Homeಮುಖಪುಟತಬಲಾ ಮಾಂತ್ರಿಕ ಝಾಕಿರ್ ಹುಸೈನ್ ನಿಧನ : ಖಚಿತಪಡಿಸಿದ ಕುಟುಂಬ

ತಬಲಾ ಮಾಂತ್ರಿಕ ಝಾಕಿರ್ ಹುಸೈನ್ ನಿಧನ : ಖಚಿತಪಡಿಸಿದ ಕುಟುಂಬ

- Advertisement -
- Advertisement -

ತಬಲಾ ಮಾಂತ್ರಿಕ ಝಾಕಿರ್ ಹುಸೈನ್ (73) ಅವರು ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಯುಎಸ್‌ನ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ.

ಝಾಕಿರ್ ಹುಸೈನ್ ಸಾವಿನ ಕುರಿತು ನಿನ್ನೆಯೇ (ಡಿ.15) ಸುದ್ದಿ ಹೊರಬಿದ್ದಿತ್ತು. ಆದರೆ, ಅದನ್ನು ಅಲ್ಲಗಳೆದಿದ್ದ ಅವರ ಕುಟುಂಬ. ಝಾಕಿರ್ ಇನ್ನೂ ತೀವ್ರ ನಿಗಾ ಘಟಕ (ಐಸಿಯು)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿತ್ತು. ಆದರೆ, ಇಂದು (ಡಿ.16) ಅವರು ಮೃತಪಟ್ಟಿರುವುದನ್ನು ಕುಟುಂಬಸ್ಥರು ಖಚಿತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಗ್ರ್ಯಾಮಿ ಪ್ರಶಸ್ತಿ ಪುರಸ್ಕತರಾದ ಝಾಕಿರ್ ಹುಸೈನ್ ಅವರು ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಝಾಕಿರ್ ಹುಸೈನ್ ಅವರು ಪತ್ನಿ ಅಂಟೋನಿಯಾ ಮಿನ್ನೆಕೋಲಾ, ಪುತ್ರಿಯರಾದ ಅನಿಸಾ ಖುರೇಷಿ ಮತ್ತು ಆಕೆಯ ಕುಟುಂಬ, ಇಸಾಬೆಲ್ಲಾ ಖುರೇಷಿ ಮತ್ತು ಆಕೆಯ ಕುಟುಂಬ, ಸಹೋದರರಾದ ತೌಫಿಕ್ ಮತ್ತು ಫಝಲ್ ಖುರೇಷಿ ಹಾಗೂ ಸಹೋದರಿ ಖುರ್ಷಿದ್ ಔಲಿಯಾ ಅವರನ್ನು ಅಗಲಿದ್ದಾರೆ.

ಮುಂಬೈನ ಮಾಹಿಮ್‌ನಲ್ಲಿ ಪ್ರಸಿದ್ಧ ತಬಲಾ ಮಾಸ್ಟರ್ ಉಸ್ತಾದ್ ಅಲ್ಲಾರಾಖಾ ಅವರ ಮಗನಾಗಿ ಮಾರ್ಚ್ 9, 1951 ರಂದು ಝಾಕಿರ್ ಹುಸೈನ್ ಜನಿಸಿದರು. ಅವರು ಖ್ಯಾತ ಸಂಗೀತ ಸಂಯೋಜಕ ರವಿಶಂಕರ್ ಅವರ ದೀರ್ಘಕಾಲದ ಜೊತೆಗಾರರಾಗಿದ್ದರು. ಹುಸೈನ್ ಅವರಿಗೆ ಚಿಕ್ಕ ವಯಸ್ಸಿನಲ್ಲೇ ತಬಲಾ ನುಡಿಸುವ ಒಲವಿತ್ತು.

ತನ್ನ 3ನೇ ವಯಸ್ಸಿನಲ್ಲಿ ತಂದೆಯಿಂದ ಮೃದಂಗ (ಶಾಸ್ತ್ರೀಯ ತಾಳವಾದ್ಯ) ನುಡಿಸಲು ಕಲಿತ ಝಾಕಿರ್ ಹುಸೈನ್, 12ನೇ ವಯಸ್ಸಿನಲ್ಲಿ ಸಂಗೀತ ಕಚೇರಿಗಳಲ್ಲಿ ಪ್ರದರ್ಶನ ನೀಡಲು ಪ್ರಾರಂಭಿಸಿದರು.

ಝಾಕಿರ್ ಹುಸೈನ್ ಅವರು ರವಿಶಂಕರ್, ಅಲಿ ಅಕ್ಬರ್ ಖಾನ್ ಮತ್ತು ಶಿವಕುಮಾರ್ ಶರ್ಮಾ ಸೇರಿದಂತೆ ಭಾರತದ ಎಲ್ಲಾ ಸಂಗೀತ ದಂತಕಥೆ ಕಲಾವಿದರೊಂದಿಗೆ ಪ್ರದರ್ಶನ ನೀಡಿದ್ದಾರೆ.

ದಿ ಬೀಟಲ್ಸ್, ಯೋ-ಯೋ ಮಾ, ಚಾರ್ಲ್ಸ್ ಲಿಯೋಡ್, ಬೆಲಾ ಫ್ಲೆಕ್, ಎಡ್ಗರ್ ಮೆಯೆರ್, ಮಿಕ್ಕಿ ಹಾರ್ಟ್, ಜಾರ್ಜ್ ಹ್ಯಾರಿಸನ್ ಮತ್ತು ಜಾನ್ ಮೆಕ್‌ಲಾಫ್ಲಿನ್‌ರಂತಹ ಕಲಾವಿದರೊಂದಿಗೆ ಪಾಶ್ಚಿಮಾತ್ಯ ಸಂಗೀತದಲ್ಲಿ ಅವರ ಅದ್ಭುತ ಸಾಧನೆಯು ಭಾರತೀಯ ಶಾಸ್ತ್ರೀಯ ಸಂಗೀತವನ್ನು ಜಾಗತಿಕ ಭೂಪಟದಲ್ಲಿ ಇರಿಸಿತು ಮತ್ತು ಝಾಕಿರ್ ಅವರಿಗೆ ಜಾಗತಿಕ ಸಾಂಸ್ಕೃತಿಕ ರಾಯಭಾರಿಯ ಸ್ಥಾನವನ್ನು ತಂದುಕೊಟ್ಟಿತು.

ಸಂಗೀತಕ್ಕೆ ಝಾಕಿರ್ ಹುಸೈನ್ ಅವರ ಕೊಡುಗೆಯನ್ನು ‘ಅನನ್ಯ ಪರಿವರ್ತಿತ’ವೆಂದು(uniquely transformative) ಎಂದು ಪರಿಗಣಿಸಲಾಗಿದೆ. ಅವರ ‘ಲಯದ ಅನನ್ಯ ಪಾಂಡಿತ್ಯ’ವು ಗಡಿಗಳನ್ನು ಮುಕ್ತವಾಗಿ ದಾಟಿ ಸಂಗೀತದ ವಿವಿಧ ಪ್ರಕಾರಗಳ ನಡುವೆ ಅಧಿಕೃತ ಸಂಪರ್ಕ ಸಾಧಿಸಲು ಅವಕಾಶ ಮಾಡಿಕೊಟ್ಟಿತು.

ಝಾಕಿರ್ ಹುಸೈನ್ ಜಾರ್ಜ್ ಹ್ಯಾರಿಸನ್, ಜೋ ಹೆಂಡರ್ಸನ್, ವ್ಯಾನ್ ಮಾರಿಸನ್, ಏರ್ಟೊ ಮೊರೈರಾ, ಫರೋಹ್ ಸ್ಯಾಂಡರ್ಸ್, ಬಿಲ್ಲಿ ಕೋಬ್ಯಾಮ್, ಅಲೋಂಜೊ ಕಿಂಗ್, ಮಾರ್ಕ್ ಮೋರಿಸ್, ರೆನ್ನಿ ಹ್ಯಾರಿಸ್ ಮತ್ತು ಕೊಡೋ ಡ್ರಮ್ಮರ್‌ಗಳೊಂದಿಗೆ ಕೆಲಸ ಮಾಡಿದ್ದಾರೆ.

ಝಾಕಿರ್ ಹುಸೈನ್ ಪೌರಾಣಿಕ ಗಿಟಾರ್ ವಾದಕ ಜಾನ್ ಮೆಕ್ಲಾಫ್ಲಿನ್, ಪಿಟೀಲು ವಾದಕ ಎಲ್. ಶಂಕರ್ ಮತ್ತು ತಾಳವಾದ್ಯ ವಾದಕ ಟಿ.ಹೆಚ್ ಅವರ ಸಹಯೋಗದೊಂದಿಗೆ 1970ರ ದಶಕದಲ್ಲಿ ‘ವಿಕ್ಕು’ ವಿನಾಯಕರಾಮ್ ಜತೆಗೂಡಿ ಶಕ್ತಿ ಫ್ಯೂಶನ್ ಗ್ರೂಪ್ ರಚಿಸಿದರು. ಇದು ಭಾರತದ ಶಾಸ್ತ್ರೀಯ ಸಂಗೀತವನ್ನು ಜಾಝ್‌ನೊಂದಿಗೆ ಬೆಸೆಯಿತು. ಸಮಕಾಲೀನ ಸಂಗೀತ ಕ್ಷೇತ್ರದಲ್ಲಿ ಅಳಿಸಲಾಗದ ಹೊಸ ಮಾದರಿಯ ಸಂಗೀತ ಪ್ರಕಾರವನ್ನು ಸೃಷ್ಟಿಸಿ ತನ್ನದೇ ಛಾಪು ಮೂಡಿಸಿತು.

ಜಾರ್ಜ್ ಹ್ಯಾರಿಸನ್, ರವಿ ಶಂಕರ್ ಮತ್ತು ವ್ಯಾನ್ ಮಾರಿಸನ್ ಅವರಂತಹ ಹೆಸರಾಂತ ಕಲಾವಿದರೊಂದಿಗೆ ಝಾಕಿರ್ ಹುಸೈನ್ ಕೆಲಸ ಮಾಡಿದ್ದರು.  ಗ್ರೇಟ್‌ಫುಲ್ ಡೆಡ್ ಅಂಡ್ ಅರ್ಥ್, ವಿಂಡ್ ಅಂಡ್ ಫೈರ್‌ನ ಆಲ್ಬಂಗಳಲ್ಲಿ ಸಹ ಪ್ರದರ್ಶನ ನೀಡಿದ್ದರು. 1991ರಲ್ಲಿ ಮಿಕ್ಕಿ ಹಾರ್ಟ್ ಅವರೊಂದಿಗೆ ರಚಿಸಲಾದ ಅವರ ಆಲ್ಬಂ ಪ್ಲಾನೆಟ್ ಡ್ರಮ್, ಅತ್ಯುತ್ತಮ ವಿಶ್ವ ಸಂಗೀತ ಆಲ್ಬಮ್‌ಗಾಗಿ ಮೊದಲ ಬಾರಿಗೆ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಝಾಕಿರ್ ಹುಸೈನ್ ಅವರ ಸಂಗೀತ ಲೋಕದ ಸಾಧನೆಯನ್ನು ಗುರುತಿಸಿ ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಝಾಕಿರ್ ಅವರು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು ಸಂಗೀತ ನಾಟಕ ಅಕಾಡೆಮಿ ಫೆಲೋಶಿಪ್‌ನ ಜೀವಮಾನದ ಗೌರವ ಪ್ರಶಸ್ತಿಯನ್ನೂ ಪಡೆದಿದ್ದಾರೆ.

2024 ರಲ್ಲಿ ನಡೆದ 66 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಸೇರಿದಂತೆ ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಝಾಕಿರ್ ಹುಸೈನ್ ಗೆದ್ದಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಸಂಗೀತಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದರು.

ಇದನ್ನೂ ಓದಿ : ಉತ್ತರ ಪ್ರದೇಶ: ಭೂ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ನಕಲಿ ನೋಟಿಸ್ ಕಳುಹಿಸಿದ ಅಪರಿಚಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...