Homeಮುಖಪುಟಸಾಹಿತ್ಯ ಸಮ್ಮೇಳನ ಮಾಂಸಹಾರ ವಿವಾದ| 'ಆಹಾರ ಕ್ರಾಂತಿ' ಅಭಿಯಾನ ಆರಂಭ; ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೈಕ್...

ಸಾಹಿತ್ಯ ಸಮ್ಮೇಳನ ಮಾಂಸಹಾರ ವಿವಾದ| ‘ಆಹಾರ ಕ್ರಾಂತಿ’ ಅಭಿಯಾನ ಆರಂಭ; ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೈಕ್ ರ‍್ಯಾಲಿ

- Advertisement -
- Advertisement -

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನೂ ನಿಷೇಧ ಮಾಡಲಾಗಿದೆ ಎಂಬ ಕರ್ನಾಟಕ ಸಾಹಿತ್ಯ ಪರಿಷತ್ತಿನ ಆದೇಶದ ವಿರುದ್ಧ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. 86 ವರ್ಷಗಳಿಂದ ಸಮ್ಮೇಳನಗಳಲ್ಲಿ ಬಹುಜನರ ಮಾಂಸಾಹಾರವನ್ನು ಅಘೋಷಿತವಾಗಿ ನಿಷೇಧ ಮಾಡಿರುವುದರ ವಿರುದ್ಧ ಮಂಡ್ಯದ ಜನತೆ ‘ಆಹಾರ ಕ್ರಾಂತಿಗೆ ಆಹ್ವಾನ’ ಎಂಬ ಅಭಿಯಾನ ಆರಂಭಿಸಿದ್ದಾರೆ.

ಮಾಂಸಹಾರ ನಿಷೇಧದ ವಿರುದ್ಧ ಆರಂಭಗೊಂಡಿರುವ ಅಭಿಯಾನಕ್ಕೆ ನಾಡಿನ ಪ್ರಗತಿಪರರು, ಬುದ್ಧಿಜೀವಿಗಳು ಮತ್ತು ಸಾಹಿತಿಗಳು ಬೆಂಬಲ ಸೂಚಿದ್ದಾರೆ. ಸಮ್ಮೇಳನದಲ್ಲಿ ಮಾಂಸಾಹಾರವೂ ಇರಬೇಕು ಎಂದು ಜಿಲ್ಲಾಡಳಿತ ಮತ್ತು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಸಮ್ಮೇಳನ‌ಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಮಾಂಸಾಹಾರ ನಿಷೇಧದ ವಿಚಾರ ಇನ್ನಷ್ಡು ಗಂಭೀರ ಸ್ವರೂಪ ಪಡೆದುಕೊಂಡಿದೆ.

ರಕ್ಷಣಾ ವೇದಿಕೆಯಿಂದ ಬೈಕ್‌ ರ್‍ಯಾಲಿ

“ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಗೆ ಬೈಕ್‌ ರ್‍ಯಾಲಿ ಮಾಡಿದ್ದೇವೆ. 86 ವರ್ಷಗಳಿಂದ ಇದುವರೆಗೂ ನಡೆದಿರುವ ಸಮ್ಮೇಳನಗಳಲ್ಲಿ ಸಸ್ಯಾಹಾರವನ್ನು ಮಾತ್ರ ಕೊಟ್ಟು ನಾಡಿನ ಬಹುಸಂಖ್ಯಾತರ ಮಾಂಸಾಹಾರಕ್ಕೆ ಅಘೋಷಿತ ನಿಷೇಧ ಹೇರಲಾಗಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷರಾದ ಎಚ್‌.ಡಿ. ಜಯರಾಮು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ (ಡಿ.24) ಅವರು ಮಂಡ್ಯ ನಗರದ ವಿ.ವಿ.ರಸ್ತೆಯಿಂದ ಜಿಲ್ಲಾಧಿಕಾರಗಳ ಕಚೇರಿವರೆಗೆ ಆಯೋಜಿಸಲಾಗಿದ್ದ ಬೈಕ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಬಾರಿ ನಮ್ಮ ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವನ್ನೂ ಕೊಡಲೇಬೇಕು. ಇಲ್ಲವಾದರೆ ನಮ್ಮ ಸಂಘಟನೆ ಸಮ್ಮೇಳನ ನಡೆಯುವ ಜಾಗದಲ್ಲಿ ಉಗ್ರ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಸಿದರು.

ಸಂವಿಧಾನದ ಆರ್ಟಿಕಲ್ 51A(ಎಚ್‌) ವೈಜ್ಞಾನಿಕ ಮನೋಭಾವ, ಮಾನವತಾವಾದ ಮತ್ತು ಅಸಮಾನತೆಯ ಸುಧಾರಣೆಗಾಗಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡು ಬಗೆಯ ಆಹಾರವನ್ನು ಸೇವಿಸಲು ಅವಕಾಶ ನೀಡಬೇಕು ಎಂದು ಹೇಳಲಾಗಿದೆ. ಜನರ ತೆರಿಗೆ ಹಣದಲ್ಲಿ ನಡೆಯುವ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಸಂವಿಧಾನ ವಿರೋಧಿ ನಡೆಯಾಗುತ್ತದೆ. ಶುದ್ಧ ಸಸ್ಯಾಹಾರಿ ಸಮ್ಮೇಳನ ನಡೆಸುವುದು ಬಹು ಸಂಖ್ಯಾತರಿಗೆ ಮಾಡುವ ಅಪಮಾನ ಆಗಿದೆ ಎಂದರು.

ಪ್ರಗತಿಪರ ಸಂಘಟನೆಗಳ ಜತೆ ಮಾತುಕತೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವೂ ಇರಬೇಕೆಂದು ಬೇಡಿಕೆ ಇಟ್ಟಿರುವ ಪ್ರಗತಿಪರ ಸಂಘಟನೆಗಳ ಜತೆ ಸೋಮವಾರ(ಡಿ.16) ಮಾತುಕತೆ ನಡೆಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಸಮ್ಮೇಳನದ ವೇದಿಕೆ ಸಿದ್ದತೆ ಪರಿಶೀಲನೆ ನಂತರ ಶನಿವಾರ ಮಾತನಾಡಿದ ಅವರು, ಮಾಂಸಾಹಾರ ಬೇಡಿಕೆ ಇಟ್ಟಿರುವ ಸಂಘಟನೆಗಳ ಮುಖಂಡರು ಭೇಟಿಗೆ ಮನವಿ ಮಾಡಿದ್ದು, ಸೋಮವಾರ ಅವರ ಜತೆ ಈ ಬಗ್ಗೆ ಚರ್ಚೆ ನಡೆಸುತ್ತೇನೆ. ಸಮ್ಮೇಳನದಲ್ಲಿ ಸುಮಾರು ಒಂದರಿಂದ ಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ; ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ: ಮಂಡ್ಯ ಡಿಸಿ ಕಚೇರಿ ಎದುರು ಬಾಡೂಟ ಸೇವಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...