HomeUncategorizedಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

ಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

- Advertisement -
- Advertisement -

ಲಾಹೋರ್: ಟ್ರಾವೆಲ್ ಏಜೆಂಟ್‌ನಿಂದ ವಂಚನೆಗೊಳಗಾಗಿ ಕಳೆದ 22 ವರ್ಷಗಳಿಂದ ಪಾಕಿಸ್ತಾನದಲ್ಲಿ ನೆಲೆಸಿದ್ದ ಭಾರತೀಯ ಮಹಿಳೆ ಸೋಮವಾರ ಲಾಹೋರ್‌ನ ವಾಘಾ ಗಡಿಯ ಮೂಲಕ ತನ್ನ ತಾಯ್ನಾಡಿಗೆ ಮರಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಮೂಲದ ಹಮೀದಾ ಬಾನೋ ಅವರು 2002 ರಲ್ಲಿ ಪಾಕಿಸ್ತಾನದಲ್ಲಿರುವ ಹೈದರಾಬಾದ್‌ಗೆ  ಕರೆತರಲಾಗಿತ್ತು.  ಏಜೆಂಟ್ ದುಬೈನಲ್ಲಿ ಕೆಲಸ ಕೊಡಿಸುವ ಭರವಸೆಯೊಂದಿಗೆ ಅವಳನ್ನು ವಂಚಿಸಿ, ದುಬೈ ಬದಲು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್ ಜಿಲ್ಲೆಗೆ ಕರೆತಂದಿದ್ದನು.

ಸೋಮವಾರ ಹಮೀದಾ ಕರಾಚಿಯಿಂದ ವಿಮಾನದ ಮೂಲಕ ಇಲ್ಲಿಗೆ ಬಂದರು ಮತ್ತು ತರುವಾಯ ಅವರು ವಾಘಾ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಬಾನೊ ತನ್ನ ಕುಟುಂಬದೊಂದಿಗೆ ಮತ್ತೆ ಒಂದಾಗಲು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ತಾನು ಭಾರತಕ್ಕೆ ಹಿಂದಿರುಗುವ ಭರವಸೆಯನ್ನು ಕಳೆದುಕೊಂಡಿದ್ದೇನು. ಆದರೆ ಈ ದಿನವನ್ನು ನೋಡಲು ಅದೃಷ್ಟವಂತೆ ಎಂದು ಅವರು ಹೇಳಿದ್ದಾರೆ.

2022 ರಲ್ಲಿ, ಸ್ಥಳೀಯ ಯೂಟ್ಯೂಬರ್ ವಲಿಯುಲ್ಲಾ ಮರೂಫ್ ರ ಜೊತೆ, ಹಮೀದಾ ಬಾನೋ 2002ರಲ್ಲಿ ಭಾರತವನ್ನು ತೊರೆದು ಬಂದ ತನ್ನ ಕಥೆಯನ್ನು ಹೇಳಿಕೊಂಡಿದ್ದರು. ನೇಮಕಾತಿ ಏಜೆಂಟ್ ಯೊಬ್ಬರು ದುಬೈನಲ್ಲಿ ಅಡುಗೆಯ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಇದರ ಬದಲಾಗಿ ಅವರನ್ನು ಮೋಸಗೊಳಿಸಿ ಪಾಕಿಸ್ತಾನಕ್ಕೆ ಕರೆ ತರಲಾಗಿತ್ತು. ಮರೂಫ್ ಅವರು  ಭಾರತದಲ್ಲಿನ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡಿದ್ದರು. ಅವರ ಮಗಳು ಯಾಸ್ಮೀನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದರು.

ಮರೂಫ್ ಅವರೊಂದಿಗಿನ ಮಾತುಕತೆಯಲ್ಲಿ, ಹಮೀದಾ ಬಾನೊ ಅವರು ಪಾಕಿಸ್ತಾನಕ್ಕೆ ಬರುವ ಮೊದಲು ಭಾರತದಲ್ಲಿ ತನ್ನ ಗಂಡನ ಮರಣದ ನಂತರ ತನ್ನ ನಾಲ್ಕು ಮಕ್ಕಳನ್ನು ಸಲಹುವುದಕ್ಕಾಗಿ ಕೆಲಸವನ್ನು ಹುಡುಕುತ್ತಿದ್ದೆ ಎಂದು ಹೇಳಿದ್ದರು. ಇಲ್ಲಿಗೆ ಬರುವ ಮೊದಲು ದೋಹಾ, ಕತಾರ್, ದುಬೈ ಮತ್ತು ಸೌದಿ ಅರೇಬಿಯಾದಲ್ಲಿ ಯಾವುದೇ ತೊಂದರೆಯಿಲ್ಲದೆ ಅಡುಗೆಯವಳಾಗಿ ಕೆಲಸ ಮಾಡಿದ್ದೆ ಎಂದು ತಿಳಿಸಿದ್ದರು.

ಪಾಕಿಸ್ತಾನದಲ್ಲಿ ತನ್ನ 22 ವರ್ಷಗಳ ವಾಸ್ತವ್ಯದ ಸಮಯದಲ್ಲಿ, ಬಾನೊ ಕರಾಚಿಯ ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾಗಿದ್ದರು. ಅವರು ಕೋವಿಡ್ -19 ನಿಂದ ನಿಧನರಾಗಿದ್ದರು. ಅಂದಿನಿಂದ ಅವರು ತನ್ನ ಮಲಮಗನೊಂದಿಗೆ ವಾಸಿಸುತ್ತಿದ್ದಳು.

ಇದನ್ನು ಓದಿ….ಶೋಷಿತ ಸಮುದಾಯಗಳು ಪರಿಣಾಮಕಾರಿ ಹೋರಾಟದ ಮಾರ್ಗ ಕಂಡುಕೊಳ್ಳಬೇಕು: ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...