Homeಮುಖಪುಟಉತ್ತರ ಪ್ರದೇಶ - ಗನ್‌ ತೋರಿಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ ಎಸಗಿದ ಬಿಜೆಪಿ ನಾಯಕ

ಉತ್ತರ ಪ್ರದೇಶ – ಗನ್‌ ತೋರಿಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ ಎಸಗಿದ ಬಿಜೆಪಿ ನಾಯಕ

- Advertisement -
- Advertisement -

ಬಿಜೆಪಿ ನಾಯಕನೊಬ್ಬ ಕೆಲಸ ಕೊಡಿಸುವ ನೆಪದಲ್ಲಿ ದೆಹಲಿ ಮೂಲದ ಮಹಿಳೆಯೊಬ್ಬರ ಕರೆಸಿ ಗನ್ ತೋರಿಸಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. ಆರೋಪಿಯ ವಿರುದ್ಧ ಬಿಎನ್‌ಎಸ್‌ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿ ಹೇಳಿದ್ದು, ಆದರೆ ವರದಿಯು ಆರೋಪಿಯ ಹೆಸರನ್ನು ಬಹಿರಂಗಪಡಿಸಿಲ್ಲ. ಉತ್ತರ ಪ್ರದೇಶ

“ಆರೋಪಿಯ ವಿರುದ್ಧ ಬಿಎನ್‌ಎಸ್ ಸೆಕ್ಷನ್ 64 (1) (ಅತ್ಯಾಚಾರ) ಮತ್ತು 351 (3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಹಿಳೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ, ಅವರ ಹೇಳಿಕೆ ದಾಖಲಿಸಿ ತನಿಖೆ ನಡೆಸಲಾಗುವುದು” ಎಂದು ಹೈವೇ ಪೊಲೀಸ್ ಠಾಣೆಯ ಎಸ್‌ಎಚ್‌ಒ ಆನಂದ್ ಕುಮಾರ್ ತಿಳಿಸಿದ್ದಾರೆ.. ಉತ್ತರ ಪ್ರದೇಶ

ಬಿಜೆಪಿಯ ಕಿಸಾನ್ ಮೋರ್ಚಾದ ಮಾಜಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮತ್ತು ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ನಾಯಕರಾಗಿರುವ ಆರೋಪಿಯು ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. “ನನ್ನ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳು ಆಧಾರರಹಿತವಾಗಿದ್ದು, ನನ್ನ ಪ್ರತಿಷ್ಠೆಗೆ ಕಳಂಕ ತರುವ ಪ್ರಯತ್ನ ಇದಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ಮಹಿಳೆ ದೆಹಲಿಯಲ್ಲಿ ನೆಲೆಸಿದ್ದು, ಅವರು ನೀಡಿದ ದೂರಿನಲ್ಲಿ, ಬಿಜೆಪಿ ಮುಖಂಡ ತನಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ನಾಲ್ಕು ವರ್ಷದಿಂದ ಇಬ್ಬರು ಆನ್‌ಲೈನ್ ಮೂಲಕವೇ ಸಂಪರ್ಕ ಹೊಂದಿದ್ದಾಗಿ ಹೇಳಿದ್ದಾರೆ. “ಆರೋಪಿಯು ಎನ್‌ಜಿಒ ನಡೆಸುತ್ತಿದ್ದಾನೆ. ಸೆಪ್ಟಂಬರ್‌ನಲ್ಲಿ ನಾವು ಎನ್‌ಜಿಒ ಸಂಬಂಧಿತ ವಿಚಾರದಲ್ಲಿ ಸಂಪರ್ಕಿಸಿದ್ದೆವು. ಸೆಪ್ಟೆಂಬರ್ 14ರಂದು ಉದ್ಯೋಗ ನೀಡುವ ನೆಪದಲ್ಲಿ ನನ್ನನ್ನು ಮಥುರಾಗೆ ಕರೆದನು. ನಾನು ನನ್ನ ಸ್ನೇಹಿತನೊಂದಿಗೆ ನರಹೌಲಿ ಪ್ರದೇಶ ತಲುಪಿದೆ. ಅಲ್ಲಿಂದ ಆರೋಪಿ ಮತ್ತು ಆತನ ಸಹಚರರು ನಮ್ಮನ್ನು ಕರೆದೊಯ್ದರು” ಎಂದು ಮಹಿಳೆ ತಿಳಿಸಿದ್ದಾರೆ.

“ಅಲ್ಲಿ ಕೋಣೆಯೊಂದಕ್ಕೆ ಕರೆದೊಯ್ದು ಗನ್ ತೋರಿಸಿ ಅತ್ಯಾಚಾರ ಮಾಡಿದ್ದಾರೆ. ಜೊತೆಗೆ ಮುಂದಿನ ಬಾರಿ ಸ್ನೇಹಿತನೊಂದಿಗೆ ಬರದೆ ಒಬ್ಬಳೇ ಬರಬೇಕು ಎಂದು ಸೂಚಿಸಿದ್ದಾರೆ” ಎಂದು ಮಹಿಳೆ ಹೇಳಿದ್ದಾರೆ. ಮಹಿಳೆ ಘಟನೆ ನಡೆದ ಮರುದಿನವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಆರೋಪಿಗೆ ಹೆಚ್ಚು ಪ್ರಭಾವ ಇರುವ ಕಾರಣ ಪೊಲೀಸರು ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಇದರ ನಂತರ ಮಹಿಳೆ ನಿರಂತರವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸುವಂತೆ ಒತ್ತಾಯಿಸಿದ್ದರು. ಅಂತಿಮವಾಗಿ ಅಪರಾಧ ನಡೆದು ಮೂರು ತಿಂಗಳ ಬಳಿಕ ಶುಕ್ರವಾರ ಮಥುರಾದ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ. ಉತ್ತರ ಪ್ರದೇಶ

ಇದನ್ನೂ ಓದಿ: Explainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯವೆ?

Explainer | ಹೈಕೋರ್ಟ್‌ ನ್ಯಾಯಾಧೀಶರನ್ನು ಹುದ್ದೆಯಿಂದ ಕೆಳಗಿಳಿಸುವುದು ಸಾಧ್ಯನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...