Homeಮುಖಪುಟಸಚಿವ ಸ್ಥಾನದ ಕಡೆಗಣನೆ: ಪಕ್ಷ ತೊರೆದ ಶಿವಸೇನೆಯ ಶಾಸಕ

ಸಚಿವ ಸ್ಥಾನದ ಕಡೆಗಣನೆ: ಪಕ್ಷ ತೊರೆದ ಶಿವಸೇನೆಯ ಶಾಸಕ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರಕಾರದಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿ ಶಿವಸೇನೆ ಶಾಸಕ ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಎಲ್ಲಾಹಂತದ ಸ್ಥಾನಗಳ  ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಭಂಡಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯ ಉಪ ನಾಯಕ ಮತ್ತು ಪೂರ್ವ ವಿದರ್ಭ ಜಿಲ್ಲೆಗಳ ಸಂಯೋಜಕನಾಗಿದ್ದ ನನಗೆ ಪಕ್ಷದ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಭರವಸೆ ನೀಡಿದ್ದರು ಎಂದು ಹೇಳಿದರು.

ಭಂಡಾರ ಜಿಲ್ಲೆಯ ಉಸ್ತುವಾರಿ ಸಚಿವರಾಗಲು ಮತ್ತು ಅದರ ಅಭಿವೃದ್ಧಿಗೆ ಕೆಲಸ ಮಾಡಲು ಸಚಿವ ಸ್ಥಾನ ಪಡೆಯಲು ನಾನು ಆಕಾಂಕ್ಷಿಯಾಗಿದ್ದೆ ಎಂದು ಭೋಂಡೆಕರ್ ತಿಳಿಸಿದರು.

ನವೆಂಬರ್ 20 ರಂದು ನಡೆದ ರಾಜ್ಯ ಚುನಾವಣೆಯಲ್ಲಿ ಅವರು ಭಂಡಾರಾ ಕ್ಷೇತ್ರದಿಂದ  ಕಾಂಗ್ರೆಸ್ ಪ್ರತಿಸ್ಪರ್ಧಿಯನ್ನು 38,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಗೆದಿದ್ದರು.

ದೇವೇಂದ್ರ ಫಡ್ನವೀಸ್ ನೇತೃತ್ವದ ಸಚಿವ ಸಂಪುಟದ ಮೊದಲ ಸಂಪುಟ ವಿಸ್ತರಣೆಯಲ್ಲಿ 16 ಹೊಸ ಮುಖಗಳು ಸೇರಿದಂತೆ ಮಹಾಯುತಿ ಮಿತ್ರಪಕ್ಷಗಳ ಒಟ್ಟು 39 ಶಾಸಕರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರೆ, 10 ಮಾಜಿ ಸಚಿವರನ್ನು ಹೊರಗಿಡಲಾಗಿದೆ. ಮಿತ್ರಪಕ್ಷಗಳ ಪೈಕಿ ಅತಿ ದೊಡ್ಡ ಪಕ್ಷ ಎಂಬ ಕಾರಣಕ್ಕೆ ಬಿಜೆಪಿ 19 ಸಚಿವ ಸ್ಥಾನಗಳನ್ನು ಪಡೆದುಕೊಂಡರೆ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷಕ್ಕೆ ಕ್ರಮವಾಗಿ 11 ಮತ್ತು 9 ಸ್ಥಾನಗಳನ್ನು ನೀಡಲಾಗಿದೆ.

ನನಗೆ ಕ್ಯಾಬಿನೆಟ್ ಸ್ಥಾನ ನೀಡಲಾಗುವುದು ಎಂಬ ಷರತ್ತಿನ ಮೇಲೆ ನಾನು ಶಿವಸೇನೆಗೆ ಸೇರಿದ್ದೇನೆ. ಶಿಂಧೆ ನನಗೆ ಅದೇ ಭರವಸೆ ನೀಡಿದ್ದರು. ಹಿಂದಿನ ಸರ್ಕಾರದಲ್ಲಿ ಶಿಂಧೆ ಮುಖ್ಯಮಂತ್ರಿಯಾದಾಗ ನಾನು ಸ್ವತಂತ್ರ ಶಾಸಕನಾಗಿದ್ದೆ ಮತ್ತು ಅವರಿಗೆ ಬೆಂಬಲ ನೀಡಿದ್ದೆ ಎಂದು ಭೋಂಡೆಕರ್ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮ್ಮ ಹೆಸರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಲಾಗುವುದು ಎಂದು ಹೇಳಲಾಗಿತ್ತು, ನಾನು ಸಚಿವ ಸ್ಥಾನದ ಪಟ್ಟಿಯನ್ನು ಪರಿಶೀಲಿಸಿದಾಗ ಮತ್ತು ನನ್ನನ್ನು ಕೈಬಿಡಲಾಗಿದೆ ಎಂದು ಅರಿತುಕೊಂಡಾಗ, ನಾನು ಪಕ್ಷದ ಎಲ್ಲಾ ಸ್ಥಾನಗಳಿಂದ ಹೊರಬರಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.

ಭಂಡಾರಾ ಜಿಲ್ಲೆಯ ಉಸ್ತುವಾರಿ ಸಚಿವನಾಗಲು ಕ್ಯಾಬಿನೆಟ್ ಹುದ್ದೆಯನ್ನು ಪಡೆಯುವ ಉದ್ದೇಶ ಹೊಂದಿದ್ದೆ.  ಈಗ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಲಿದ್ದೇನೆ ಎಂದು ಭೋಂಡೆಕರ್ ತಿಳಿಸಿದ್ದಾರೆ.

ಭಂಡಾರ ಜಿಲ್ಲೆ ಸತತವಾಗಿ ಹಲವಾರು ವರ್ಷಗಳಿಂದ  ಹೊರಗಿನ ಮಂತ್ರಿಗಳನ್ನು ಹೊಂದಿದೆ. ಇಂತಹ ಪದ್ಧತಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಅಡ್ಡಿಯಾಗಿದೆ ಎಂದು  ಅವರು ಆರೋಪಿಸಿದ್ದಾರೆ.

ನಾನು ಇನ್ನು ಮುಂದೆ ಯಾವುದೇ ಅಧಿಕೃತ ಸ್ಥಾನವನ್ನು ಹೊಂದುವ ಮನಸ್ಸು ಹೊಂದಿಲ್ಲ. ನಾನು ನನ್ನ ಪಕ್ಷದ ನಾಯಕರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ ಮತ್ತು ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ ಎಂದು ಭೋಂಡೇಕರ್ ಹೇಳಿದರು.

…………………………..

ಮಹಾರಾಷ್ಟ್ರದಲ್ಲಿ ಮಹಾಯುತಿ ಸರಕಾರ ಸಂಪುಟ ವಿಸ್ತರಣೆ

-ಮಹಾರಾಷ್ಟ್ರದಲ್ಲಿ 39 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

-18 ಹೊಸ ಮುಖಗಳಿಗೆ ಮಣೆ, ನಾಲ್ವರು ಮಹಿಳೆಯರಿಗೆ ಮಾತ್ರ ಅವಕಾಶ

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ನೇತೃತ್ವದ ಮಹಾಯುತಿ ಸರಕಾರದ ಸಚಿವ ಸಂಪುಟ ಭಾನುವಾರ ವಿಸ್ತರಣೆಯಾಗಿದೆ. ಮೊದಲ ವಿಸ್ತರಣೆಯಲ್ಲಿ ಮೂರೂ ಮೈತ್ರಿ ಪಕ್ಷಗಳ ಒಟ್ಟು 39 ಶಾಸಕರಿಗೆ ಮಂತ್ರಿಗಿರಿ ಲಭಿಸಿದೆ. ಆ ಪೈಕಿ 33 ಮಂದಿ ಸಂಪುಟ ಸಚಿವರಾಗಿ ಹಾಗೂ 6 ಮಂದಿ ಸಹಾಯಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಸಂಪುಟ ಸದಸ್ಯರ ಸಂಖ್ಯೆ 42ಕ್ಕೆ ಏರಿದೆ. ಇನ್ನೂ ಒಂದು ಸಚಿವ ಸ್ಥಾನ ಖಾಲಿ ಉಳಿದಿದೆ.

ನಾಗಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಪಿ.ಸಿ. ರಾಧಾಕೃಷ್ಣನ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿ. 16ರಿಂದ 21ರವರೆಗೆ ನಾಗಪುರದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಇಲ್ಲಿಯೇ ಕಾರ್ಯಕ್ರಮ ಆಯೋಜಿಸಲಾಗಿತ್ತು.

4 ಮಹಿಳೆಯರು, ಹಿರಿಯರಿಗಿಲ್ಲ ಮಣೆ

ಸಚಿವ ಸಂಪುಟದಲ್ಲಿ ನಾಲ್ವರು ಮಹಿಳಾ ಶಾಸಕರು ಸ್ಥಾನ ಗಿಟ್ಟಿಸಿದ್ದಾರೆ. 39 ಸಚಿವರ ಪೈಕಿ ಬಿಜೆಪಿಯಿಂದ ಪಂಕಜಾ ಮುಂಡೆ, ಎನ್‌ಸಿಪಿ (ಅಜಿತ್‌ ಬಣ)ಯಿಂದ ಅದಿತಿ ತತ್ಕಾರೆ, ಪುಣೆಯಿಂದ ಮೊದಲ ಬಾರಿಗೆ ಸ್ಪರ್ಧಿಸಿದ್ದ ಬಿಜೆಪಿ ಶಾಸಕಿ ಮಾಧುರಿ ಮಿಸಳ್‌ ಮತ್ತು ಬಿಜೆಪಿ ನಾಯಕಿ ಮೇಘನಾ ಬೊರ್ಡಿಕರ್‌ ಅವರಿಗೆ ಸಚಿವ ಸ್ಥಾನ ದೊರೆತಿದೆ.

ಬಿಜೆಪಿಯ ಮಹಿಳಾ ಸಚಿವರ ಪೈಕಿ ಎರಡು ಹೊಸಮುಖಗಳಿಗೆ ಮಣೆ ಹಾಕಲಾಗಿರುವುದು ನಾಯಕತ್ವ ಬೆಳೆಸುವ ಪಕ್ಷದ ಯೋಜನೆಯ ಭಾಗವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಉದಯ್ ಸಾಮಂತ್, ಶಂಭುರಾಜ್ ದೇಸಾಯಿ, ದಾದಾಜಿ ಭುಸೆ, ಸಂಜಯ್ ರಾಥೋಡ್, ಗುಲಾಬ್‌ರಾವ್ ಪಾಟೀಲ್ ಮತ್ತು ಸಂಜಯ್ ಶಿರ್ಸಾತ್ ಪ್ರಮಾಣವಚನ ಸ್ವೀಕರಿಸಿದ ಶಿವಸೇನಾದ ಪ್ರಮುಖರು.

ಇದನ್ನೂ ಓದಿ…ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್‌ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...