Homeಮುಖಪುಟಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

ಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲಾ ನ್ಯಾಯಾಲಯವು 14ನೇ ಶತಮಾನದ ಐತಿಹಾಸಿಕ ಅಟಾಲಾ ಮಸೀದಿಯ ಸಮೀಕ್ಷೆಗೆ ಆದೇಶಿಸಲು ಸೋಮವಾರ (ಡಿ.16) ನಿರಾಕರಿಸಿದೆ.

ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ಸೂಚಿಸಿದೆ. ಈ ಹಿನ್ನೆಲೆ, ಜೌನ್‌ಪುರ ಜಿಲ್ಲಾ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ ಎಂದು ವರದಿಯಾಗಿದೆ.

‘ಸ್ವರಾಜ್ ವಾಹಿನಿ ಅಸೋಸಿಯೇಷನ್‌’ ಎಂಬ ಹಿಂದುತ್ವ ಸಂಘಟನೆ ಮತ್ತು ಸಂತೋಷ್ ಕುಮಾರ್ ಮಿಶ್ರಾ ಎಂಬವರು ಪುರಾತನ ಮಸೀದಿಯನ್ನು ‘ಅಟಾಲಾ ದೇವಿ ಮಂದಿರ’ ಎಂದು ಘೋಷಿಸಲು ಕೋರಿದ್ದರು. ಸನಾತನದ ಧರ್ಮದ ಅನುಯಾಯಿಗಳು ಅಲ್ಲಿ ಪೂಜೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ್ದರು.

ಮಸೀದಿಯನ್ನು ಮಂದಿರ ಎಂದು ಘೋಷಿಸುವಂತೆ ಕೋರಿ ಈ ಹಿಂದೆ ಹಿಂದುತ್ವ ಸಂಘಟನೆಗಳು ಸಲ್ಲಿಸಿರುವ ಬಹುತೇಕ ಅರ್ಜಿಗಳನ್ನು ವಿಚಾರಣೆ ನಡೆಸಿರುವ ದೇಶದ ವಿವಿಧ ನ್ಯಾಯಾಲಯಗಳು, ಮಸೀದಿಗಳ ಸಮೀಕ್ಷೆಗೆ ಆದೇಶಿಸಿವೆ. ಡಿಸೆಂಬರ್ 12ರ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದೆ.

ಜೌನ್‌ಪುರ ಜಿಲ್ಲಾ ನ್ಯಾಯಾಲಯದ ಸಿವಿಲ್ ಜಡ್ಜ್ (ಜೆಡಿ) ಸುಧಾ ಶರ್ಮಾ ಅವರು ಪ್ರಕರಣ ಮುಂದಿನ ವಿಚಾರಣೆಯನ್ನು 2025ರ ಮಾರ್ಚ್ 2ಕ್ಕೆ ಮುಂದೂಡಿದ್ದಾರೆ. ಇದನ್ನೂ 12 ದಿನಗಳ ಮುಂಚೆ ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಬಾಬರಿ ಮಸೀದಿಯ ಜಾಗವನ್ನು ರಾಮಮಂದಿರಕ್ಕೆ ಬಿಟ್ಟುಕೊಟ್ಟು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕ ದೇಶದಲ್ಲಿ ಮಸೀದಿಯಡಿ ಮಂದಿರ ಹುಡುಕುವ ಪರಿಪಾಠ ಹೆಚ್ಚಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಮಥುರಾದ ಶಾಹಿ ಈದ್ಗಾ-ಕೃಷ್ಣ ಜನ್ಮಭೂಮಿ, ವಾರಣಾಸಿಯ ಜ್ಞಾನವಾಪಿ, ಸಂಭಾಲ್‌ನ ಶಾಹಿ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಶರೀಫ್ ಸೇರಿದಂತೆ ವಿವಿಧ ಮಸೀದಿ ದರ್ಗಾಗಳನ್ನು ದೇವಸ್ಥಾನವೆಂದು ಘೋಷಿಸಲು ಕೋರಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಮೀಕ್ಷೆಗೆ ಆದೇಶಿಸಿದೆ.

1991ರ ಆರಾಧನಾ ಸ್ಥಳಗಳ ಕಾಯ್ದೆ ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಆರಾಧನಾ ಸ್ಥಳಗಳು ಹೇಗಿತ್ತೋ, ಅದೇ ಸ್ವರೂಪದಲ್ಲಿ ಮುಂದುವರೆಸಲು ಹೇಳುತ್ತದೆ. ಆದರೆ, ನ್ಯಾಯಾಲಯದ ಸಮೀಕ್ಷೆ ಆದೇಶಗಳು ಈ ಕಾನೂನಿಗೆ ವಿರುದ್ದವಾಗಿದೆ. ಈ ಕಳವಳಕಾರಿ ಬೆಳವಣಿಗೆಯ ವಿರುದ್ದ ಹಲವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಗಳ ಸಮೀಕ್ಷೆಗೆ ಆದೇಶಿಸುವುದಕ್ಕೆ ಮಧ್ಯಂತರ ತಡೆ ನೀಡಿದೆ. ಆರಾಧನಾ ಸ್ಥಳಗಳ ಕಾಯ್ದೆಯನ್ನು ಪಾಲಿಸುವಂತೆ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ. ಡಿಸೆಂಬರ್ 12ರಂದು ನೀಡಿರುವ ಈ ಆದೇಶ ಅತ್ಯಂತ ಮಹತ್ವದ್ದಾಗಿದೆ.

ಮತ್ತೊಂದೆಡೆ ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿಯೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿವೆ. ಅದು ಫೆಬ್ರವರಿಯಲ್ಲಿ ವಿಚಾರಣೆಗೆ ಬರಲಿದೆ.

ಇದನ್ನೂ ಓದಿ : ಪರ್ಭಾನಿ ಹಿಂಸಾಚಾರ: ಪೊಲೀಸ್ ಚಿತ್ರಹಿಂಸೆಯೇ ಕಾನೂನು ವಿದ್ಯಾರ್ಥಿಯ ಸಾವಿಗೆ ಕಾರಣ; ದೃಢಪಡಿಸಿದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...