Homeಮುಖಪುಟಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

ಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲಾ ನ್ಯಾಯಾಲಯವು 14ನೇ ಶತಮಾನದ ಐತಿಹಾಸಿಕ ಅಟಾಲಾ ಮಸೀದಿಯ ಸಮೀಕ್ಷೆಗೆ ಆದೇಶಿಸಲು ಸೋಮವಾರ (ಡಿ.16) ನಿರಾಕರಿಸಿದೆ.

ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ಸೂಚಿಸಿದೆ. ಈ ಹಿನ್ನೆಲೆ, ಜೌನ್‌ಪುರ ಜಿಲ್ಲಾ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ ಎಂದು ವರದಿಯಾಗಿದೆ.

‘ಸ್ವರಾಜ್ ವಾಹಿನಿ ಅಸೋಸಿಯೇಷನ್‌’ ಎಂಬ ಹಿಂದುತ್ವ ಸಂಘಟನೆ ಮತ್ತು ಸಂತೋಷ್ ಕುಮಾರ್ ಮಿಶ್ರಾ ಎಂಬವರು ಪುರಾತನ ಮಸೀದಿಯನ್ನು ‘ಅಟಾಲಾ ದೇವಿ ಮಂದಿರ’ ಎಂದು ಘೋಷಿಸಲು ಕೋರಿದ್ದರು. ಸನಾತನದ ಧರ್ಮದ ಅನುಯಾಯಿಗಳು ಅಲ್ಲಿ ಪೂಜೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಮಸೀದಿಯನ್ನು ಮಂದಿರ ಎಂದು ಘೋಷಿಸುವಂತೆ ಕೋರಿ ಈ ಹಿಂದೆ ಹಿಂದುತ್ವ ಸಂಘಟನೆಗಳು ಸಲ್ಲಿಸಿರುವ ಬಹುತೇಕ ಅರ್ಜಿಗಳನ್ನು ವಿಚಾರಣೆ ನಡೆಸಿರುವ ದೇಶದ ವಿವಿಧ ನ್ಯಾಯಾಲಯಗಳು, ಮಸೀದಿಗಳ ಸಮೀಕ್ಷೆಗೆ ಆದೇಶಿಸಿವೆ. ಡಿಸೆಂಬರ್ 12ರ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ.

ಜೌನ್‌ಪುರ ಜಿಲ್ಲಾ ನ್ಯಾಯಾಲಯದ ಸಿವಿಲ್ ಜಡ್ಜ್ (ಜೆಡಿ) ಸುಧಾ ಶರ್ಮಾ ಅವರು ಪ್ರಕರಣ ಮುಂದಿನ ವಿಚಾರಣೆಯನ್ನು 2025ರ ಮಾರ್ಚ್ 2ಕ್ಕೆ ಮುಂದೂಡಿದ್ದಾರೆ. ಇದನ್ನೂ 12 ದಿನಗಳ ಮುಂಚೆ ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಬಾಬರಿ ಮಸೀದಿಯ ಜಾಗವನ್ನು ರಾಮಮಂದಿರಕ್ಕೆ ಬಿಟ್ಟುಕೊಟ್ಟು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ದೇಶದಲ್ಲಿ ಮಸೀದಿಯಡಿ ಮಂದಿರ ಹುಡುಕುವ ಪರಿಪಾಠ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಮಥುರಾದ ಶಾಹಿ ಈದ್ಗಾ-ಕೃಷ್ಣ ಜನ್ಮಭೂಮಿ, ವಾರಣಾಸಿಯ ಜ್ಞಾನವಾಪಿ, ಸಂಭಾಲ್‌ನ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಶರೀಫ್ ಸೇರಿದಂತೆ ವಿವಿಧ ಮಸೀದಿ ದರ್ಗಾಗಳನ್ನು ದೇವಸ್ಥಾನವೆಂದು ಘೋಷಿಸಲು ಕೋರಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸಿದೆ.

1991ರ ಆರಾಧನಾ ಸ್ಥಳಗಳ ಕಾಯ್ದೆ ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಆರಾಧನಾ ಸ್ಥಳಗಳು ಹೇಗಿತ್ತೋ, ಅದೇ ಸ್ವರೂಪದಲ್ಲಿ ಮುಂದುವರೆಸಲು ಹೇಳುತ್ತದೆ. ಆದರೆ, ನ್ಯಾಯಾಲಯದ ಸಮೀಕ್ಷೆ ಆದೇಶಗಳು ಈ ಕಾನೂನಿಗೆ ವಿರುದ್ದವಾಗಿದೆ. ಈ ಕಳವಳಕಾರಿ ಬೆಳವಣಿಗೆಯ ವಿರುದ್ದ ಹಲವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಗಳ ಸಮೀಕ್ಷೆಗೆ ಆದೇಶಿಸುವುದಕ್ಕೆ ಮಧ್ಯಂತರ ತಡೆ ನೀಡಿದೆ. ಆರಾಧನಾ ಸ್ಥಳಗಳ ಕಾಯ್ದೆಯನ್ನು ಪಾಲಿಸುವಂತೆ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ. ಡಿಸೆಂಬರ್ 12ರಂದು ನೀಡಿರುವ ಈ ಆದೇಶ ಅತ್ಯಂತ ಮಹತ್ವದ್ದಾಗಿದೆ.

ಮತ್ತೊಂದೆಡೆ ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿಯೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿವೆ. ಅದು ಫೆಬ್ರವರಿಯಲ್ಲಿ ವಿಚಾರಣೆಗೆ ಬರಲಿದೆ.

ಇದನ್ನೂ ಓದಿ : ಪರ್ಭಾನಿ ಹಿಂಸಾಚಾರ: ಪೊಲೀಸ್ ಚಿತ್ರಹಿಂಸೆಯೇ ಕಾನೂನು ವಿದ್ಯಾರ್ಥಿಯ ಸಾವಿಗೆ ಕಾರಣ; ದೃಢಪಡಿಸಿದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...