Homeಮುಖಪುಟತಬಲಾ ಮಾಂತ್ರಿಕ ಝಾಕಿರ್ ಹುಸೈನ್ ನಿಧನ : ಖಚಿತಪಡಿಸಿದ ಕುಟುಂಬ

ತಬಲಾ ಮಾಂತ್ರಿಕ ಝಾಕಿರ್ ಹುಸೈನ್ ನಿಧನ : ಖಚಿತಪಡಿಸಿದ ಕುಟುಂಬ

- Advertisement -
- Advertisement -

ತಬಲಾ ಮಾಂತ್ರಿಕ ಝಾಕಿರ್ ಹುಸೈನ್ (73) ಅವರು ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಯುಎಸ್‌ನ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಿಧನರಾಗಿದ್ದಾರೆ.

ಝಾಕಿರ್ ಹುಸೈನ್ ಸಾವಿನ ಕುರಿತು ನಿನ್ನೆಯೇ (ಡಿ.15) ಸುದ್ದಿ ಹೊರಬಿದ್ದಿತ್ತು. ಆದರೆ, ಅದನ್ನು ಅಲ್ಲಗಳೆದಿದ್ದ ಅವರ ಕುಟುಂಬ. ಝಾಕಿರ್ ಇನ್ನೂ ತೀವ್ರ ನಿಗಾ ಘಟಕ (ಐಸಿಯು)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿತ್ತು. ಆದರೆ, ಇಂದು (ಡಿ.16) ಅವರು ಮೃತಪಟ್ಟಿರುವುದನ್ನು ಕುಟುಂಬಸ್ಥರು ಖಚಿತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಗ್ರ್ಯಾಮಿ ಪ್ರಶಸ್ತಿ ಪುರಸ್ಕತರಾದ ಝಾಕಿರ್ ಹುಸೈನ್ ಅವರು ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಝಾಕಿರ್ ಹುಸೈನ್ ಅವರು ಪತ್ನಿ ಅಂಟೋನಿಯಾ ಮಿನ್ನೆಕೋಲಾ, ಪುತ್ರಿಯರಾದ ಅನಿಸಾ ಖುರೇಷಿ ಮತ್ತು ಆಕೆಯ ಕುಟುಂಬ, ಇಸಾಬೆಲ್ಲಾ ಖುರೇಷಿ ಮತ್ತು ಆಕೆಯ ಕುಟುಂಬ, ಸಹೋದರರಾದ ತೌಫಿಕ್ ಮತ್ತು ಫಝಲ್ ಖುರೇಷಿ ಹಾಗೂ ಸಹೋದರಿ ಖುರ್ಷಿದ್ ಔಲಿಯಾ ಅವರನ್ನು ಅಗಲಿದ್ದಾರೆ.

ಮುಂಬೈನ ಮಾಹಿಮ್‌ನಲ್ಲಿ ಪ್ರಸಿದ್ಧ ತಬಲಾ ಮಾಸ್ಟರ್ ಉಸ್ತಾದ್ ಅಲ್ಲಾರಾಖಾ ಅವರ ಮಗನಾಗಿ ಮಾರ್ಚ್ 9, 1951 ರಂದು ಝಾಕಿರ್ ಹುಸೈನ್ ಜನಿಸಿದರು. ಅವರು ಖ್ಯಾತ ಸಂಗೀತ ಸಂಯೋಜಕ ರವಿಶಂಕರ್ ಅವರ ದೀರ್ಘಕಾಲದ ಜೊತೆಗಾರರಾಗಿದ್ದರು. ಹುಸೈನ್ ಅವರಿಗೆ ಚಿಕ್ಕ ವಯಸ್ಸಿನಲ್ಲೇ ತಬಲಾ ನುಡಿಸುವ ಒಲವಿತ್ತು.

ತನ್ನ 3ನೇ ವಯಸ್ಸಿನಲ್ಲಿ ತಂದೆಯಿಂದ ಮೃದಂಗ (ಶಾಸ್ತ್ರೀಯ ತಾಳವಾದ್ಯ) ನುಡಿಸಲು ಕಲಿತ ಝಾಕಿರ್ ಹುಸೈನ್, 12ನೇ ವಯಸ್ಸಿನಲ್ಲಿ ಸಂಗೀತ ಕಚೇರಿಗಳಲ್ಲಿ ಪ್ರದರ್ಶನ ನೀಡಲು ಪ್ರಾರಂಭಿಸಿದರು.

ಝಾಕಿರ್ ಹುಸೈನ್ ಅವರು ರವಿಶಂಕರ್, ಅಲಿ ಅಕ್ಬರ್ ಖಾನ್ ಮತ್ತು ಶಿವಕುಮಾರ್ ಶರ್ಮಾ ಸೇರಿದಂತೆ ಭಾರತದ ಎಲ್ಲಾ ಸಂಗೀತ ದಂತಕಥೆ ಕಲಾವಿದರೊಂದಿಗೆ ಪ್ರದರ್ಶನ ನೀಡಿದ್ದಾರೆ.

ದಿ ಬೀಟಲ್ಸ್, ಯೋ-ಯೋ ಮಾ, ಚಾರ್ಲ್ಸ್ ಲಿಯೋಡ್, ಬೆಲಾ ಫ್ಲೆಕ್, ಎಡ್ಗರ್ ಮೆಯೆರ್, ಮಿಕ್ಕಿ ಹಾರ್ಟ್, ಜಾರ್ಜ್ ಹ್ಯಾರಿಸನ್ ಮತ್ತು ಜಾನ್ ಮೆಕ್‌ಲಾಫ್ಲಿನ್‌ರಂತಹ ಕಲಾವಿದರೊಂದಿಗೆ ಪಾಶ್ಚಿಮಾತ್ಯ ಸಂಗೀತದಲ್ಲಿ ಅವರ ಅದ್ಭುತ ಸಾಧನೆಯು ಭಾರತೀಯ ಶಾಸ್ತ್ರೀಯ ಸಂಗೀತವನ್ನು ಜಾಗತಿಕ ಭೂಪಟದಲ್ಲಿ ಇರಿಸಿತು ಮತ್ತು ಝಾಕಿರ್ ಅವರಿಗೆ ಜಾಗತಿಕ ಸಾಂಸ್ಕೃತಿಕ ರಾಯಭಾರಿಯ ಸ್ಥಾನವನ್ನು ತಂದುಕೊಟ್ಟಿತು.

ಸಂಗೀತಕ್ಕೆ ಝಾಕಿರ್ ಹುಸೈನ್ ಅವರ ಕೊಡುಗೆಯನ್ನು ‘ಅನನ್ಯ ಪರಿವರ್ತಿತ’ವೆಂದು(uniquely transformative) ಎಂದು ಪರಿಗಣಿಸಲಾಗಿದೆ. ಅವರ ‘ಲಯದ ಅನನ್ಯ ಪಾಂಡಿತ್ಯ’ವು ಗಡಿಗಳನ್ನು ಮುಕ್ತವಾಗಿ ದಾಟಿ ಸಂಗೀತದ ವಿವಿಧ ಪ್ರಕಾರಗಳ ನಡುವೆ ಅಧಿಕೃತ ಸಂಪರ್ಕ ಸಾಧಿಸಲು ಅವಕಾಶ ಮಾಡಿಕೊಟ್ಟಿತು.

ಝಾಕಿರ್ ಹುಸೈನ್ ಜಾರ್ಜ್ ಹ್ಯಾರಿಸನ್, ಜೋ ಹೆಂಡರ್ಸನ್, ವ್ಯಾನ್ ಮಾರಿಸನ್, ಏರ್ಟೊ ಮೊರೈರಾ, ಫರೋಹ್ ಸ್ಯಾಂಡರ್ಸ್, ಬಿಲ್ಲಿ ಕೋಬ್ಯಾಮ್, ಅಲೋಂಜೊ ಕಿಂಗ್, ಮಾರ್ಕ್ ಮೋರಿಸ್, ರೆನ್ನಿ ಹ್ಯಾರಿಸ್ ಮತ್ತು ಕೊಡೋ ಡ್ರಮ್ಮರ್‌ಗಳೊಂದಿಗೆ ಕೆಲಸ ಮಾಡಿದ್ದಾರೆ.

ಝಾಕಿರ್ ಹುಸೈನ್ ಪೌರಾಣಿಕ ಗಿಟಾರ್ ವಾದಕ ಜಾನ್ ಮೆಕ್ಲಾಫ್ಲಿನ್, ಪಿಟೀಲು ವಾದಕ ಎಲ್. ಶಂಕರ್ ಮತ್ತು ತಾಳವಾದ್ಯ ವಾದಕ ಟಿ.ಹೆಚ್ ಅವರ ಸಹಯೋಗದೊಂದಿಗೆ 1970ರ ದಶಕದಲ್ಲಿ ‘ವಿಕ್ಕು’ ವಿನಾಯಕರಾಮ್ ಜತೆಗೂಡಿ ಶಕ್ತಿ ಫ್ಯೂಶನ್ ಗ್ರೂಪ್ ರಚಿಸಿದರು. ಇದು ಭಾರತದ ಶಾಸ್ತ್ರೀಯ ಸಂಗೀತವನ್ನು ಜಾಝ್‌ನೊಂದಿಗೆ ಬೆಸೆಯಿತು. ಸಮಕಾಲೀನ ಸಂಗೀತ ಕ್ಷೇತ್ರದಲ್ಲಿ ಅಳಿಸಲಾಗದ ಹೊಸ ಮಾದರಿಯ ಸಂಗೀತ ಪ್ರಕಾರವನ್ನು ಸೃಷ್ಟಿಸಿ ತನ್ನದೇ ಛಾಪು ಮೂಡಿಸಿತು.

ಜಾರ್ಜ್ ಹ್ಯಾರಿಸನ್, ರವಿ ಶಂಕರ್ ಮತ್ತು ವ್ಯಾನ್ ಮಾರಿಸನ್ ಅವರಂತಹ ಹೆಸರಾಂತ ಕಲಾವಿದರೊಂದಿಗೆ ಝಾಕಿರ್ ಹುಸೈನ್ ಕೆಲಸ ಮಾಡಿದ್ದರು.  ಗ್ರೇಟ್‌ಫುಲ್ ಡೆಡ್ ಅಂಡ್ ಅರ್ಥ್, ವಿಂಡ್ ಅಂಡ್ ಫೈರ್‌ನ ಆಲ್ಬಂಗಳಲ್ಲಿ ಸಹ ಪ್ರದರ್ಶನ ನೀಡಿದ್ದರು. 1991ರಲ್ಲಿ ಮಿಕ್ಕಿ ಹಾರ್ಟ್ ಅವರೊಂದಿಗೆ ರಚಿಸಲಾದ ಅವರ ಆಲ್ಬಂ ಪ್ಲಾನೆಟ್ ಡ್ರಮ್, ಅತ್ಯುತ್ತಮ ವಿಶ್ವ ಸಂಗೀತ ಆಲ್ಬಮ್‌ಗಾಗಿ ಮೊದಲ ಬಾರಿಗೆ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಝಾಕಿರ್ ಹುಸೈನ್ ಅವರ ಸಂಗೀತ ಲೋಕದ ಸಾಧನೆಯನ್ನು ಗುರುತಿಸಿ ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಝಾಕಿರ್ ಅವರು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಮತ್ತು ಸಂಗೀತ ನಾಟಕ ಅಕಾಡೆಮಿ ಫೆಲೋಶಿಪ್‌ನ ಜೀವಮಾನದ ಗೌರವ ಪ್ರಶಸ್ತಿಯನ್ನೂ ಪಡೆದಿದ್ದಾರೆ.

2024 ರಲ್ಲಿ ನಡೆದ 66 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಸೇರಿದಂತೆ ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಝಾಕಿರ್ ಹುಸೈನ್ ಗೆದ್ದಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಸಂಗೀತಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದರು.

ಇದನ್ನೂ ಓದಿ : ಉತ್ತರ ಪ್ರದೇಶ: ಭೂ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ನಕಲಿ ನೋಟಿಸ್ ಕಳುಹಿಸಿದ ಅಪರಿಚಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...