HomeUncategorizedದುಡ್ಡಿನ ಮದದಲ್ಲಿರುವ ಶಿವಕುಮಾರ್‘ಗಳೇ’ ದಯವಿಟ್ಟು ಈ ಪುಟ್ಟ ಕತೆ ಓದಿ: ಎಚ್‌.ಎಸ್‌ ದೊರೆಸ್ವಾಮಿ

ದುಡ್ಡಿನ ಮದದಲ್ಲಿರುವ ಶಿವಕುಮಾರ್‘ಗಳೇ’ ದಯವಿಟ್ಟು ಈ ಪುಟ್ಟ ಕತೆ ಓದಿ: ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಮಹಾತ್ಮಾ ಗಾಂಧಿಯವರ ಕಾಂಗ್ರೆಸ್ಸಿನಲ್ಲಿ `ಅಸಂಗ್ರಹ’ ಎಂಬ ವ್ರತವನ್ನು ಕಾಂಗ್ರೆಸ್ಸಿಗರು ಪಾಲಿಸುತ್ತಿದ್ದರು. ಅಸಂಗ್ರಹ ಎಂದರೆ ಕೂಡಿಹಾಕದೆ ಇರುವುದು. ಸಂಗ್ರಹಬುದ್ಧಿ ದುರಾಸೆಯಿಂದ ಕೂಡಿದ ಬುದ್ಧಿ. ಕೂಡಿಹಾಕುವ ಬುದ್ಧಿ ಬೆಳೆದಹಾಗೆ ಇತರರ ಸ್ವತ್ತನ್ನು ಸ್ವಾಹ ಮಾಡುವ ಪ್ರವೃತ್ತಿ ಬೆಳೆಯುತ್ತದೆ. ಸಂಗ್ರಹ ಬುದ್ಧಿ ವೃದ್ಧಿಯಾದಂತೆ ನ್ಯಾಯಯುತವಾಗಿಯೋ ಅಪಮಾರ್ಗದಿಂದಲೋ ಸಂಪಾದನೆ ಮಾಡುವ ಪ್ರವೃತ್ತಿ ಬೆಳೆಯುತ್ತದೆ. ಇದರಿಂದ ಉಳ್ಳವರು, ಕೊಂಡವರ ಮಧ್ಯದ ಕಂದಕ ಬೆಳೆಯುತ್ತಾ ಹೋಗುತ್ತದೆ. ಧನಿಕ ವರ್ಗ ಬಡವರ ಸಮೂಹಗಳ ಮಾನವ ಸಂಬಂಧ ಕೆಡುತ್ತದೆ. ಇದು ಮುಂದೆ ವರ್ಗ ಕಲಹಕ್ಕೂ, ಘರ್ಷಣೆಗೂ ಕಾರಣವಾಗುತ್ತದೆ. ಲೆನಿನ್ನನ ಕಾಲದಲ್ಲಿ ರಷ್ಯಾದಲ್ಲಿ ಈ ಬಗೆಯ ಘರ್ಷಣೆ ಏರ್ಪಟ್ಟು ಶ್ರೀಮಂತ ಭೂಮಾಲೀಕರ ತಲೆಗಳನ್ನು ಕಡಿಯಲಾಯಿತು.

ಸ್ವಾತಂತ್ರ್ಯ ಬಂದಮೇಲೆ ಈ ಶ್ರೀಮಂತರ ವರ್ಗ ರಾಜಕೀಯ ಪಕ್ಷಗಳನ್ನು ಸೇರಿ ಶಾಸಕರು, ಪಾರ್ಲಿಮೆಂಟ್ ಸದಸ್ಯರೂ, ಮಂತ್ರಿಗಳೂ ಆಗಿದ್ದಾರೆ. ಹಿಂದೆ ನಾವು ದೇಶಕ್ಕಾಗಿ ತ್ಯಾಗ ಮಾಡಿದವರನ್ನು, ಸ್ವಾತಂತ್ರ್ಯ ಆಂದೋಲನದಲ್ಲಿ ಸೆರೆಮನೆಗೆ ಹೋಗಿದ್ದವರನ್ನು ಕಾಂಗ್ರೆಸ್ಸಿನಿಂದ ಚುನಾವಣೆಗೆ ನಿಲ್ಲಿಸುತ್ತಿದ್ದೆವು. ಇವರ ವಿರುದ್ಧವಾಗಿ ನಿಂತ ಪಟ್ಟಭದ್ರರು, ಸಾಹುಕಾರರು ಠೇವಣಿ ಕಳೆದುಕೊಳ್ಳುತ್ತಿದ್ದರು. ಈಗ ಕಾಲ ಎಷ್ಟು ಕೆಟ್ಟಿದೆಯೆಂದರೆ, ಈ ಪಟ್ಟಭದ್ರರ ಎದುರಾಳಿಯಾಗಿ ಸಮಾಜಸೇವಕ ನಿಂತರೆ ಅವನು ಠೇವಣಿ ಕಳೆದುಕೊಳ್ಳುತ್ತಾನೆ.

ಈ ಪಟ್ಟಭದ್ರರ ಪಟ್ಟಿಯಲ್ಲಿ ಕತ್ತಿ ಸೋದರರು, ಡಿ.ಕೆ. ಸೋದರರು, ದೇವೇಗೌಡರ ಕುಟುಂಬ, ಕುಪೇಂದ್ರ ರೆಡ್ಡಿ, ಎಂಟಿಬಿ ನಾಗರಾಜ್, ಈಶ್ವರಪ್ಪ, ಯಡಿಯೂರಪ್ಪ ಮತ್ತವರ ಮಕ್ಕಳು, ಕರಂದ್ಲಾಜೆ, ಹುಕ್ಕೇರಿ ಕುಟುಂಬ, ಜಾರಕಿಹೊಳಿ ಸಹೋದರರು ಮುಂತಾದ ನೂರಕ್ಕೂ ಹೆಚ್ಚು ಜನ ಇದ್ದಾರೆ.

ಗ್ರೀಕ್ ಜನಪದ ಕಥೆಗಳಲ್ಲಿ ಮೈದಾಸ್ ಎಂಬುವವನಿದ್ದನಂತೆ. ಅವನು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿತ್ತಂತೆ. ಅವನು ಚಿನ್ನದ ಆಸೆಯಿಂದ ತನ್ನ ಮಗಳನ್ನು ಮುಟ್ಟಿದನಂತೆ. ಅವಳೂ ಚಿನ್ನವಾದಳು. ಕೋಟ್ಯಂತರ ರೂ.ಗಳನ್ನು ಸಂಗ್ರಹಿಸಿದರೂ, ನೂರಾರು ಎಕರೆ ಜಮೀನು ಕೊಂಡರೂ, ನೂರಾರು ಸೈಟ್‌ಗಳನ್ನು ಮಾಡಿದರೂ ಇನ್ನೂ ದೋಚಬೇಕು, ಬಾಚಬೇಕು ಎಂಬ ದುರಾಸೆ ಇದೆಯಲ್ಲಾ, ಅಬ್ಬಾ! ಇಷ್ಟೆಲ್ಲ ಐಶ್ವರ್ಯವನ್ನು ಇವರು ಹೇಗೆ ಅನುಭವಿಸುತ್ತಾರೆ?

ಚಿಕ್ಕಮಕ್ಕಳನ್ನು ಸಮುದ್ರ ತಡಿಯಲ್ಲಿ ಬಿಟ್ಟುನೋಡಿ, ಅವರು ಕಪ್ಪೆಚಿಪ್ಪು, ಕವಡೆ ಆರಿಸಲು ಶುರು ಮಾಡುತ್ತಾರೆ. ಎಷ್ಟು ಸಂಗ್ರಹಿಸಿದರೂ ಆ ಮಕ್ಕಳಿಗೆ ತೃಪ್ತಿ ಅನ್ನುವುದೇ ಇರಲ್ಲ. ಕಂಡದ್ದನ್ನೆಲ್ಲ ಎತ್ತಿಟ್ಟುಕೊಳ್ಳುತ್ತಾರೆ. ಇಲ್ಲಿ ಮುಗ್ಧ ಮನಸ್ಸಿನ ಮಕ್ಕಳ ಸಂಗ್ರಹದ ಹಿಂದೆ ಅಷ್ಟೇ ಮುಗ್ಧವಾದ ಖುಷಿ ಇರುತ್ತದೆ. ಅದನ್ನು ಬಿಟ್ಟರೆ, ಯಾವ ದುರಾಸೆಯೂ ಇರುವುದಿಲ್ಲ. ಈ ಪಟ್ಟಭದ್ರರು ಆ ಮಕ್ಕಳಂತೆಯೇ ಮುಗಿಬಿದ್ದು ಆಸ್ತಿ ಮಾಡಲು ಹಪಾಹಪಿಸುತ್ತಾರೆ, ಆದರೆ ಅಂತಹ ಹಪಾಹಪಿತನದ ಹಿಂದೆ ಆ ಮಕ್ಕಳಿಗಿದ್ದಂತೆ ಮುಗ್ಧ ಖುಷಿ ಇರುವುದಿಲ್ಲ, ಬದಲಿಗೆ ಕೆಟ್ಟ ದುರಾಸೆ, ದುಷ್ಟ ಸಂಚುಗಳು ಇರುತ್ತವೆ. ಸಂಪಾದಿಸಿರುವ ಎಲ್ಲಾ ಐಶ್ವರ್ಯಕ್ಕೂ ದಾಖಲೆ ಇದೆ ಎಂದು ಸಮರ್ಥಿಸಿಕೊಳ್ಳುತ್ತಾರೆ.

ಇಷ್ಟೊಂದು ಕಲೆಹಾಕುವ ಅಗತ್ಯ ನಿಮಗಿದೆಯೇ? ಎಂದು ಕೇಳಿದರೆ, `ದುಡ್ಡು ಮಾಡಲು ಯೋಗ್ಯತೆ ಇಲ್ಲದಿರುವ ನೀವು ಕೇಳುವ ಮಾತು ಇದು. ನಿಮ್ಮನ್ನು ನೋಡಿದರೆ ಅಯ್ಯೋ ಅನ್ನಿಸುತ್ತೆ’ ಎನ್ನುತ್ತಾರೆ.

ಒಂದು ತಲೆಮಾರಿಗೆ ಬೇಕಾದಷ್ಟು, ಎರಡು ತಲೆಮಾರು ಕೂತು ತಿಂದರೂ ಸವೆಯದಷ್ಟು, ಅದಕ್ಕಿಂತಲೂ ಹೆಚ್ಚು ಸಂಪಾದಿಸಿ ಕೊನೆಗೆ ಲಾಯರಿಗೆ, ಕೋರ್ಟಿಗೆ, ಕಚೇರಿಗೆ, ಪೊಲೀಸರಿಗೆ, ಅಧಿಕಾರಿಗಳಿಗೆ ಕೊಟ್ಟಿರಿ ಎಂದಿಟ್ಟುಕೊಳ್ಳಿ ಆಗ ನಿಮಗೆ ನೆಮ್ಮದಿ ಇರುತ್ತಾ? ಸೆರೆಮನೆ ವಾಸ, ಪೊಲೀಸ್ ಕಸ್ಟಡಿ, ವಿಚಾರಣೆ, ಮುಟ್ಟುಗೋಲು, ಸಜಾ ಇವುಗಳ ಭಯ ಸದಾ ಕಾಡುತ್ತಲೇ ಇರುತ್ತದೆಯಲ್ಲವೇ?. ಕೊಳ್ಳೆಹೊಡೆದ ಆಸ್ತಿ ಉಳಿಸಿಕೊಳ್ಳುವ ಆಲೋಚನೆಯಲ್ಲಿ ರಕ್ತದೊತ್ತಡ, ಹೃದಯಬೇನೆಯಂತಹ ತೀವ್ರತರನಾದ ಕಾಯಿಲೆಗಳಿಗೆ ಬಲಿಯಾಗುತ್ತಾರೆ.

ಲಿಯೋ ಟಾಲ್‌ಸ್ಟಾಯ್ `ಒಬ್ಬ ಮನುಷ್ಯನಿಗೆ ಎಷ್ಟು ಭೂಮಿ ಬೇಕು?’ ಎಂಬ ಒಂದು ಕತೆ ಬರೆದಿದ್ದಾನೆ. ಭೂಮಿ ದಾಹವುಳ್ಳ ಒಬ್ಬ ಮನುಷ್ಯ ಇದ್ದ. ಅವನಿಗೆ ಎಷ್ಟು ಭೂಮಿಕೊಂಡರೂ ತೃಪ್ತಿ ಇಲ್ಲ. ಇವನನ್ನು ಆ ಊರಿನ ಬೆಟ್ಟದ ಮೇಲಿರುವ ಸೈತಾನ್ ಬರಮಾಡಿಕೊಳ್ಳುತ್ತಾನೆ. `50 ಸಾವಿರ ಪೌಂಡ್ ಹಣವಿರುವ ಚೀಲ ಇಲ್ಲಿಡು, ಬೆಟ್ಟದ ಪೂರ್ವಭಾಗದಲ್ಲಿರುವ ಭೂಮಿಯೆಲ್ಲಾ ನನ್ನದೇ. ನೀನು ಬೆಳಿಗ್ಗೆ ಹೊರಟು ನಿನಗೆ ಬೇಕಾದ ಜಮೀನಿಗೆ ಇಂದು ಬಾಂದ್‌ಕಲ್ಲನ್ನು ಇಟ್ಟುಕೊಂಡು ಹೋಗು, ಸಂಜೆವೇಳೆಗೆ ನೀನೆಷ್ಟು ಜಮೀನಿಗೆ ಬಾಂದ್ ಕಲ್ಲು ಇಡುವೆಯೋ ಅದೆಲ್ಲಾ ನಿನ್ನದು. ಆದರೆ ಒಂದು ಕರಾರು. ನೀನು ಸೂರ್ಯಾಸ್ತಮಯದ ಹೊತ್ತಿಗೆ ಬೆಟ್ಟ ಹತ್ತಿ ನಾನು ಕುಳಿತಿರುವಲ್ಲಿಗೆ ಬರಬೇಕು. ನೀನು ಸೂರ್ಯಾಸ್ತದ ಒಳಗೆ ನಾನು ಕುಳಿತಿರುವಲ್ಲಿಗೆ ಬರುವೆಯಾದರೆ ನೀನು ಗುರುತಿಸಿರುವ ಎಲ್ಲಾ ಜಮೀನು ನಿನ್ನದು, ಆದರೆ ನೀನು ನಿಗದಿತ ಸಮಯದೊಳಗೆ ಈ ಸ್ಥಳ ತಲುಪಲು ವಿಫಲವಾದರೆ ಈ 50 ಸಾವಿರ ಪೌಂಡ್ ನನ್ನದಾಗುತ್ತದೆ, ನಿನಗೆ ಒಂದು ಕವಡೆ ಜಮೀನೂ ದಕ್ಕುವುದಿಲ್ಲ.

ಈ ಆಸೆಬುರುಕ ಸರಸರ ಬೆಟ್ಟ ಇಳಿದು ಪೂರ್ವ ದಿಕ್ಕಿನ ಜಮೀನುಗಳ ಅನ್ವೇಷಣೆಗಾಗಿ ಹೊರಟ. ಎದುರುಗಡೆ ವಿಸ್ತಾರವಾದ ಉತ್ಕೃಷ್ಟ ಜಮೀನು ಹರಡಿಕೊಂಡಿದೆ. ಅದರ ಪಕ್ಕದಲ್ಲಿ ನದಿ ಹರಿದುಹೋಗುತ್ತದೆ. ಜಮೀನನ್ನು ಸುತ್ತುಹಾಕಿ ಕಲ್ಲು ನೆಟ್ಟು ಮುಂದಕ್ಕೆ ಹೋದರೆ, ಒಂದು ದೊಡ್ಡ ಕೆರೆ, ಅದರ ಪಕ್ಕದಲ್ಲಿ ಹರಡಿಕೊಂಡಿದ್ದ ಜಮೀನು. ಅದಕ್ಕೂ ಪ್ರದಕ್ಷಿಣೆ ಹಾಕಿ ಕಲ್ಲು ನೆಟ್ಟಿದ್ದಾಯ್ತು. ಅಷ್ಟು ಹೊತ್ತಿಗೆ ಮಧ್ಯಾಹ್ನವಾಗಿತ್ತು. ಮುಂದೆ ಹೊರಟ. ಒಂದು ವಿಶಾಲವಾದ ಪ್ರದೇಶ, ಬಂಜರು ಭೂಮಿ. ಅದರ ಆಚೆಗೆ ಕಾಣಿಸಿತು ಹಚ್ಚಹಸುರಿನ ವಿಸ್ತಾರವಾದ ಭೂಮಿ. ಅಲ್ಲಿಗೆ ದಾಪುಗಾಲು ಹಾಕುತ್ತಾ ಹೋದ. ಅದನ್ನೂ ಸುತ್ತಿ ಒಂದು ಕಲ್ಲುನೆಟ್ಟ. ಸಂಜೆ ನಾಲ್ಕೂವರೆ ಗಂಟೆ. ಬಹುದೂರ ನಡೆದು ಬಂದುಬಿಟ್ಟಿದ್ದಾನೆ. ಸೂರ್ಯ ಮುಳುಗುವುದರ ಒಳಗೆ ಬೆಟ್ಟದ ತುದಿ ಸೇರಬೇಕೆಂಬ ತವಕ. ಸುಸ್ತಾಗಿಬಿಟ್ಟಿದ್ದಾನೆ. ಏದುಸಿರು ಬಿಡುತ್ತಾ ಪ್ರಯಾಸದಿಂದ ಬೆಟ್ಟ ಹತ್ತಿದ. ಬೆಟ್ಟದ ತುದಿ ಮುಟ್ಟಬೇಕು, ಅಷ್ಟರಲ್ಲಿ ಸೂರ್ಯ ದಿಗಂತಕ್ಕೆ ಸರಿದಿದ್ದ. ಗಾಬರಿಯಾಯಿತು. ಜೀವ ಹಿಡಿದುಕೊಂಡು ಶಿಖರದತ್ತ ಧಾವಿಸಿದ. ಬೆಟ್ಟದ ಶಿಖರಕ್ಕೆ ಬಂದವನೇ ತಾನಿಟ್ಟು ಹೋಗಿದ್ದ ಹಣದ ಗಂಟನ್ನು ಪಟ್ಟಾಗಿ ಹಿಡಿದುಕೊಂಡ. ಆದರೆ ಪ್ರಾಣಪಕ್ಷಿ ಹಾರಿಹೋಯಿತು! ಇಷ್ಟೊಂದು ಪ್ರಯಾಸಪಟ್ಟು ನೂರಾರು ಎಕರೆ ಜಮೀನಿನ ಒಡೆಯನಾಗುವ ಅವನ ಆಸೆ ಕಮರಿಹೋಯಿತು.

ಅವನನ್ನು ಮೂರಡಿ, ಆರಡಿ ಅಳತೆಯ ಹಳ್ಳ ತೆಗೆದು ಹೂಳಲಾಯಿತು!

ತಾತ್ಪರ್ಯ ಇಷ್ಟೇ, ಅಪಮಾರ್ಗದಲ್ಲೇ ಆಗಲಿ, ಯೋಗ್ಯ ಮಾರ್ಗದಲ್ಲೇ ಆಗಲಿ ಮನುಷ್ಯ ಎಷ್ಟೇ ಎಕರೆ ಜಮೀನು ಸಂಪಾದಿಸಿಟ್ಟರೂ ಅವನಿಗೆ ದಕ್ಕುವುದು ಮೂರಡಿ, ಆರಡಿ ಜಾಗ ಮಾತ್ರ!

ಸಂಗ್ರಹ ಬುದ್ಧಿಯನ್ನು ಬೆಳೆಸಿಕೊಂಡು, ದುರಾಸೆಯ ಪರಾಕಾಷ್ಠೆ ಏರಿರುವ ಡಿ.ಕೆ.ಶಿವಕುಮಾರ್ ಥರದವರಿಗೆ ಈ ಮಾತು ಅರ್ಥವಾದೀತೆಂದು ಭಾವಿಸಿದ್ದೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಥೆ ಮಾರ್ಮಿಕವಾಗಿದೆ. ಇಷ್ಟಕ್ಕೆಲ್ಲಾ ಭ್ರಷ್ಟ ಮತದಾರರು ಕಾರಣ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...