Homeಮುಖಪುಟಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

ಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲಾ ನ್ಯಾಯಾಲಯವು 14ನೇ ಶತಮಾನದ ಐತಿಹಾಸಿಕ ಅಟಾಲಾ ಮಸೀದಿಯ ಸಮೀಕ್ಷೆಗೆ ಆದೇಶಿಸಲು ಸೋಮವಾರ (ಡಿ.16) ನಿರಾಕರಿಸಿದೆ.

ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ಸೂಚಿಸಿದೆ. ಈ ಹಿನ್ನೆಲೆ, ಜೌನ್‌ಪುರ ಜಿಲ್ಲಾ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ ಎಂದು ವರದಿಯಾಗಿದೆ.

‘ಸ್ವರಾಜ್ ವಾಹಿನಿ ಅಸೋಸಿಯೇಷನ್‌’ ಎಂಬ ಹಿಂದುತ್ವ ಸಂಘಟನೆ ಮತ್ತು ಸಂತೋಷ್ ಕುಮಾರ್ ಮಿಶ್ರಾ ಎಂಬವರು ಪುರಾತನ ಮಸೀದಿಯನ್ನು ‘ಅಟಾಲಾ ದೇವಿ ಮಂದಿರ’ ಎಂದು ಘೋಷಿಸಲು ಕೋರಿದ್ದರು. ಸನಾತನದ ಧರ್ಮದ ಅನುಯಾಯಿಗಳು ಅಲ್ಲಿ ಪೂಜೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಮಸೀದಿಯನ್ನು ಮಂದಿರ ಎಂದು ಘೋಷಿಸುವಂತೆ ಕೋರಿ ಈ ಹಿಂದೆ ಹಿಂದುತ್ವ ಸಂಘಟನೆಗಳು ಸಲ್ಲಿಸಿರುವ ಬಹುತೇಕ ಅರ್ಜಿಗಳನ್ನು ವಿಚಾರಣೆ ನಡೆಸಿರುವ ದೇಶದ ವಿವಿಧ ನ್ಯಾಯಾಲಯಗಳು, ಮಸೀದಿಗಳ ಸಮೀಕ್ಷೆಗೆ ಆದೇಶಿಸಿವೆ. ಡಿಸೆಂಬರ್ 12ರ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ.

ಜೌನ್‌ಪುರ ಜಿಲ್ಲಾ ನ್ಯಾಯಾಲಯದ ಸಿವಿಲ್ ಜಡ್ಜ್ (ಜೆಡಿ) ಸುಧಾ ಶರ್ಮಾ ಅವರು ಪ್ರಕರಣ ಮುಂದಿನ ವಿಚಾರಣೆಯನ್ನು 2025ರ ಮಾರ್ಚ್ 2ಕ್ಕೆ ಮುಂದೂಡಿದ್ದಾರೆ. ಇದನ್ನೂ 12 ದಿನಗಳ ಮುಂಚೆ ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಬಾಬರಿ ಮಸೀದಿಯ ಜಾಗವನ್ನು ರಾಮಮಂದಿರಕ್ಕೆ ಬಿಟ್ಟುಕೊಟ್ಟು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ದೇಶದಲ್ಲಿ ಮಸೀದಿಯಡಿ ಮಂದಿರ ಹುಡುಕುವ ಪರಿಪಾಠ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಮಥುರಾದ ಶಾಹಿ ಈದ್ಗಾ-ಕೃಷ್ಣ ಜನ್ಮಭೂಮಿ, ವಾರಣಾಸಿಯ ಜ್ಞಾನವಾಪಿ, ಸಂಭಾಲ್‌ನ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಶರೀಫ್ ಸೇರಿದಂತೆ ವಿವಿಧ ಮಸೀದಿ ದರ್ಗಾಗಳನ್ನು ದೇವಸ್ಥಾನವೆಂದು ಘೋಷಿಸಲು ಕೋರಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸಿದೆ.

1991ರ ಆರಾಧನಾ ಸ್ಥಳಗಳ ಕಾಯ್ದೆ ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಆರಾಧನಾ ಸ್ಥಳಗಳು ಹೇಗಿತ್ತೋ, ಅದೇ ಸ್ವರೂಪದಲ್ಲಿ ಮುಂದುವರೆಸಲು ಹೇಳುತ್ತದೆ. ಆದರೆ, ನ್ಯಾಯಾಲಯದ ಸಮೀಕ್ಷೆ ಆದೇಶಗಳು ಈ ಕಾನೂನಿಗೆ ವಿರುದ್ದವಾಗಿದೆ. ಈ ಕಳವಳಕಾರಿ ಬೆಳವಣಿಗೆಯ ವಿರುದ್ದ ಹಲವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಗಳ ಸಮೀಕ್ಷೆಗೆ ಆದೇಶಿಸುವುದಕ್ಕೆ ಮಧ್ಯಂತರ ತಡೆ ನೀಡಿದೆ. ಆರಾಧನಾ ಸ್ಥಳಗಳ ಕಾಯ್ದೆಯನ್ನು ಪಾಲಿಸುವಂತೆ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ. ಡಿಸೆಂಬರ್ 12ರಂದು ನೀಡಿರುವ ಈ ಆದೇಶ ಅತ್ಯಂತ ಮಹತ್ವದ್ದಾಗಿದೆ.

ಮತ್ತೊಂದೆಡೆ ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿಯೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿವೆ. ಅದು ಫೆಬ್ರವರಿಯಲ್ಲಿ ವಿಚಾರಣೆಗೆ ಬರಲಿದೆ.

ಇದನ್ನೂ ಓದಿ : ಪರ್ಭಾನಿ ಹಿಂಸಾಚಾರ: ಪೊಲೀಸ್ ಚಿತ್ರಹಿಂಸೆಯೇ ಕಾನೂನು ವಿದ್ಯಾರ್ಥಿಯ ಸಾವಿಗೆ ಕಾರಣ; ದೃಢಪಡಿಸಿದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...