HomeUncategorizedಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

ಟ್ರಾವೆಲ್ ಏಜೆಂಟ್‌ನಿಂದ ವಂಚನೆ: 22 ವರ್ಷಗಳ ನಂತರ ಪಾಕಿಸ್ತಾನದಿಂದ ಮರಳಿದ ಭಾರತೀಯ ಮಹಿಳೆ

- Advertisement -
- Advertisement -

ಲಾಹೋರ್: ಟ್ರಾವೆಲ್ ಏಜೆಂಟ್‌ನಿಂದ ವಂಚನೆಗೊಳಗಾಗಿ ಕಳೆದ 22 ವರ್ಷಗಳಿಂದ ಪಾಕಿಸ್ತಾನದಲ್ಲಿ ನೆಲೆಸಿದ್ದ ಭಾರತೀಯ ಮಹಿಳೆ ಸೋಮವಾರ ಲಾಹೋರ್‌ನ ವಾಘಾ ಗಡಿಯ ಮೂಲಕ ತನ್ನ ತಾಯ್ನಾಡಿಗೆ ಮರಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಮೂಲದ ಹಮೀದಾ ಬಾನೋ ಅವರು 2002 ರಲ್ಲಿ ಪಾಕಿಸ್ತಾನದಲ್ಲಿರುವ ಹೈದರಾಬಾದ್‌ಗೆ  ಕರೆತರಲಾಗಿತ್ತು.  ಏಜೆಂಟ್ ದುಬೈನಲ್ಲಿ ಕೆಲಸ ಕೊಡಿಸುವ ಭರವಸೆಯೊಂದಿಗೆ ಅವಳನ್ನು ವಂಚಿಸಿ, ದುಬೈ ಬದಲು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್ ಜಿಲ್ಲೆಗೆ ಕರೆತಂದಿದ್ದನು.

ಸೋಮವಾರ ಹಮೀದಾ ಕರಾಚಿಯಿಂದ ವಿಮಾನದ ಮೂಲಕ ಇಲ್ಲಿಗೆ ಬಂದರು ಮತ್ತು ತರುವಾಯ ಅವರು ವಾಘಾ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಬಾನೊ ತನ್ನ ಕುಟುಂಬದೊಂದಿಗೆ ಮತ್ತೆ ಒಂದಾಗಲು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ತಾನು ಭಾರತಕ್ಕೆ ಹಿಂದಿರುಗುವ ಭರವಸೆಯನ್ನು ಕಳೆದುಕೊಂಡಿದ್ದೇನು. ಆದರೆ ಈ ದಿನವನ್ನು ನೋಡಲು ಅದೃಷ್ಟವಂತೆ ಎಂದು ಅವರು ಹೇಳಿದ್ದಾರೆ.

2022 ರಲ್ಲಿ, ಸ್ಥಳೀಯ ಯೂಟ್ಯೂಬರ್ ವಲಿಯುಲ್ಲಾ ಮರೂಫ್ ರ ಜೊತೆ, ಹಮೀದಾ ಬಾನೋ 2002ರಲ್ಲಿ ಭಾರತವನ್ನು ತೊರೆದು ಬಂದ ತನ್ನ ಕಥೆಯನ್ನು ಹೇಳಿಕೊಂಡಿದ್ದರು. ನೇಮಕಾತಿ ಏಜೆಂಟ್ ಯೊಬ್ಬರು ದುಬೈನಲ್ಲಿ ಅಡುಗೆಯ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಇದರ ಬದಲಾಗಿ ಅವರನ್ನು ಮೋಸಗೊಳಿಸಿ ಪಾಕಿಸ್ತಾನಕ್ಕೆ ಕರೆ ತರಲಾಗಿತ್ತು. ಮರೂಫ್ ಅವರು  ಭಾರತದಲ್ಲಿನ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡಿದ್ದರು. ಅವರ ಮಗಳು ಯಾಸ್ಮೀನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದರು.

ಮರೂಫ್ ಅವರೊಂದಿಗಿನ ಮಾತುಕತೆಯಲ್ಲಿ, ಹಮೀದಾ ಬಾನೊ ಅವರು ಪಾಕಿಸ್ತಾನಕ್ಕೆ ಬರುವ ಮೊದಲು ಭಾರತದಲ್ಲಿ ತನ್ನ ಗಂಡನ ಮರಣದ ನಂತರ ತನ್ನ ನಾಲ್ಕು ಮಕ್ಕಳನ್ನು ಸಲಹುವುದಕ್ಕಾಗಿ ಕೆಲಸವನ್ನು ಹುಡುಕುತ್ತಿದ್ದೆ ಎಂದು ಹೇಳಿದ್ದರು. ಇಲ್ಲಿಗೆ ಬರುವ ಮೊದಲು ದೋಹಾ, ಕತಾರ್, ದುಬೈ ಮತ್ತು ಸೌದಿ ಅರೇಬಿಯಾದಲ್ಲಿ ಯಾವುದೇ ತೊಂದರೆಯಿಲ್ಲದೆ ಅಡುಗೆಯವಳಾಗಿ ಕೆಲಸ ಮಾಡಿದ್ದೆ ಎಂದು ತಿಳಿಸಿದ್ದರು.

ಪಾಕಿಸ್ತಾನದಲ್ಲಿ ತನ್ನ 22 ವರ್ಷಗಳ ವಾಸ್ತವ್ಯದ ಸಮಯದಲ್ಲಿ, ಬಾನೊ ಕರಾಚಿಯ ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾಗಿದ್ದರು. ಅವರು ಕೋವಿಡ್ -19 ನಿಂದ ನಿಧನರಾಗಿದ್ದರು. ಅಂದಿನಿಂದ ಅವರು ತನ್ನ ಮಲಮಗನೊಂದಿಗೆ ವಾಸಿಸುತ್ತಿದ್ದಳು.

ಇದನ್ನು ಓದಿ….ಶೋಷಿತ ಸಮುದಾಯಗಳು ಪರಿಣಾಮಕಾರಿ ಹೋರಾಟದ ಮಾರ್ಗ ಕಂಡುಕೊಳ್ಳಬೇಕು: ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...