಂಬರ್‌ 7ರಂದು ಇಂತದ್ದೇ ನಿರ್ಣಯಕ್ಕೆ ಮೂರನೇ ಎರಡರಷ್ಟು ಬೆಂಬಲ ಸಿಗದ ಕಾರಣ ಯೋಲ್‌ ಅವರು ಪದಚ್ಯುತಿ ಕ್ರಮದಿಂದ ಪಾರಾಗಿದ್ದರು.

ನಿರ್ಣಯ ಅಂಗೀಕಾರಗೊಂಡಿರುವುದರಿಂದ ಯೂನ್ ಅವರ ಅಧ್ಯಕ್ಷೀಯ ಅಧಿಕಾರ ಮತ್ತು ಕರ್ತವ್ಯಗಳು ಅಮಾನತುಗೊಂಡಿವೆ. ಪ್ರಧಾನಿ ಹ್ಯಾನ್ ಡುಕ್-ಸೂ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಯೂನ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಸಾಂವಿಧಾನಿಕ ಕೋರ್ಟ್ ಪರಿಶೀಲಿಸಿ 180 ದಿನಗಳೊಳಗೆ ತೀರ್ಪು ನೀಡಲಿದೆ. ಅದುವರೆಗೆ ಪ್ರಧಾನಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಯೂನ್ ಅವರ ಪದಚ್ಯುತಿಯನ್ನು ಸಾಂವಿಧಾನಿಕ ನ್ಯಾಯಾಲಯ ಎತ್ತಿಹಿಡಿದರೆ, 60 ದಿನಗಳೊಳಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ.

75 ವರ್ಷದ ಹ್ಯಾನ್ ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ನಾಯಕತ್ವದ ಹುದ್ದೆ ನಿರ್ವಹಿಸಿದ್ದು 2007-08ರಲ್ಲಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅಮೆರಿಕಕ್ಕೆ ರಾಯಭಾರಿಯಾಗಿ, ವಿತ್ತಸಚಿವ, ವಾಣಿಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು 2022ರಲ್ಲಿ ಅಧ್ಯಕ್ಷ ಯೂನ್ ಸುಕ್ ಮತ್ತೆ ಪ್ರಧಾನಿ ಹುದ್ದೆಗೆ ನೇಮಕಗೊಳಿಸಿದ್ದರು.

ಇದನ್ನೂ ಓದಿ...ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...