Homeಕರ್ನಾಟಕ'ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ'ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

‘ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಜನರ ಹಣ ವಂಚಿಸುವ ಮೋಸದ ಕಂಪೆನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ‘ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ (ಡಿ.16) ವಿಧಾನಸಭೆಯಲ್ಲಿ “ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024” ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “2003-04 ರಲ್ಲಿ ವಿನಿವಿಂಕ್‌ ಶಾಸ್ತ್ರಿ ಚಿಟ್‌ಫಂಡ್‌ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004 ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು” ಎಂದರು.

“ಚೈನ್‌ಲಿಂಕ್‌, ಚಿಟ್‌ಫಂಡ್‌, ಪಿರಮಿಡ್‌ ಮಾದರಿ ಹಾಗೂ ಹಣ ಡಬ್ಲಿಂಗ್‌ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ ಮುಖ್ಯ ಉದ್ದೇಶ. ಈ ಕಾನೂನು ಜಾರಿಗೆ ಬಂದು 20 ವರ್ಷ ಆಯ್ತು. ಆದರೆ, ಈಗಲೂ ಈ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಲೇ ಇದೆ. ಸೆಟಲ್ಮೆಂಟ್‌ಗಳೂ ಆಗುತ್ತಲೇ ಇವೆ. ಹೀಗಾಗಿ ಈ ಕಾನೂನನ್ನು ಅನುಷ್ಠಾನಗೊಳುವಾಗ ಒಂದಷ್ಟು ಬದಲಾವಣೆ ತಂದರೆ ಮತ್ತಷ್ಟು ಪ್ರಬಲವಾಗಿ ಅನುಷ್ಠಾನಗೊಳಿಸಬಹುದು ಹಾಗೂ ಬಾಧಿತರಿಗೆ ಮತ್ತಷ್ಟು ಪರಿಹಾರ ಒದಗಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.

“ಈ ಕಾನೂನಿಗೆ ಏನೆಲ್ಲಾ ತಿದ್ದುಪಡಿ ತರಬೇಕು ಎಂದು ಅನುಭವದ ಆಧಾರದ ಮೇಲೆ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ತಿದ್ದುಪಡಿ ತರಲಾಗಿದೆ. ಕಾನೂನಿನ ಸಮರ್ಪಕ ಅನುಷ್ಠಾನ ಹಾಗೂ ಠೇವಣಿದಾರರಿಗೆ ಸಹಾಯ ಮಾಡಿಕೊಡುವ, ಅವರ ಹಣವನ್ನು ಸುಲಭಕ್ಕೆ ಹಿಂತಿರುಗಿ ಪಡೆಯುವ ನಿಟ್ಟಿನಲ್ಲಿ ಸರಳೀಕರಣಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ತಿದ್ದುಪಡಿಯಲ್ಲಿ ತರಲಾಗಿದೆ” ಎಂದು ಅವರು ತಿಳಿಸಿದರು.

“ಕೆಲವರು ಕಂಪೆನಿ ತೆರೆದು ಹಗರಣ ಮಾಡಿ, ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗುವ ಮೊದಲೇ ಆ ಕಂಪನಿಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿರುತ್ತಾರೆ. ನಿರ್ಗಮಿತ ನಿರ್ದೇಶಕರನ್ನು ವಿಚಾರಿಸುವ ಅವಕಾಶ ಹಳೆಯ ಕಾನೂನಿನಲ್ಲಿ ಇರಲಿಲ್ಲ. ಆದರೆ, ಇದೀಗ ಹೊಸ ತಿದ್ದುಪಡಿಯಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಅಂತಹ ವಂಚಕ ಕಂಪೆನಿಗಳು ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ ಚಟುವಟಿಕೆ ಆರಂಭಿಸಿರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಉಪ-ವಿಭಾಗಾಧಿಕಾರಿಗಳು ಆ ಬಗ್ಗೆ ಕ್ರಮವಹಿಸಬೇಕು, ಅಂತಹ ಕಂಪೆನಿಗಳ ಪ್ರಚಾರ-ಜಾಹೀರಾತುಗಳಿಗೂ ತಡೆಯೊಡ್ಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧವೂ ಕ್ರಮ

ತಿದ್ದುಪಡಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಿಸುತ್ತಿದ್ದಂತೆ ವಿಪಕ್ಷ ನಾಯಕ ಆರ್.‌ ಅಶೋಕ್‌, ಬಿಜೆಪಿ ಶಾಸಕರಾದ ಸುನೀಲ್‌ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ ಫನಾನ್ಸ್‌, ಹೌಸಿಂಗ್‌ ಸ್ಕೀಂ ಹಾಗೂ ಗೋಲ್ಡ್‌ ಲೋನ್‌ ಕಂಪೆನಿಗಳ ವಂಚನೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ, ಈ ಅಕ್ರಮಗಳಿಗೂ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

“ಹೌಸಿಂಗ್‌ ಸ್ಕೀಂ, ಮೈಕ್ರೋ ಲೆಂಡಿಂಗ್‌, ಗೋಲ್ಡ್‌ಲೋನ್‌ ನಂತರ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಕಾನೂನು ಇದೆ. ಆ ಚಟುವಟಿಕೆಗಳು ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕದ ಅಡಿ ಬರುವುದಿಲ್ಲ. ಆದರೆ, ಆ ಕಾನೂನುಗಳನ್ನೂ ಸಹ ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಇಂತಹ ಮೋಸದ ಕಂಪೆನಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಕುರಿತೂ ಚಿಂತಿಸಲಾಗುತ್ತಿದೆ. ಕೆಲವು ಮೈಕ್ರೋ ಫೈನಾನ್ಸ್‌ ಹೆಸರಿನ ಕಂಪೆನಿಗಳು ಮಹಿಳೆಯರನ್ನು ಶೋಷಿಸುತ್ತಿದ್ದು, ಇಂತಹ ಚಟುವಟಿಕೆಗಳನ್ನು ತಡೆಗಟ್ಟಲು, ತದ್ಸಂಬದ್ದ ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುತ್ತೇನೆ” ಎಂದು ಸದನಕ್ಕೆ ಭರವಸೆ ನೀಡಿದರು.

ಇದನ್ನೂ ಓದಿ; ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...