Homeಮುಖಪುಟಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

- Advertisement -
- Advertisement -

ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ, ಹೋರಾಟಗಾರ ರೋನಾ ವಿಲ್ಸನ್ ತನ್ನ ಸೊಸೆಯ ಮದುವೆಗೆ ಹಾಜರಾಗುವುದಕ್ಕಾಗಿ ಕೋರಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯವು ನಿರಾಕರಿಸಿದೆ. ಅವರು ಭಾಗವಹಿಸಬೇಕಾಗಿದ್ದ ಮದುವೆ “ದೂರದ ಸಂಬಂಧಿ”ಯದ್ದಾಗಿದ್ದು, ಅಲ್ಲಿ ಅವರ ಉಪಸ್ಥಿತಿಯು ಅಗತ್ಯವಿಲ್ಲ ಎಂದು ನ್ಯಾಯಾಲಯವು ತನ್ನ ತೀರ್ಪನ್ನು ಸಮರ್ಥಿಸಿಕೊಂಡಿದೆ. ಭೀಮಾ ಕೊರೆಗಾಂವ್‌ ಪ್ರಕರಣ

2018ರ ಜೂನ್ ವೇಳೆಗೆ ದೆಹಲಿಯ ಅವರ ನಿವಾಸದ ಮೇಲೆ ದಾಳಿ ನಡೆಸಿ ಪ್ರಕರಣದ ತನಿಖೆ ನಡೆಸಿದ್ದ ಪುಣೆ ಪೊಲೀಸರು ರೋನ ವಿಲ್ಸಲ್ ಅವರನ್ನು ಬಂಧಿಸಿದ್ದರು. ನಂತರ ಪೊಲೀಸರು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದ್ದರು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು ಮಹಾರಾಷ್ಟ್ರದ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹೋರಾಟಗಾರ ವಿಲ್ಸನ್ ಅವರು ಇತ್ತೀಚೆಗೆ ತನ್ನ ಸೋದರ ಸೊಸೆಯ (ಅವನ ಸೋದರ ಸೊಸೆಯ ಮಗಳು) ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಜನವರಿ 6 ರಿಂದ 20, 2025 ರವರೆಗೆ ಮಧ್ಯಂತರ ಜಾಮೀನು ಕೋರಿದ್ದರು. ವಿಶೇಷ ನ್ಯಾಯಾಧೀಶ ಚಕೋರ್ ಬಾವಿಸ್ಕರ್ ಅವರು ಡಿಸೆಂಬರ್ 13 ರಂದು ಅವರ ಮನವಿಯನ್ನು ತಿರಸ್ಕರಿಸಿದ್ದಾರೆ.

ಮಂಗಳವಾರ ಲಭ್ಯವಾದ ಆದೇಶದಲ್ಲಿ, “ಆರೋಪಿಯು ತನ್ನ ಸೊಸೆಯ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಯಸುವುದಾಗಿ ಹೇಳಿದ್ದಾರೆ. ಆದರೆ, ಅದು ದೂರದ ಸಂಬಂಧವಾಗಿದ್ದು, ಅವರು ಮದುವೆಗೆ ಹಾಜರಾಗುವ ಅಗತ್ಯವಿಲ್ಲ” ಎಂದು ವಿಶೇಷ ನ್ಯಾಯಾಲಯವು ಮನವಿಯನ್ನು ತಿರಸ್ಕರಿಸಿದೆ. ಕಳೆದ ವಾರ, ಇದೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಹಿಂದೆ ಬಂಧಿತರಾಗಿದ್ದ ಮತ್ತೋರ್ವ ಆರೋಪಿ ಸಾಗರ್ ಗೋರ್ಖೆ ಅವರಿಗೆ ಕಾನೂನು ಪದವಿ ಪರೀಕ್ಷೆಗೆ ಹಾಜರಾಗಲು ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ. ಭೀಮಾ ಕೊರೆಗಾಂವ್‌ ಪ್ರಕರಣ

ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಲ್ಸನ್ ಮತ್ತು ಇತರ 14 ಹೋರಾಟಗಾರರು ಮತ್ತು ಶಿಕ್ಷಣತಜ್ಞರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಮಾವೇಶದ ಮರುದಿನ ಪುಣೆ ನಗರದ ಹೊರವಲಯದಲ್ಲಿರುವ ಕೋರೆಗಾಂವ್ ಭೀಮಾದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ ಪುಣೆ ಪೊಲೀಸರು, ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿತ್ತು ಎಂದು ಆರೋಪಿಸಿದ್ದರು. ಹಾಗಾಗಿ ನಂತರ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿತ್ತು.

ಇದನ್ನೂ ಓದಿ: ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ : ಪ್ರತಿಪಕ್ಷಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...