Homeಮುಖಪುಟಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

- Advertisement -
- Advertisement -

ದಲಿತ ಕಾನ್‌ಸ್ಟೆಬಲ್‌ ಒಬ್ಬರ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ವ್ಯಕ್ತಿಗಳು ದಾಳಿ ಮಾಡಿ; ಡಿಜೆ ಸಂಗೀತವನ್ನು ವಿರೋಧಿಸಿ, ವಾಹನವನ್ನು ಧ್ವಂಸಗೊಳಿಸಿದ್ದಾರೆ. ಜನರ ಮೇಲೆ ಕಲ್ಲು ತೂರಾಟ ನಡೆಸಿರುವ ಜಾತಿವಾದಿಗಳು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮದುವೆಗೆ ಆಗಮಿಸಿದ್ದ ಹಲವಾರು ಅತಿಥಿಗಳನ್ನು ಜಾತಿವಾದಿಗಳು ಗಾಯಗೊಳಿಸಿದ್ದಾರೆ ಎಂದು ಬುಲಂದ್‌ಶಹರ್‌ನಲ್ಲಿ ಭಾನುವಾರ ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿ, ಐವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಗಾಜಿಯಾಬಾದ್‌ನಲ್ಲಿ ಪಿಎಸಿ ಕಾನ್‌ಸ್ಟೆಬಲ್ ಆಗಿರುವ ವರ ರಾಬಿನ್ ಸಿಂಗ್ (31) ಸೋಮವಾರ ಲಖಾವತಿಯ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಮದುವೆಯಾಗುತ್ತಿದ್ದರು. ಅವರ ತಂದೆ ನಂದ್ರಾಮ್ ಸಿಂಗ್, ರಾತ್ರಿ 8 ಗಂಟೆ ಸುಮಾರಿಗೆ ಜಹಾಂಗೀರಾಬಾದ್ ಪ್ರದೇಶದ ಟಿಟೋನಾ ಗ್ರಾಮದ ಮೂಲಕ ಬರಾತ್ ಹಾದು ಹೋಗುತ್ತಿದ್ದಾಗ ಠಾಕೂರ್ ಸಮುದಾಯದ 20-25 ಜನ ಪುರುಷರು ಮೆರವಣಿಗೆಯನ್ನು ತಡೆದರು.

“ಡಿಜೆ ಸಂಗೀತದೊಂದಿಗೆ ತಮ್ಮ ಪ್ರದೇಶದಲ್ಲಿ ಬರಾತ್ ಹಾದು ಹೋಗುವುದನ್ನು ಅವರು ಆಕ್ಷೇಪಿಸಿದರು. ಅವರು ನಮ್ಮ ಮೇಲೆ ಕಲ್ಲು ತೂರಿದರು, ಬಲವಂತವಾಗಿ ನನ್ನ ಮಗನನ್ನು ಕುದುರೆಯಿಂದ ಕೆಳಗಿಳಿಸಿ, ಡಿಜೆ ವಾಹನವನ್ನು ಧ್ವಂಸಗೊಳಿಸಿದರು. ದಾಳಿಯಲ್ಲಿ ಕೆಲವು ಅತಿಥಿಗಳು ಗಾಯಗೊಂಡರು. ನನ್ನ ಮಗ ಗಂಭೀರ ಹಾನಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾನೆ” ಎಂದು ಅವರು ವಿವರಿಸಿದ್ದಾರೆ.

ಕೆಲವು ದಾಳಿಕೋರರು ತಮ್ಮ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ರಾಬಿನ್ ಹೇಳಿದ್ದಾರೆ. “ನನ್ನ ನಿಶ್ಚಿತಾರ್ಥದ ದಿನ ನಾನು ಅವರಲ್ಲಿ ಕೆಲವರನ್ನು ಗುರುತಿಸಿದೆ. ಅವರು ಮೆರವಣಿಗೆಯಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದರು, ದಲಿತ ಬಾರಾತ್ ತಮ್ಮ ಪ್ರದೇಶದಲ್ಲಿ ಹಾದು ಹೋಗಬಾರದು ಎಂದು ಹೇಳಿದರು. ಅವರು ಡಿಜೆ ಚಾಲಕನನ್ನು ಥಳಿಸಿ ಉಪಕರಣಗಳನ್ನು ನಾಶಪಡಿಸಿದರು. ನಾವು ಬಾರಾತ್ನೊಂದಿಗೆ ಮನೆಗೆ ಮರಳಬೇಕಾಯಿತು. ವಧುವಿನ ಮನೆಗೆ ಕಾರಿನಲ್ಲಿ ಹೋದರು, ಎಲ್ಲವೂ ಯೋಜಿಸಲಾಗಿತ್ತು. ಆದರೆ, ಈ ಹಿಂಸಾಚಾರದಿಂದಾಗಿ ಎಲ್ಲವೂ ವ್ಯರ್ಥವಾಯಿತು” ಎಂದು ಪೊಲೀಸ್ ಕಾನ್‌ಸ್ಟೆಬಲ್‌ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ; ವಿಎಚ್‌ಪಿ ವೇದಿಕೆಯಲ್ಲಿ ವಿವಾದಾತ್ಮಕ ಹೇಳಿಕೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...